Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:3 - ಕನ್ನಡ ಸತ್ಯವೇದವು C.L. Bible (BSI)

3 ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಮತ್ತು ಐನೂರು ಕತ್ತೆಗಳು ಅವನಿಗಿದ್ದವು. ಜೊತೆಗೆ, ಆತನಿಗಿದ್ದ ಸೇವಕರೋ ಹಲವಾರು. ಮೂಡಣ ನಾಡಿನವರಲ್ಲಿ ಆತನೇ ದೊಡ್ಡ ಐಶ್ವರ್ಯವಂತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನಿಗೆ ಏಳು ಸಾವಿರ ಕುರಿಗಳೂ, ಮೂರು ಸಾವಿರ ಒಂಟೆಗಳೂ, ಐನೂರು ಜೋಡಿ ಎತ್ತುಗಳೂ, ಐನೂರು ಹೆಣ್ಣು ಕತ್ತೆಗಳೂ, ಬಹುಮಂದಿ ಸೇವಕರೂ ಇದ್ದುದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವತ್ತುಳ್ಳವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನಿಗೆ ಏಳು ಸಾವಿರ ಕುರಿಗಳೂ ಮೂರು ಸಾವಿರ ಒಂಟೆಗಳೂ ಐನೂರು ಜೋಡಿ ಎತ್ತುಗಳೂ ಐನೂರು ಹೆಣ್ಣು ಕತ್ತೆಗಳೂ ಅನೇಕಾನೇಕ ಸೇವಕರೂ ಇದ್ದದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವಾಸ್ತ್ಯವುಳ್ಳವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೋಬನಿಗೆ ಏಳು ಸಾವಿರ ಕುರಿಗಳೂ ಮೂರು ಸಾವಿರ ಒಂಟೆಗಳೂ ಒಂದು ಸಾವಿರ ಎತ್ತುಗಳೂ ಮತ್ತು ಐನೂರು ಹೆಣ್ಣುಕತ್ತೆಗಳೂ ಇದ್ದವು. ಅವನಿಗೆ ಅನೇಕ ಮಂದಿ ಸೇವಕರಿದ್ದರು. ಪೂರ್ವ ದೇಶದವರಲ್ಲೆಲ್ಲಾ ಯೋಬನು ಮಹಾ ಐಶ್ವರ್ಯವಂತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನಿಗೆ ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಐನೂರು ಕತ್ತೆಗಳು ಮತ್ತು ಅನೇಕ ಕೆಲಸಗಾರರಿದ್ದರು. ಅವನು ಪೂರ್ವದೇಶದ ಜನರೆಲ್ಲರಲ್ಲಿಯೇ ಹೆಚ್ಚು ಐಶ್ವರ್ಯವುಳ್ಳವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:3
34 ತಿಳಿವುಗಳ ಹೋಲಿಕೆ  

ನಾನು ಅವರಿಗೆ ಮಾರ್ಗದರ್ಶಕನಾಗಿದ್ದೆ ಸೇನೆಗಳ ಮಧ್ಯೆ ರಾಜನಂತೆ ಮಂಡಿಸಿದ್ದೆ ದುಃಖಿತರನು ಸುಧಾರಕನಂತೆ ಸಂತೈಸುತ್ತಿದ್ದೆ.


ಸರ್ವೇಶ್ವರ ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಅಧಿಕಗೊಳಿಸಿ ಆಶೀರ್ವದಿಸಿದರು.


ಇವರು ಮಾಡುತ್ತಿದ್ದ ಬಿತ್ತನೆಯನ್ನು ಮಿದ್ಯಾನ್ಯರು, ಅಮಾಲೇಕ್ಯರು, ಹಾಗು ಪೂರ್ವದೇಶದವರು ಇವರಿಗೆ ವಿರುದ್ಧ ದಂಡೆತ್ತಿ ಬಂದು ಹಾಳು ಮಾಡುತ್ತಿದ್ದರು.


ಅವನ ಜ್ಞಾನ ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲು, ಈಜಿಪ್ಟರ ಸರ್ವಜ್ಞಾನಕ್ಕಿಂತಲು ಮಿಗಿಲಾಗಿತ್ತು.


“ಬಾಲಾಕನು ನನ್ನನ್ನು ಕರೆಸಿದ ಅರಾಮಿನಿಂದ ಮೋವಾಬರಸ ನನ್ನ ಬರಮಾಡಿದ ಮೂಡಲಗುಡ್ಡೆಗಳಿಂದ. ‘ನನ್ನ ಪರವಾಗಿ ಯಕೋಬವಂಶಜರನ್ನು ಶಪಿಸೆಂದ’ ‘ಹಾಕು ಇಸ್ರಯೇಲರಿಗೆ ಧಿಕ್ಕಾರ’ ಎಂದು ಹೇಳಿದ.


ಸರ್ವೇಶ್ವರನ ಆಶೀರ್ವಾದ ಭಾಗ್ಯದಾಯಕ; ಅದಕ್ಕೆ ಬಾಹಿರವಾದುದು ಕಷ್ಟದುಃಖ.


ಅವನು ಆಕೆಯನ್ನು ಅರಮನೆಗೆ ಕರೆಸಿದನು. ಆಕೆಯ ನಿಮಿತ್ತ ಅಬ್ರಾಮನಿಗೆ ಸತ್ಕಾರ ದೊರಕಿತು; ಕುರಿಮೇಕೆಗಳು, ದನಕರುಗಳು, ಗಂಡುಹೆಣ್ಣು ಕತ್ತೆಗಳು, ದಾಸದಾಸಿಯರು ಹಾಗು ಒಂಟೆಗಳು ದೊರೆತವು.


ತನ್ನ ಹೆಂಡತಿ ಸಾರಯಳನ್ನು, ತನ್ನ ತಮ್ಮನ ಮಗನಾದ ಲೋಟನನ್ನು, ತಾನು ಮತ್ತು ಲೋಟನು ಹಾರಾನಿನಲ್ಲಿ ಗಳಿಸಿದ ಆಸ್ತಿಪಾಸ್ತಿಯನ್ನು ಹಾಗು ದಾಸದಾಸಿಯರನ್ನು ತೆಗೆದುಕೊಂಡು ಹೋಗಿ ಕಾನಾನ್ ನಾಡನ್ನು ಸೇರಿದನು.


ಬಳಿಕ ಯಕೋಬನು ಪ್ರಯಾಣವನ್ನು ಮುಂದುವರಿಸುತ್ತಾ ಮೂಡಣದವರ ನಾಡಿಗೆ ಬಂದನು.


ಈ ಕಾರಣ ಅವರಿಬ್ಬರ ಜೀವನಕ್ಕೆ ಅಲ್ಲಿ ಸ್ಥಳ ಸಾಲದೆಹೋಯಿತು. ಇಬ್ಬರಿಗೂ ಪಶುಪ್ರಾಣಿಗಳು ಹೇರಳವಾಗಿದ್ದುದರಿಂದ ಒಂದೇ ಸ್ಥಳದಲ್ಲಿ ವಾಸವಾಗಿರಲು ಆಗಲಿಲ್ಲ.


ಇದಲ್ಲದೆ, ಪಟ್ಟಣಗಳನ್ನು ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿಮಿತವಾಗಿತ್ತು.


ಅವನಿಗೆ ಇಳಕಲಿನ ಪ್ರದೇಶದಲ್ಲೂ ತಪ್ಪಲ ಸೀಮೆಯಲ್ಲೂ ಅಲ್ಲದೆ ಅಡವಿಯಲ್ಲೂ ಪಶುಪ್ರಾಣಿಗಳ ದೊಡ್ಡಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಹಲವು ಬಾವಿಗಳನ್ನು ತೋಡಿಸಿದನು. ವ್ಯವಸಾಯದಲ್ಲಿ ಅವನಿಗೆ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿತೋಟಗಳ ಕೆಲಸಗಾರರನ್ನು ನೇಮಿಸಿದನು.


ಅನೇಕ ಕುರಿಹಿಂಡುಗಳುಳ್ಳವನಾಗಿದ್ದ ಮೋವಾಬ್ಯರ ಅರಸ ಮೇಷನೆಂಬವನು ಇಸ್ರಯೇಲರ ಅರಸನಿಗೆ ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಗರುಗಳ ಉಣ್ಣೆಯನ್ನು ಕಪ್ಪವಾಗಿ ಕೊಡುತ್ತಿದ್ದನು.


ಕರ್ಮೆಲಿನಲ್ಲಿ ಸ್ವಂತ ಸೊತ್ತು ಪಡೆದಿದ್ದ ಒಬ್ಬ ಮನುಷ್ಯ ಮಾವೋನಿನಲ್ಲಿ ವಾಸಿಸುತ್ತಿದ್ದನು. ಅವನ ಹೆಸರು ನಾಬಾಲ.


ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಮೇತ ಮಿಡತೆಗಳಂತೆ ಗುಂಪು ಗುಂಪಾಗಿ ಬರುತ್ತಿದ್ದರು. ಅವರ ಒಂಟೆಗಳೂ ಅಸಂಖ್ಯವಾಗಿದ್ದವು. ಆ ಗುಂಪುಗಳಿಂದ ನಾಡೆಲ್ಲ ನಾಶವಾಗುತ್ತಿತ್ತು.


ಅವರ ಕುರಿದನಗಳೂ ಆಸ್ತಿಪಾಸ್ತಿಯೂ ಪಶುಪ್ರಾಣಿಗಳೂ ನಮ್ಮವುಗಳೇ ಆಗುತ್ತವಲ್ಲವೆ? ಆದ್ದರಿಂದ ಅವರು ನಮ್ಮಲ್ಲಿ ವಾಸಮಾಡುವಂತೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ".


ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗ ಇಸಾಕನ ಬಳಿಯಿಂದ ದೂರಕ್ಕೆ ಪೂರ್ವದಿಕ್ಕಿನಲ್ಲಿದ್ದ ಕೆದೆಮ್ ನಾಡಿಗೆ, ಕಳಿಸಿಬಿಟ್ಟನು.


ಜೆಬಹ ಮತ್ತು ಚಲ್ಮುನ್ನ ಎಂಬವರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಪೂರ್ವದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಯೋಧರು ಹತರಾಗಿ ಉಳಿದವರು ಇಷ್ಟೇ ಮಂದಿ.


ಮಿದ್ಯಾನ್ಯರೂ ಅಮಾಲೇಕ್ಯರೂ ಪೂರ್ವದೇಶದವರೂ ಮಿಡಿತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.


ಸ್ತ್ರೀಪುರುಷರಲ್ಲಿ ಒಬ್ಬರನ್ನೂ ಉಳಿಸದೆ ದೇಶದ ನಿವಾಸಿಗಳನ್ನೆಲ್ಲ ಕೊಂದು, ದನ, ಕುರಿ, ಕತ್ತೆ, ಒಂಟೆ, ಉಡುಗೊರೆ ಇವುಗಳನ್ನು ತೆಗೆದುಕೊಂಡು ದಾವೀದನು ಆಕೀಷನ ಬಳಿಗೆ ಹೋಗುತ್ತಿದ್ದನು.


ಆತನ ಗಂಡು ಮಕ್ಕಳು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ಏರ್ಪಡಿಸುತ್ತಿದ್ದರು. ತಮ್ಮ ಮೂವರು ತಂಗಿಯರನ್ನೂ ಆ ಭೋಜನಕ್ಕೆ ಆಹ್ವಾನಿಸುತ್ತಿದ್ದರು.


ನೀವು ಆತನಿಗೂ ಆತನ ಎಲ್ಲ ಆಸ್ತಿಪಾಸ್ತಿಗೂ ಬೇಲಿ ಹಾಕಿ ಭದ್ರಪಡಿಸಿದ್ದೀರಲ್ಲವೇ? ಆತನು ಕೈ ಹಾಕಿದ ಕೆಲಸ ಸಫಲವಾಗುವಂತೆ ಮಾಡಿದ್ದೀರಲ್ಲವೆ? ಎಂದೇ ಆತನ ಸಿರಿಸಂಪತ್ತು ಈ ನಾಡಿನಲ್ಲಿ ಬೆಳೆಯುತ್ತಾ ಬಂದಿದೆ.


ನಿಮ್ಮ ಪ್ರಶ್ನೆ ಇದು: “ಆ ಖದೀಮನ ಮನೆ ಏನಾಯಿತು? ಆ ದುರುಳರು ನಿವಾಸಿಸುತ್ತಿದ್ದ ಗುಡಾರ ಏನಾಯಿತು?”


ನನ್ನ ಆಸ್ತಿ ಅಪಾರವೆಂದು ಕೊಚ್ಚಿಕೊಂಡಿದ್ದರೆ ನಾನೇ ಸಂಪಾದಿಸಿದ ಸಂಪತ್ತೆಂದು ಹೆಚ್ಚಳಪಟ್ಟಿದ್ದರೆ,


ಅಧಿಪತಿಯಂತೆ ಆತನ ಸಾನಿಧ್ಯವನು ಸೇರುತ್ತಿದ್ದೆ ಒಂದೊಂದು ಹೆಜ್ಜೆಯ ಲೆಕ್ಕವನು ಒಪ್ಪಿಸುತ್ತಿದ್ದೆ.


ಯೋಬನು ತನ್ನ ಮಿತ್ರರಿಗೋಸ್ಕರ ಪ್ರಾರ್ಥಿಸಿದ ಬಳಿಕ ಸರ್ವೇಶ್ವರಸ್ವಾಮಿ ಅವನ ದುಸ್ಥಿತಿಯನ್ನು ಹೋಗಲಾಡಿಸಿದರು. ಅವನ ಆಸ್ತಿಪಾಸ್ತಿಯನ್ನು ಮೊದಲಿಗಿಂತ ಇಮ್ಮಡಿಯಾಗಿಸಿದರು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಸೋಲಿಸಿದ ಕೇದಾರನ್ನು ಮತ್ತು ಹಾಜೋರಿನ ರಾಷ್ಟ್ರಗಳನ್ನು ಕುರಿತ ಹೇಳಿಕೆ: “ಏಳಿ, ಕೇದಾರಿಗೆ ಹೋಗಿ, ಪೂರ್ವ ದೇಶದವರನ್ನು ಹಾಳುಮಾಡಿ,” ಎಂದು ಸರ್ವೇಶ್ವರ ಸ್ವಾಮಿ ಶತ್ರುಗಳಿಗೆ ಆಜ್ಞೆಮಾಡಿದ್ದಾರೆ.


ಸರ್ವೇಶ್ವರ ನನ್ನೊಡೆಯನನ್ನು ಯಥೇಚ್ಛವಾಗಿ ಆಶೀರ್ವದಿಸಿದ್ದಾರೆ; ದನಕುರಿಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಹೇಸರಗತ್ತೆಗಳನ್ನೂ ಕೊಟ್ಟಿದ್ದಾರೆ. ನನ್ನೊಡೆಯ ಐಶ್ವರ್ಯವಂತ.


ಐಶ್ವರ್ಯವಂತನಿಗೆ ಬಹಳ ಕುರಿದನಗಳಿದ್ದವು.


ಅಸ್ಸೀರಿಯದ ಅರಸನಿಗೆ ಆ ಹಣವನ್ನು ಕೊಡುವುದಕ್ಕಾಗಿ ಇಸ್ರಯೇಲರ ಪ್ರತಿಯೊಬ್ಬ ಐಶ್ವರ್ಯವಂತನಿಂದ ಐವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡನು. ಆ ಹಣ ಸಿಕ್ಕಿದ ನಂತರ ಅಸ್ಸೀರಿಯದ ಅರಸನು ಅಲ್ಲಿ ನಿಲ್ಲದೆ ಹಿಂದಿರುಗಿ ಹೋದನು.


ಒಂಟೆಗಳ ಮೇಲೆ ಇಷ್ಮಾಯೇಲ್ಯನಾದ ಓಬೀಲ್; ಹೆಣ್ಣುಕತ್ತೆಗಳ ಮೇಲೆ ಮೇರೊನೋತ್ಯನಾದ ಯೆಹ್ದೆಯ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು