Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 11:13 - ಕನ್ನಡ ಸತ್ಯವೇದವು C.L. Bible (BSI)

13 ಸರಿಪಡಿಸಿಕೋ ನಿನ್ನ ಅಂತರಂಗವನ್ನು ದೇವರತ್ತ ಎತ್ತು ನಿನ್ನ ಕರಗಳನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀನಂತು ಮನಸ್ಸನ್ನು ಪರಿವರ್ತಿಸಿಕೊಂಡು ದೇವರ ಕಡೆಗೆ ಕೈಗಳನ್ನೆತ್ತಿ ಸ್ತುತಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀನಂತು ಮನಸ್ಸನ್ನು ತಿರುಗಿಸಿಕೊಂಡು ದೇವರ ಕಡೆಗೆ ಕೈಗಳನ್ನೆತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೋಬನೇ, ನಿನ್ನ ಕೈಗಳನ್ನು ಮೇಲೆತ್ತಿ ದೇವರೊಬ್ಬನನ್ನೇ ಆರಾಧಿಸುವುದಕ್ಕಾಗಿ ನಿನ್ನ ಹೃದಯವನ್ನು ಸಿದ್ಧಪಡಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಆದರೂ ನೀನು ನಿನ್ನ ಹೃದಯವನ್ನು ದೇವರಿಗೆ ಸಮರ್ಪಿಸಿ, ನಿನ್ನ ಕೈಗಳನ್ನು ದೇವರ ಕಡೆಗೆ ಚಾಚಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 11:13
18 ತಿಳಿವುಗಳ ಹೋಲಿಕೆ  

ಬೇಡುತಾ ನಿನ್ನ ಕಡೆಗೆ ಕೈಚಾಚಿದೆ I ನಿನಗಾಗಿ ನನ್ನಾತ್ಮ ತವಕಪಡುತ್ತಿದೆ II


ಮಬ್ಬಾಗಿ ಹೋಗಿವೆ ಕಣ್ಗಳು ಬಾಧೆಯಿಂದ I ಪ್ರಭೂ, ಕೈಯೊಡ್ಡಿ ಮೊರೆಯಿಡುತ್ತಿರುವೆ ಸದಾ II


ಮರೆಯರು ನನ್ನ ಮಹತ್ಕಾರ್ಯಗಳನು I ಇಡುವರು ನನ್ನಲ್ಲೇ ಭರವಸೆಯನು I ಕೈಗೊಳ್ಳುವರು ನನ್ನ ಆಜ್ಞೆಗಳನು II


ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಸರ್ವೇಶ್ವರನಿಗೆ ಅಭಿಮುಖರಾಗಿ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿರಿ. ಸರ್ವೇಶ್ವರನ ಮೇಲೆಯೇ ಮನಸ್ಸಿಟ್ಟು ಅವರೊಬ್ಬರಿಗೇ ಸೇವೆಸಲ್ಲಿಸಿರಿ; ಆಗ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವರು,” ಎಂದನು.


“ಸೇವಕನು ಯಜಮಾನನ ಇಷ್ಟಾರ್ಥವನ್ನು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಇದ್ದರೆ ಕಠಿಣ ಶಿಕ್ಷೆಗೆ ಗುರಿಯಾಗುತ್ತಾನೆ.


ರಾಯಭಾರಿಗಳಾಗಿ ಬರುವರು ಈಜಿಪ್ಟಿನ ಜನರು I ದೇವರಿಗೆ ಕೈ ಮುಗಿವರು ಇಥಿಯೋಪಿಯದವರು II


ನಾನು ನೀನಾಗಿದ್ದರೆ ದೇವರಿಗೆ ಮೊರೆಯಿಡುತ್ತಿದ್ದೆ ನನ್ನ ವಿಷಯವನು ಆತನ ಕೈಗೆ ಬಿಡುತ್ತಿದ್ದೆ.


ಆದರೂ ನೀವು ನಾಡಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದುಹಾಕಿದ್ದೀರಿ. ಸರ್ವೇಶ್ವರನ ಭಕ್ತಿ ನಿಮ್ಮಲ್ಲಿ ಬೇರೂರಿದೆ, ನಿಮ್ಮಲ್ಲಿ ಸುಶೀಲತೆ ಉಂಟೆಂದು ತಿಳಿದುಬಂದಿದೆ,” ಎಂಬುದಾಗಿ ಹೇಳಿದನು.


ಅವನು ಸರ್ವೇಶ್ವರನಿಗೆ ವಿಧೇಯನಾಗಿ ನಡೆಯಲು ಮನಸ್ಸುಮಾಡದೆ ದ್ರೋಹಿಯಾದನು.


ದೇವರು ಯಾರನ್ನು ತಿದ್ದುತ್ತಾನೋ ಅವನು ಧನ್ಯನು ಅಲಕ್ಷ್ಯಮಾಡಬೇಡ ನೋಡು, ಸರ್ವಶಕ್ತನ ದಂಡನೆಯನು.


ನಿನ್ನ ಹೃದಯ ನಿನ್ನನ್ನು ದೂರ ಒಯ್ದಿದೆ, ಏಕೆ? ನಿನ್ನ ಕಣ್ಣು ಕಿಡಿಕಾರುತ್ತಿದೆ ಏಕೆ?


ಸರ್ವಶಕ್ತನ ಕಡೆಗೆ ಹಿಂದಿರುಗಿದೆಯಾದರೆ ನಿನ್ನ ಗುಡಾರಗಳಿಂದ ಅನ್ಯಾಯವನು ತೊರೆದೆಯಾದರೆ, ನೀನು ಉದ್ಧಾರವಾಗುವೆ.


ಆತನನು ಪ್ರಾರ್ಥಿಸುವೆ, ಆತ ಆಲಿಸುವನು ತೀರಿಸುವೆ ಆತನಿಗೆ ನೀ ಹೊತ್ತ ಹರಕೆಗಳನು.


ಸಂಕಟದ ವೇಳೆಯೊಳು ಸ್ವಾಮಿಯನು ನಾ ಕರೆದೆ I ಇರುಳೆಲ್ಲ ಆಯಾಸವರಿಯದೆ ಕೈಚಾಚಿದೆ I ಎನ್ನ ಮನಸ್ಸಿತ್ತು ದುಃಖಶಮನಗೊಳ್ಳದೆ II


ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೆ ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಕಲ್ಲಿನ ಮಳೆಯು ನಿಂತುಹೋಗುವುವು. ಇದರಿಂದ ಇಡೀ ಲೋಕವು ಸರ್ವೇಶ್ವರನ ಅಧೀನದಲ್ಲಿದೆ ಎಂದು ತಾವು ತಿಳಿದುಕೊಳ್ಳುವಿರಿ.


ಪರಲೋಕದಲ್ಲಿರುವ ದೇವರ ಕಡೆಗೆ ನಮ್ಮ ಕರಗಳನ್ನೂ ಹೃನ್ಮನಗಳನ್ನೂ ಎತ್ತೋಣ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು