Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 11:20 - ಕನ್ನಡ ಸತ್ಯವೇದವು C.L. Bible (BSI)

20 ದುರ್ಜನರು ನಿರಾಶೆಯಿಂದ ಕಂಗೆಡುವರು ಪ್ರಾಣಬಿಡಬೇಕೆಂಬುದೇ ಅವರ ಆಶೆಯಾಗಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು, ಪ್ರಾಣಬಿಡಬೇಕೆಂಬುದೇ ಅವರ ಬಯಕೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು, ಪ್ರಾಣಬಿಡಬೇಕೆಂಬದೇ ಅವರ ಆಶೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ದುಷ್ಟರು ಸಹಾಯಕ್ಕಾಗಿ ಎದುರುನೋಡಿದರೂ ತಮ್ಮ ಆಪತ್ತುಗಳಿಂದ ಪಾರಾಗಲು ಅವರಿಗೆ ಸಾಧ್ಯವಿಲ್ಲ. ಅವರ ನಿರೀಕ್ಷೆಯೇ ಅವರನ್ನು ಮರಣಕ್ಕೆ ನಡೆಸುತ್ತದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವುದಿಲ್ಲ; ಪ್ರಾಣಬಿಡಬೇಕೆಂಬುದೇ ಅವರ ನಿರೀಕ್ಷೆಯಾಗಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 11:20
25 ತಿಳಿವುಗಳ ಹೋಲಿಕೆ  

ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ. ಸ್ವಂತದ್ದು ಎಂದು ಹೇಳಿಕೊಳ್ಳಲು ಅಂಬೆಗಾಲಿಡುವಷ್ಟು ಸ್ಥಳಸಿಕ್ಕುವುದಿಲ್ಲ. ನೀವು ಗಡಗಡನೆ ನಡುಗುವ ಹೃದಯವುಳ್ಳವರಾಗಿ, ದಿಕ್ಕುತೋರದೆ ಕಂಗೆಟ್ಟವರಾಗಿ ಹಾಗು ಮನಗುಂದಿದವರಾಗಿ ಇರುವಂತೆ ಸರ್ವೇಶ್ವರ ಮಾಡುವರು.


ಬಡವರ ಬಯಕೆಗಳನು ನಾನು ಭಂಗಪಡಿಸಿದೆನೋ? ವಿಧವೆಯ ಕಣ್ಣುಗಳನು ನಾನು ಮಂಕಾಗಿಸಿದೆನೋ?


ಯಾವನು ಸ್ವಾರ್ಥಕ್ಕಾಗಿ ಮಿತ್ರನ ಮೇಲೆ ಹೊರಿಸುತ್ತಾನೋ ದೂರು ಅಂಥವನ ಮಕ್ಕಳ ಕಣ್ಣುಗಳು ಮಂಕಾಗಿಹೋಗದಿರವು.


ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ.


ನಿಮ್ಮಲ್ಲಿ ದೌಡೋಡುವವನು ಕೂಡ ತಲೆತಪ್ಪಿಸಿಕೊಳ್ಳಲಾರನು. ಬಲಿಷ್ಠನೂ ಬಲಹೀನನಾಗುವನು. ಪರಾಕ್ರಮಿಯೂ ಪ್ರಾಣ ಉಳಿಸಿಕೊಳ್ಳಲಾರನು.


ಮಬ್ಬಾಯಿತು ಕಣ್ಣು ವ್ಯರ್ಥವಾಗಿ ನೆರವನ್ನು ನಿರೀಕ್ಷಿಸುತ ರಕ್ಷಿಸಲಾಗದ ರಾಷ್ಟ್ರಕ್ಕಾಗಿ ಕೋವರದಲ್ಲಿ ಕಾದು ನೋಡುತ.


ಹೆತ್ತವರನ್ನು ಶಪಿಸುವವನ ದೀಪ ಕಾರಿರುಳಲ್ಲೆ ಆರಿಹೋಗುವುದು ಖಚಿತ.


ದುರ್ಜನರು ಭಯಪಡುವುದೇ ಸಂಭವಿಸುವುದು; ಸಜ್ಜನರು ಇಷ್ಟಪಡುವುದೇ ಲಭಿಸುವುದು.


ಕಾಯ್ದು ಕಾಯ್ದು ಕಣ್ಣು ಗುಳಿಬಿದ್ದಿದೆ ದೇವಾ, ನಿನಗಾಗಿ I ಗಂಟಲು ಒಣಗಿದೆ, ಜೀವ ಸೊರಗಿದೆ, ನಿನ್ನ ಕೂಗಿ ಕೂಗಿ II


ಆತನ ದೃಷ್ಟಿಯಿಂದ ದುರುಳರು ಅಡಗಿಕೊಳ್ಳುವಂತಿಲ್ಲ ಅಂಥವರನ್ನು ಅಡಗಿಸಬಲ್ಲ ಇರುಳಿಲ್ಲ ಕಾರಿರುಳೂ ಇಲ್ಲ.


ಅವನ ಮೇಲೆ ಅದು ಬೀಸುತ್ತದೆ ನಿರ್ದಾಕ್ಷಿಣ್ಯದಿಂದ ತಪ್ಪಿಸಿಕೊಳ್ಳಲು ಅವನು ಯತ್ನಿಸುತ್ತಾನೆ ಅದರ ಹೊಡೆತದಿಂದ.


ದೇವರೇ ದುಷ್ಟನ ಪ್ರಾಣ ತೆಗೆವ ಕಾಲಕ್ಕೆ ಅವನಿಗೆಲ್ಲಿಂದ ಬಂದೀತು ಭರವಸೆ!


ನೆಮ್ಮದಿಯ ಗುಡಾರದಿಂದ ಅವನನ್ನು ಎಳೆದು ಹಾಕುವುದು ಹೊರಗೆ ಸಾಗಿಸಿಕೊಂಡು ಹೋಗುವುದವನನ್ನು ಅತಿಭಯಂಕರ ರಾಜನೆಡೆಗೆ.


ನೀವು ಈ ದಂಡನೆಗಳಿಗೆ ಗುರಿಯಾಗುವಿರಿ. ನಿಮಗೆ ಕ್ಷಯ ರೋಗ, ಚಳಿಜ್ವರ ಮುಂತಾದ ಭೀಕರ ವ್ಯಾಧಿಗಳು ಬರುವಂತೆ ಮಾಡುವೆನು. ಇವುಗಳ ನಿಮಿತ್ತ ನೀವು ಕಂಗೆಡುವಿರಿ, ಮನಗುಂದಿ ಹೋಗುವಿರಿ. ನಿಮ್ಮ ಬಿತ್ತನೆಯ ಫಲ ನಿಮಗೆ ಸಿಗದೆ ಹೋಗುವುದು. ಅದು ಶತ್ರುಗಳ ಪಾಲಾಗುವುದು.


ದೇವರು ನನ್ನನ್ನು ನಸುಕಿಬಿಡಬಾರದೆ? ತನ್ನ ಕೈಯನ್ನು ಚಾಚಿ ಸಂಹರಿಸಿಬಿಡಬಾರದೆ?


ಅದಕ್ಕೆ ಯೋಬನು ಪ್ರತ್ಯುತ್ತರವಾಗಿ ಹೀಗೆಂದನು:


ಅಕ್ಕಪಕ್ಕದಲಿ ಸಹಾಯಕರಾರೂ ಇಲ್ಲ I ಆಶ್ರಯರಹಿತ, ಹಿತಚಿಂತಕರಾರೂ ನನಗಿಲ್ಲ II


ಸಜ್ಜನರ ನಂಬಿಕೆ ಆನಂದಕರ; ದುರ್ಜನರ ನಿರೀಕ್ಷೆ ವಿನಾಶಕರ.


ಕುರಿಗಾಹಿಗಳು ಓಡಿಹೋಗುವುದಕ್ಕೆ ದಾರಿ ಸಿಕ್ಕದು ಮೇಷಪಾಲರು ತಲೆತಪ್ಪಿಸಿಕೊಳ್ಳಲಿಕ್ಕೆ ಆಸ್ಪದ ದೊರಕದು.


ಎಷ್ಟು ಅಗೆದರೂ ದೊರಕದು ಅಂಥವರಿಗೆ ನಿಧಿನಿಕ್ಷೇಪ ಅದಕ್ಕಿಂತ ಮಿಗಿಲಾಗಿ ಬಯಸಿದರೂ ಬಾರದು ಮರಣ.


ಅವರು ಸಮಾಧಿಗೆ ಸೇರುವಾಗ ಆಗುವುದು ಅವರಿಗೆ ಅಮಿತಾನಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು