Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 15:23 - ಕನ್ನಡ ಸತ್ಯವೇದವು C.L. Bible (BSI)

23 ಹೊಟ್ಟೆಪಾಡಿಗಾಗಿ ಹುಡುಕುತ್ತಾ ಅಲೆದಾಡುತ್ತಾನೆ ಆ ಕತ್ತಲ ದಿನ ಹತ್ತಿರವಿದೆಯೆಂದು ಅರಿತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ‘ರೊಟ್ಟಿ ಎಲ್ಲಿ?’ ಎಂದು ಹುಡುಕುತ್ತಾ ಅಲೆದಾಡುವನೆಂಬುದಾಗಿ ನಿಶ್ಚಯಿಸಿಕೊಂಡು, ಆ ಕತ್ತಲಿನ ದಿನವು ತನ್ನ ಪಕ್ಕದಲ್ಲಿ ಸಿದ್ಧವಾಗಿದೆ ಎಂದು ತಿಳಿದುಕೊಂಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ರೊಟ್ಟಿ ಎಲ್ಲಿ ಎಂದು ಹುಡುಕುತ್ತಾ ಅಲೆದಾಡುವೆನೆಂಬದಾಗಿಯೂ ನಿಶ್ಚಯಿಸಿಕೊಂಡು ಆ ಕತ್ತಲಿನ ದಿನವು ತನ್ನ ಪಕ್ಕದಲ್ಲಿ ಸಿದ್ಧವಾಗಿದೆ ಎಂದು ತಿಳಿದುಕೊಂಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅವನು ಅತ್ತಿತ್ತ ಅಲೆದಾಡುವನು; ಅವನ ದೇಹವು ರಣಹದ್ದುಗಳಿಗೆ ಆಹಾರವಾಗುವುದು. ಮರಣವು ತನಗೆ ಬಹು ಸಮೀಪವಾಗಿರುವುದು ಅವನಿಗೆ ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನು ಆಹಾರ ಎಲ್ಲಿ ಎಂದು ರಣಹದ್ದಿನ ಹಾಗೆ ಅಲೆಯುತ್ತಾನೆ; ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 15:23
21 ತಿಳಿವುಗಳ ಹೋಲಿಕೆ  

ತಿರುಕರಂತೆ ಅಲೆಯಲಿ ಅವನ ಮಕ್ಕಳು ಭಿಕ್ಷೆಬೇಡುತ I ಹೊರದೂಡಲ್ಪಡಲಿ ತಮ್ಮ ಪಾಳುಬಿದ್ದಾಮನೆಗಳಿಂದ II


ಅನ್ನಕ್ಕಾಗಿ ಅಲೆದಾಡುವರು ಅತ್ತಿತ್ತಾ I ಹೊಟ್ಟೆತುಂಬದಿರೆ ಅಡ್ಡಾಡುವರು ಬೊಗಳುತ್ತಾ II


ಕುಂದಿಹೋಗುವುದು ಅವನ ಕಿಮ್ಮತ್ತು ಅವನು ಬೀಳುವುದನ್ನೇ ಕಾದಿದೆ ಆಪತ್ತು.


ಬದಲಿಗೆ, ಅತ್ಯಂತ ಭಯದಿಂದ ಎದುರುನೋಡಬೇಕಾದ ದಂಡನಾತೀರ್ಪು ಹಾಗೂ ದೇವರ ಶತ್ರುಗಳನ್ನು ದಹಿಸುವ ಉಗ್ರಕೋಪಾಗ್ನಿ - ಇವುಗಳು ಮಾತ್ರ ನಮಗೆ ಉಳಿದಿರುತ್ತವೆ.


ಅದು ರೌದ್ರದ ದಿನ, ಕಷ್ಟ - ಸಂಕಟದ ದಿನ, ನಾಶವಿನಾಶದ ದಿನ, ಕತ್ತಲು ಕಾರ್ಗತ್ತಲ ದಿನ, ಕಾರ್ಮುಗಿಲು ಕವಿದ ಕರಾಳ ದಿನ;


ಖಂಡಿತವಾಗಿ ಸ್ವಾಮಿಯ ದಿನ ಬೆಳಕಾಗಿರದು, ಕತ್ತಲೆಯಾಗಿರುತ್ತದೆ, ಒಂದು ಚುಕ್ಕೆಯೂ ಇಲ್ಲದ ಕಾರಿರುಳಂತಿರುತ್ತದೆ.


ಅದು ಕಾರಿರುಳಿನ ಕರಾಳ ದಿನ, ಕಾರ್ಮುಗಿಲ ಕಾರ್ಗತ್ತಲ ದಿನ. ಮುಂಬೆಳಕು ಗುಡ್ಡದಿಂದ ಗುಡ್ಡಕ್ಕೆ ಹರಡುವಂತೆ ಪ್ರಬಲವಾದ ದೊಡ್ಡಸೈನ್ಯವೊಂದು ಬರುತ್ತಿದೆ; ಇಂಥ ಸೈನ್ಯ ಹಿಂದೆಂದೂ ಬಂದಿಲ್ಲ, ತಲತಲಾಂತರಕ್ಕೂ ಬರುವಂತಿಲ್ಲ.


ಪ್ರಾಣಾಪಾಯದಿಂದ, ಕಾಡಿನ ಕಟುಕರ ಭಯದಿಂದ ನಾವು ಪಡೆಯುತ್ತಿದ್ದೇವೆ ದವಸ ಧಾನ್ಯ.


ಹೊಟ್ಟೆಪಾಡಿಗಾಗಿ ಕೈ ಒಡ್ಡಿದ್ದೇವೆ ಈಜಿಪ್ಟರಿಗೆ, ಅಶ್ಶೂರ್ಯರಿಗೆ.


ಯುವಕನೇ, ಯೌವನದಲ್ಲಿ ಆನಂದಿಸು. ಯೌವನ ದಿನಗಳಲ್ಲಿ ಹೃತ್ಪೂರ್ವಕವಾಗಿ ಸಂತೋಷಿಸು. ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೊ. ಆದರೆ ಈ ಎಲ್ಲ ವಿಷಯಗಳಲ್ಲಿ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವರೆಂಬುದನ್ನು ಮನದಲ್ಲಿಡು.


ಅವನನ್ನು ಬೆಳಕಿನಿಂದ ತಳ್ಳುವರು ಕತ್ತಲಿಗೆ ಅಟ್ಟಿಬಿಡುವರು ಅವನನ್ನು ಲೋಕದಿಂದಲೆ.


ಇದನ್ನು ನೀನು ವ್ಯವಸಾಯ ಮಾಡಿದರೂ ಇನ್ನು ಮುಂದೆ ಇದು ಫಲಕೊಡುವುದಿಲ್ಲ. ನೆಲೆಯಿಲ್ಲದೆ ನೀನು ಲೋಕದಲ್ಲಿ ಅಲೆಮಾರಿಯಾಗಿರಬೇಕು,” ಎಂದರು.


ಕತ್ತಲಿಂದ ಹಿಂದಿರುಗುವ ನಂಬಿಕೆ ಅವನಿಗಿಲ್ಲ ಕತ್ತಿ ತನಗಾಗಿ ಕಾದಿದೆಯೆಂಬುದರಲ್ಲಿ ಸಂದೇಹವಿಲ್ಲ.


ಸಂಕಟ - ಪೇಚಾಟ ಅವನನ್ನು ಕಾಡುತ್ತಿರುತ್ತವೆ ಯುದ್ಧಸನ್ನದ್ಧ ರಾಜರಂತೆ ಅವನಿಗೆ ಸೋಲನು ತರುತ್ತವೆ.


ಕತ್ತಲೊಳಗಿಂದ ಪಾರಾಗನವನು ಸುಡುವುದು ಕಿಚ್ಚು ಅವನ ಕೊಂಬೆಯನು ಬಡಿದೊಯ್ಯುವುದು ಗಾಳಿ ಅದರ ಫಲವನು.


ನಾನಾದರೊ ಹೊಗಳಿ ಹಾಡುವೆ ದೇವಾ, ನಿನ್ನ ಸಾಮರ್ಥ್ಯವನು I ಉದಯಕಾಲದಲೆ ನಾ ಸಂಕೀರ್ತಿಸುವೆ ನಿನ್ನ ಪ್ರೀತಿ ಪ್ರೇಮವನು I ಸಂಕಟದಲ್ಲೆನಗಾದ ಆಶ್ರಯಗಿರಿ, ದುರ್ಗ, ನೀನಲ್ಲವೇನು? II


ಸತ್ಪುರುಷನನ್ನು ಸರ್ವೇಶ್ವರ ಹಸಿವೆಗೊಳಿಸನು; ದುಷ್ಟನ ಆಶೆಯನ್ನಾತ ಭಂಗಪಡಿಸುವನು.


ಸರ್ವೇಶ್ವರ ಒಂದೊಂದನ್ನೂ ಸೃಷ್ಟಿಸಿರುವುದು ಒಂದು ಗುರಿಯಿಟ್ಟೇ ಹೌದು; ಕೆಡುಕರನ್ನು ಉಂಟುಮಾಡಿರುವುದು ಕೇಡಿನ ದಿನಕ್ಕಾಗಿಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು