Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 14:5 - ಕನ್ನಡ ಸತ್ಯವೇದವು C.L. Bible (BSI)

5 ಮಾನವನ ದಿನಗಳೆಷ್ಟೆಂದು ತೀರ್ಮಾನವಾಗಿದೆ ಅವನ ತಿಂಗಳುಗಳ ಲೆಕ್ಕ ನಿನಗೆ ಗೊತ್ತಿದೆ ನೀ ನೇಮಿಸಿರುವೆ ಅವನಿಗೆ ದಾಟಲಾಗದ ಗಡಿಗಳನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮನುಷ್ಯನ ದಿನಗಳು ಇಷ್ಟೇ ಎಂಬುದು ತೀರ್ಮಾನವಾಗಿದೆಯಲ್ಲಾ; ಅವನ ತಿಂಗಳುಗಳ ಲೆಕ್ಕವು ನಿನಗೆ ಗೊತ್ತು; ದಾಟಲಾರದ ಗಡಿಗಳನ್ನು ಅವನಿಗೆ ನೇಮಿಸಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮನುಷ್ಯನ ದಿನಗಳು ಇಷ್ಟೇ ಎಂಬದು ತೀರ್ಮಾನವಾಗಿದೆಯಲ್ಲಾ, ಅವನ ತಿಂಗಳುಗಳ ಲೆಕ್ಕವು ನಿನಗೆ ಗೊತ್ತು; ದಾಟಲಾರದ ಗಡಿಗಳನ್ನು ಅವನಿಗೆ ನೇವಿುಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮನುಷ್ಯನ ದಿನಗಳು ಇಷ್ಟೇ ಎಂದು ನಿರ್ಣಯವಾಗಿದೆ; ಅವನ ತಿಂಗಳುಗಳನ್ನು ನೀನು ನಿರ್ಣಯಿಸಿರುವೆ. ಅವನ ಆಯುಷ್ಯಕ್ಕೆ ದಾಟಲಾರದ ಮೇರೆಯನ್ನು ಹಾಕಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮನುಷ್ಯನ ದಿನಗಳು ಇಷ್ಟೇ ಎಂದು ತೀರ್ಮಾನವಾಗಿದೆ; ಅವನ ತಿಂಗಳುಗಳ ಲೆಕ್ಕ ದೇವರೇ ನಿಮ್ಮ ಬಳಿಯಲ್ಲಿ ಇದೆ; ಅವನು ದಾಟಲಾರದ ಹಾಗೆ ಅವನಿಗೆ ಮೇರೆಗಳನ್ನು ನೇಮಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 14:5
24 ತಿಳಿವುಗಳ ಹೋಲಿಕೆ  

“ನನ್ನ ಜೀವಾಯುಸ್ಸು ಎನಿತು? ನನ್ನ ಬಾಳಿನ ಮುಗಿವೆಂದು? I ತಿಳಿಯಪಡಿಸು ನನಗೆ ಪ್ರಭು, ನಾನು ಬಲು ಅಸ್ಥಿರನೆಂದು” II


ಒಂದೇ ಮೂಲದಿಂದ ಅವರು ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ ಭೂಮಂಡಲದಲ್ಲೆಲ್ಲಾ ಜೀವಿಸುವಂತೆ ಮಾಡಿದ್ದಾರೆ. ಆಯಾ ಜನಾಂಗದ ಕಾಲಾವಧಿಯನ್ನೂ ಅವರವರ ನೆಲೆಯ ಎಲ್ಲೆಮೇರೆಗಳನ್ನೂ ಮುಂಚಿತವಾಗಿ ಅವರೇ ನಿರ್ಧರಿಸಿದ್ದಾರೆ.


ಪ್ರತಿಯೊಬ್ಬ ಮಾನವನು ಸಾಯುವುದು ಒಂದೇ ಸಾರಿ. ಅನಂತರ ಅವನು ನ್ಯಾಯತೀರ್ಪಿಗೆ ಗುರಿಯಾಗಬೇಕು.


ಆತನ ಕೈಯಲ್ಲಿದೆ ಎಲ್ಲ ಜೀವಿಗಳ ಪ್ರಾಣ ಪ್ರತಿಯೊಬ್ಬ ನರಮಾನವನ ಶ್ವಾಸ.


ತಲ್ಲಣಗೊಳ್ಳುವುವು ನೀ ಮುಖ ಮರೆಮಾಡಿಕೊಳ್ಳಲು I ಮಣ್ಣುಪಾಲಾಗುವುವು ನೀನವುಗಳ ಉಸಿರನಡಗಿಸಲು II


ಅವನ ಆಯುಸ್ಸೇ ಕತ್ತರಿಸಿಹೋದ ಮೇಲೆ ಅವನಿಗೆಲ್ಲಿಯದು ತನ್ನಾನಂತರ ಬರುವ ಸಂತತಿಯ ಚಿಂತೆ?


ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.


ಇದರ ಅರ್ಥ ಹೀಗಿದೆ : “ಮೆನೇ” ಎಂದರೆ, ದೇವರು ನಿನ್ನ ಆಳ್ವಿಕೆಯ ಕಾಲಾವಧಿಯನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾರೆ.


ಗೊತ್ತುಮಾಡಿರುವೆ ಆ ಜಲರಾಶಿಗೆ ಮೇರೆಯನು I ಅವು ಮತ್ತೆ ಮುಚ್ಚದಂತೆ ಮಾಡಿರುವೆ ಭೂಮಿಯನು II


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ಸತ್ತಮೇಲೆ ಮನುಜ ಮರಳಿ ಬದುಕುತ್ತಾನೆಯೇ? ಬದುಕುವುದಾದರೆ ಮುಕ್ತಿಹೊಂದುವವರೆಗೆ ನನ್ನ ವಾಯಿದೆಯ ದಿನವೆಲ್ಲ ನಾ ಕಾದಿರುವೆ.


“ಮಾನವನ ಜೀವನ ಸೈನಿಕರ ಸೇವಾವಧಿಯಂತೆ ಅವನ ದಿನಗಳು ಕಳೆಯುತ್ತವೆ ಜೀತದಾಳಿನ ದಿನಗಳಂತೆ.


“ಫಿಲದೆಲ್ಫಿಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ಸತ್ಯವಂತನೂ ಪರಿಶುದ್ಧನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಮನೆತನದ ಬೀಗದ ಕೈ ನನ್ನಲ್ಲಿ ಇದೆ. ನಾನು ಬಾಗಿಲನ್ನು ತೆರೆದರೆ ಬೇರೆ ಯಾರೂ ಅದನ್ನು ಮುಚ್ಚಲಾಗದು. ನಾನು ಬಾಗಿಲನ್ನು ಮುಚ್ಚಿದರೆ ಬೇರೆ ಯಾರೂ ಅದನ್ನು ತೆರೆಯಲಾಗದು. ಈಗ ನಾನು ನಿನಗೆ ಹೇಳುವುದೇನೆಂದರೆ :


ಅದೇ ರಾತ್ರಿ ಬಾಬಿಲೋನಿನ ರಾಜ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


“(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.


“ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.


ನಿನ್ನ ಕೈಯಲ್ಲಿದೆ ನನ್ನ ಇಡೀ ಜೀವಮಾನ I ಬೆನ್ನಟ್ಟಿಬರುವ ವೈರಿಯಿಂದ ರಕ್ಷಿಸೆನ್ನ II


ನಾನಿನ್ನೂ ಭ್ರೂಣವಾಗಿದ್ದಾಗ ನೋಡಿದವು ನಿನ್ನ ಕಣ್ಣುಗಳು I ಪ್ರಾರಂಭವಾಗುವುದಕ್ಕೆ ಮುನ್ನ ನನ್ನ ಆಯುಷ್ಕಾಲದ ದಿನಗಳು I ಲಿಖಿತವಾದವು ಅವುಗಳಲೊಂದೂ ತಪ್ಪದೆ ನಿನ್ನ ಪುಸ್ತಕದೊಳು II


ಹುಟ್ಟುವ ಸಮಯ, ಸಾಯುವ ಸಮಯ ನೆಡುವ ಸಮಯ, ನೆಟ್ಟದ್ದನ್ನು ಕೀಳುವ ಸಮಯ.


ಇದಲ್ಲದೆ ದಾವೀದನು, “ಸರ್ವೇಶ್ವರನಾಣೆ, ಅವನು ಸರ್ವೇಶ್ವರನಿಂದಲೇ ಸಾಯುವನು; ಇಲ್ಲವೆ ಕಾಲತುಂಬಿ ಮರಣಹೊಂದುವನು; ಅಥವಾ ಯುದ್ಧದಲ್ಲಿ ಮಡಿಯುವನು.


ನನ್ನ ವರ್ಷಗಳು ಕಳೆದುಹೋಗುತ್ತಿವೆ ಹಿಂತಿರುಗಲಾಗದ ಹಾದಿಯನು ನಾನು ಹಿಡಿಯಲಿರುವೆ.


ಆತ್ಮವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಸಾವೆಂಬ ಸಮರಕ್ಕೆ ವಿರಾಮವಿಲ್ಲ; ಅಂತೆಯೇ ದುಷ್ಟತನದ ಮೂಲಕ ಅದರಿಂದ ತಪ್ಪಿಸಿಕೊಳ್ಳಲಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು