Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:20 - ಕನ್ನಡ ಸತ್ಯವೇದವು C.L. Bible (BSI)

20 ಆಗ ಯೋಬನು ಎದ್ದು ನಿಂತು, ದುಃಖವನ್ನು ತಾಳಲಾರದೆ ತನ್ನ ಮೇಲಂಗಿಯನ್ನು ಹರಿದುಬಿಟ್ಟ, ತಲೆಯನ್ನು ಬೋಳಿಸಿಕೊಂಡ, ನೆಲದ ಮೇಲೆ ಬಿದ್ದು, ದೇವರಿಗೆ ಸಾಷ್ಟಾಂಗವೆರಗಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು, ತಲೆ ಬೋಳಿಸಿಕೊಂಡು ನೆಲದ ಮೇಲೆ ಅಡ್ಡಬಿದ್ದು ದೇವರನ್ನು ಆರಾಧಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು ತಲೆಬೋಳಿಸಿಕೊಂಡು ನೆಲದಲ್ಲಿ ಅಡ್ಡಬಿದ್ದು ನಮಸ್ಕರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ಯೋಬನು ತನ್ನ ಮೇಲಂಗಿಯನ್ನು ಹರಿದುಕೊಂಡು, ತಲೆಯನ್ನು ಬೋಳಿಸಿಕೊಂಡು, ನೆಲದ ಮೇಲೆ ಮೊಣಕಾಲೂರಿ ದೇವರಿಗೆ ಸ್ತೋತ್ರಸಲ್ಲಿಸುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಯೋಬನು ಎದ್ದು ತನ್ನ ಮೇಲಂಗಿಯನ್ನು ಹರಿದುಕೊಂಡನು. ನಂತರ ತನ್ನ ತಲೆ ಬೋಳಿಸಿಕೊಂಡು, ನೆಲಕ್ಕೆ ಬಿದ್ದು ಸಾಷ್ಟಾಂಗವೆರಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:20
15 ತಿಳಿವುಗಳ ಹೋಲಿಕೆ  

ದೇವರ ಪರಾಕ್ರಮಕ್ಕೆ ತಗ್ಗಿ ನಮ್ರರಾಗಿ ನಡೆದುಕೊಳ್ಳಿ. ಆಗ ಅವರು ನಿಮ್ಮನ್ನು ಸಕಾಲದಲ್ಲಿ ಮೇಲಕ್ಕೆತ್ತುವರು;


ಈ ಸಮಾಚಾರವನ್ನು ಕೇಳಿದೊಡನೆ ನಾನು ಸಿಟ್ಟಿನಿಂದ ಬಟ್ಟೆಗಳನ್ನೂ ಮೇಲಂಗಿಯನ್ನೂ ಹರಿದುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆ.


ದುಃಖ ತಾಳಲಾಗದೆ ತನ್ನ ಬಟ್ಟೆಯನ್ನು ಹರಿದುಕೊಂಡ; ನಡುವಿಗೆ ಗೋಣಿತಟ್ಟನ್ನು ಸುತ್ತಿಕೊಂಡ; ತನ್ನ ಮಗನಿಗಾಗಿ ಬಹುದಿನಗಳವರೆಗೂ ಅತ್ತು ಪ್ರಲಾಪಿಸಿದ.


ರೂಬೇನನು ಮರಳಿ ಆ ಬಾವಿಯ ಬಳಿಗೆ ಬಂದು ನೋಡಿದನು. ಅದರಲ್ಲಿ ಜೋಸೆಫನು ಇರಲಿಲ್ಲ.


“ನೀವು ಹೀಗೆ ಅಪರಾಧಮಾಡಿ, ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ಅವರನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನಪಾನಗಳನ್ನು ಬಿಟ್ಟು ನಲವತ್ತು ದಿನಗಳು ಹಗಲಿರುಳು ಸರ್ವೇಶ್ವರನ ಸನ್ನಿಧಿಯಲ್ಲೇ ಬಿದ್ದಿದ್ದೆ.


ಅನಂತರ ಅವರು ಅಲ್ಲಿಂದ ಇನ್ನೂ ಸ್ವಲ್ಪ ಮುಂದಕ್ಕೆ ಹೋಗಿ, ನೆಲದ ಮೇಲೆ ಅಧೋಮುಖವಾಗಿ ಬಿದ್ದು ಪ್ರಾರ್ಥನೆಮಾಡಿದರು. “ನನ್ನ ಪಿತನೇ, ಸಾಧ್ಯವಾದರೆ ಈ ಕಷ್ಟದ ಕೊಡವು ನನ್ನಿಂದ ದೂರವಾಗಲಿ, ಆದರೂ ನನ್ನ ಚಿತ್ತದಂತೆ ಅಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.


ಇಸ್ರಯೇಲರೆಲ್ಲರು ಬೆಂಕಿ ಇಳಿದು ಬರುವುದನ್ನೂ ಸರ್ವೇಶ್ವರನ ತೇಜಸ್ಸು ಆಲಯದಲ್ಲಿರುವುದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿದರು; “ಸರ್ವೇಶ್ವರ ಒಳ್ಳೆಯವರು; ಅವರ ಅಚಲ ಪ್ರೀತಿ ಶಾಶ್ವತ” ಎಂದು ಕೃತಜ್ಞತಾಸ್ತುತಿ ಮಾಡಿದರು.


ಆಗ ಯೆಹೋಶುವನು ಮತ್ತು ಇಸ್ರಯೇಲರ ಹಿರಿಯರು ದುಃಖ ತಾಳಲಾರದೆ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡು ಸಾಯಂಕಾಲದವರೆಗೆ ಸರ್ವೇಶ್ವರನ ಮಂಜೂಷದ ಮುಂದೆ ಅಧೋಮುಖರಾಗಿ ಬಿದ್ದಿದ್ದರು.


ಎಲೀಷನು ಅದನ್ನು ನೋಡುತ್ತಾ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಯೇಲರಿಗೆ ರಥರಥಾಶ್ವಗಳಾಗಿದ್ದವರೇ,” ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದಮೇಲೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು.


ಆಗ ತಟ್ಟನೆ ಅರಣ್ಯ ಕಡೆಯಿಂದ ಬಿರುಗಾಳಿ ಎದ್ದಿತು; ನಾಲ್ಕು ಕಡೆಯಿಂದಲೂ ಮನೆಗೆ ಬಡಿಯಿತು. ಮನೆ ಕುಸಿದುಬಿತ್ತು. ಯುವಕಯುವತಿಯರೆಲ್ಲ ಸತ್ತುಹೋದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ತಂದಿದ್ದೇನೆ,” ಎಂದು ತಿಳಿಸಿದನು.


ದೂರದಿಂದ ನೋಡಿದಾಗ ಆತನ ಗುರುತುಹಚ್ಚಲು ಕೂಡ ಅವರಿಂದಾ ಆಗಲಿಲ್ಲ. ಎಂದೇ ಅವರು ಗಟ್ಟಿಯಾಗಿ ಅತ್ತರು. ದುಃಖ ತಾಳಲಾರದೆ ತಂತಮ್ಮ ಮೇಲಂಗಿಯನ್ನು ಸೀಳಿಕೊಂಡರು.


“ಎಲೈ ಜೆರುಸಲೇಮೇ ! ತಲೆಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಡು ಬೋಳುಗುಡ್ಡಗಳಲ್ಲಿ ಶೋಕಗೀತೆಯನ್ನು ಹಾಡು. ಏಕೆಂದರೆ ಸರ್ವೇಶ್ವರನಾದ ನಾನು ಕೋಪಗೊಂಡು, ನಿರಾಕರಿಸಿ, ತ್ಯಜಿಸಿಬಿಟ್ಟಿದ್ದೇನೆ ಈ ವಂಶವನ್ನು,”


ನಿಮ್ಮ ಉಡುಪುಗಳನ್ನು ಅಲ್ಲ, ಹೃದಯಗಳನ್ನು ಸೀಳಿರಿ: ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಕಡೆಗೆ ತಿರುಗಿಕೊಳ್ಳಿ; ಅವರು ದಯಾವಂತರು, ಕರುಣಾಮೂರ್ತಿ, ಸಹನಶೀಲ, ಪ್ರೀತಿಮಯ, ವಿಧಿಸಬೇಕಾಗಿದ್ದ ದಂಡನೆಗಾಗಿ ಮನನೊಂದುಕೊಳ್ಳುವಂಥವರು.


ಸರ್ವೇಶ್ವರ ಸ್ವಾಮಿ ತಮ್ಮನ್ನು ಭೇಟಿಮಾಡಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡಿದ್ದಾರೆಂದು ತಿಳಿದ ಆ ಇಸ್ರಯೇಲರು ತಲೆಬಾಗಿ ಆರಾಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು