Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:7 - ಕನ್ನಡ ಸತ್ಯವೇದವು C.L. Bible (BSI)

7 ನಾನು ಅಪರಾಧಿಯಲ್ಲವೆಂದು ತಿಳಿದಿದೆಯಲ್ಲವೆ? ನಿನ್ನ ಕೈಯಿಂದ ಬಿಡಿಸಬಲ್ಲವರಾರೂ ಇಲ್ಲವಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಅಪರಾಧಿಯಲ್ಲವೆಂದು ನಿನಗೆ ತಿಳಿಯಿತಲ್ಲಾ; ನಿನ್ನ ಕೈಯೊಳಗಿಂದ ಬಿಡಿಸತಕ್ಕವರು ಯಾರೂ ಇಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ಅಪರಾಧಿಯಲ್ಲವೆಂದು ನಿನಗೆ ಗೊತ್ತಾಯಿತಲ್ಲಾ; ನಿನ್ನ ಕೈಯೊಳಗಿಂದ ಬಿಡಿಸತಕ್ಕವರು ಯಾರೂ ಇಲ್ಲವಷ್ಟೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ನಾನು ನಿರಪರಾಧಿಯೆಂದು ನಿನಗೆ ಗೊತ್ತದೆ. ಆದರೆ ಯಾರೂ ನನ್ನನ್ನು ನಿನ್ನ ಶಕ್ತಿಯಿಂದ ಬಿಡಿಸಲಾರರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ಅಪರಾಧಿಯಲ್ಲವೆಂದು ನಿಮಗೆ ಗೊತ್ತಿದೆ, ನಿಮ್ಮ ಕೈಯಿಂದ ತಪ್ಪಿಸುವವರು ಯಾರೂ ಇಲ್ಲವೆಂದೂ ನಿಮಗೆ ಗೊತ್ತಿದೆಯಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:7
35 ತಿಳಿವುಗಳ ಹೋಲಿಕೆ  

“ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.


ವಿಶ್ವಾಸಿಗಳಾದ ನಿಮ್ಮ ನಡುವೆ ನಾವು ಎಷ್ಟು ಶುದ್ಧರಾಗಿ, ನೀತಿವಂತರಾಗಿ, ನಿರ್ದೋಷಿಗಳಾಗಿ ನಡೆದುಕೊಂಡೆವು ಎಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿಯೇ.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;


ಅವಳ ನಲ್ಲರ ಕಣ್ಣೆದುರಿಗೆ ಅವಳ ಲಜ್ಜೆಗೇಡಿತನವನ್ನು ಬಯಲುಮಾಡುವೆನು. ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.


ಈಗಲಾದರು ನೀವು ಸಿದ್ಧರಾಗಿದ್ದು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಕೂಡಲೆ ಅಡ್ಡಬಿದ್ದು ನಾನು ಸ್ಥಾಪಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಇಲ್ಲವಾದರೆ ಈ ಗಳಿಗೆಯಲ್ಲೆ ನಿಮ್ಮನ್ನು ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು. ನಿಮ್ಮನ್ನು ನನ್ನ ಕೈಯಿಂದ ಬಿಡಿಸಬಲ್ಲ ದೇವರು ಯಾರಿದ್ದಾನೆ?” ಎಂದು ಹೇಳಿದನು.


ದೇವನ ನೆನೆಯದವರೇ, ನೀಡಿರಿ ಗಮನವನು I ಇಲ್ಲವಾದರೆ ಛಿನ್ನಛಿನ್ನವಾಗಿಸಿಬಿಟ್ಟೇನು I ನನ್ನ ಕೈಯಿಂದ ತಪ್ಪಿಸುವವರಾರು ನಿಮ್ಮನು? II


ಹೃದಯ ವೀಕ್ಷಿಸು, ಇರುಳೆಲ್ಲ ವಿಚಾರಿಸು, ಅಗ್ನಿಪರೀಕ್ಷೆ ಮಾಡಿಸು I ನಾ ದೋಷರಹಿತ, ಮಾತಲಿ ತಪ್ಪದವ, ಎಂದಾಗ ತೀರ್ಮಾನಿಸು II


ಸ್ವಾಮಿ ದೇವಾ, ನಾನೀಪರಿ ನಡೆದಿರೆ : ಅಕ್ರಮಕ್ಕೆ ಕೈ ಹಾಕಿರೆ I ಮಿತ್ರದ್ರೋಹಿ ಆಗಿರೆ, ನಿಷ್ಕಾರಣ ಶತ್ರು ಸುಲಿಗೆ ಮಾಡಿರೆ II


ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ I ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ II


ಸರ್ವೇಶ್ವರಸ್ವಾಮಿ ಈ ಮಾತುಗಳನ್ನು ಯೋಬನಿಗೆ ಹೇಳಿದ ಮೇಲೆ ತೇಮಾನ್ಯನಾದ ಎಲೀಫಜನಿಗೆ, “ನಿನ್ನ ಮೇಲೂ ನಿನ್ನ ಗೆಳೆಯರಿಬ್ಬರ ಮೇಲೂ ನನಗೆ ಕೋಪವಿದೆ! ನನ್ನ ದಾಸ ಯೋಬನಂತೆ ನೀವು ನನ್ನ ವಿಷಯವಾಗಿ ಸರಿಯಾದುದನ್ನು ಆಡಲಿಲ್ಲ.


ನನ್ನ ಕರೆಗೆ ಕಿವಿಗೊಡುವನೊಬ್ಬನು ಈಗಿದ್ದರೆ ಲೇಸಾಗಿರುತ್ತಿತ್ತು (ಇಗೋ ನೋಡಿ, ನನ್ನ ಕೈರುಜು; ನನಗುತ್ತರಕೊಡಲಿ ಸರ್ವಶಕ್ತನು;) ಬರೆದುಕೊಡಲಿ ವಿರೋಧಿ ನನ್ನ ಆಪಾದನಾ ಪತ್ರವನು.


ದೇವರು ನ್ಯಾಯಸ್ಥಾಪನೆಗೆ ನಿಂತಾಗ ನಾನೇನು ಮಾಡುತ್ತಿದ್ದೆ? ಆತ ವಿಚಾರಣೆಗೆ ಬಂದಾಗ ನಾನೇನು ಉತ್ತರಕೊಡುತ್ತಿದ್ದೆ?


ತೂಗಿನೋಡಲಿ ನನ್ನನು ನ್ಯಾಯದ ತಕ್ಕಡಿಯಲಿ ಹೀಗೆ ನನ್ನ ಸತ್ಯತೆಯನು ದೇವರು ತಿಳಿದುಕೊಳ್ಳಲಿ.


ಆತನಾದರೊ ಬಲ್ಲ ನಾನು ಹಿಡಿವ ದಾರಿಯನು ಆತ ನನ್ನನು ಶೋಧಿಸಿದರೆ ಚೊಕ್ಕ ಬಂಗಾರವಾಗುವೆನು.


“ದೇವಾಧಿದೇವರಾದ ಸರ್ವೇಶ್ವರ ಇದಕ್ಕೆ ಸಾಕ್ಷಿ; ಆ ದೇವಾಧಿದೇವ ಸರ್ವೇಶ್ವರಸ್ವಾಮಿಗೆ ಇದು ಗೊತ್ತಿದೆ. ಇಸ್ರಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರು ಆಗಿದ್ದರೆ ಆ ಸ್ವಾಮಿ ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ.


ಕಿತ್ತುಕೊಂಡು ಹೋಗುವ ಆತನಿಗೆ ಅಡ್ಡಿಮಾಡುವವರಾರು? ‘ಏನು ಮಾಡುತ್ತಿರುವೆ?’ ಎಂದು ಆತನನ್ನು ಕೇಳುವವರಾರು?


ನಾನು ನಿರ್ದೋಷಿಯೇ ಹೌದು; ಅದರ ಬಗ್ಗೆ ನನಗಿಲ್ಲ ಚಿಂತೆ. ನನ್ನ ಪ್ರಾಣ ಕೂಡ ನನಗೆ ತೃಣವಾಗಿಬಿಟ್ಟಿದೆ.


ಎಲ್ಲವೂ ಒಂದೇ ಆಗಿಬಿಟ್ಟಿದೆ. ಆದ್ದರಿಂದಲೇ ಇಂತೆನ್ನುತ್ತೇನೆ: ‘ದೋಷಿಯೋ ನಿರ್ದೋಷಿಯೋ’ ದೇವರು ಎಲ್ಲರನೂ ನಾಶಗೊಳಿಸುತ್ತಾನೆ.


ನಾನು ದುರ್ಮಾರ್ಗಿಯಾದರಂತೂ ನನಗಿಲ್ಲ ಗತಿ ಸನ್ಮಾರ್ಗಿಯಾದರೂ ಕೂಡ ನಡೆವಂತಿಲ್ಲ ತಲೆಯೆತ್ತಿ ಏಕೆಂದರೆ ನಾಚಿ ನಿಂತಿರುವೆ, ಯಾತನೆಯ ಹೊರೆಹೊತ್ತಿ.


ನೀನು ಹೇಳುವುದೇ ಸತ್ಯವೆಂದು ವಾದಿಸುತ್ತಿರುವೆ ದೇವರ ದೃಷ್ಟಿಯಲ್ಲಿ ನೀನು ಪರಿಶುದ್ಧನು ಎನ್ನುತ್ತಿರುವೆ.


ಇಗೋ ನನ್ನ ಮೊಕದ್ದಮೆಯನ್ನು ಸಿದ್ಧಗೊಳಿಸಲಾಗಿದೆ ನಾನು ನಿರ್ದೋಷಿಯೆಂಬ ನಿರ್ಣಯ ನನಗೆ ಗೊತ್ತೇ ಇದೆ.


ಅವನ ಮೇಲೆ ಅದು ಬೀಸುತ್ತದೆ ನಿರ್ದಾಕ್ಷಿಣ್ಯದಿಂದ ತಪ್ಪಿಸಿಕೊಳ್ಳಲು ಅವನು ಯತ್ನಿಸುತ್ತಾನೆ ಅದರ ಹೊಡೆತದಿಂದ.


ಯೋಬನು ತಾನು ಸತ್ಯವಂತನೆಂದು ಸಾಧಿಸಿದ್ದನು. ಇದನ್ನು ಕೇಳಿದ ಅವನ ಮೂವರು ಮಿತ್ರರು ವಾದಿಸುವುದನ್ನು ನಿಲ್ಲಿಸಿಬಿಟ್ಟರು.


‘ನಾನು ಪರಿಶುದ್ಧನು, ನಿರ್ದೋಷಿ ನಾನು ನಿರ್ಮಲನು, ನಿರಪರಾಧಿ.


ಏನು, ನನ್ನ ನಿರ್ಣಯವನ್ನು ನೀನು ಖಂಡಿಸುತ್ತೀಯೋ? ನೀನು ನಿರ್ದೋಷಿಯೆನಿಸಿಕೊಳ್ಳಲು ನನ್ನನ್ನು ದೋಷಿಯನ್ನಾಗಿಸುತ್ತೀಯೋ?


ಆತನ ಹೆಜ್ಜೆಯ ಜಾಡಿನಲ್ಲೆ ನಾನು ಕಾಲಿಟ್ಟೆ ಓರೆಯಾಗದೆ ಆತನ ದಾರಿಯನ್ನೇ ಹಿಡಿದೆ.


ಹೌದು, ನಾನೇ ಪರಮಾತ್ಮ ಆದಿಯಿಂದ ಬಿಡಿಸುವವರಾರು ಇಲ್ಲ ನನ್ನ ಕೈಯಿಂದ ನಾಗೈದುದನು ತಡೆಯಲಾಗದು ಯಾರಿಂದ.” ಈ ಪರಿ ನುಡಿದಿಹನು ಸರ್ವೇಶ್ವರನು, ನಿಮ್ಮ ಉದ್ಧಾರಕನು, ಇಸ್ರಯೇಲಿನ ಪರಮಪಾವನನು;


ಎಫ್ರಯಿಮಿಗೆ ನಾನು ಸಿಂಹ; ಯೆಹೂದ್ಯಕುಲಕ್ಕೆ ಪ್ರಾಯದ ಸಿಂಹ; ಅದನ್ನು ಸೀಳಿಬಿಡುವೆನು; ಎಳೆದುಕೊಂಡು ಹೋಗುವೆನು; ಯಾರೂ ಅದನ್ನು ನನ್ನಿಂದ ಬಿಡಿಸಿಕೊಳ್ಳಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು