Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 15:8 - ಕನ್ನಡ ಸತ್ಯವೇದವು C.L. Bible (BSI)

8 ದೇವರ ಆಲೋಚನಾಸಭೆಯಲಿ ನೀನು ಭಾಗವಹಿಸಿದ್ದೆಯೋ? ಜ್ಞಾನವೆಂಬುದು ನಿನಗೆ ಮಾತ್ರ ಮೀಸಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇವರ ಆಲೋಚನಾ ಸಭೆಯಲ್ಲಿದ್ದುಕೊಂಡು ಅಲ್ಲಿ ಹೇಳಿದ್ದನ್ನು ಕೇಳಿದ್ದೀಯಾ? ಜ್ಞಾನವನ್ನೆಲ್ಲಾ ನಿನ್ನ ಕಡೆಗೆ ಸೆಳೆದುಕೊಂಡಿದ್ದೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೇವರ ಆಲೋಚನಾಸಭೆಯಲ್ಲಿದ್ದುಕೊಂಡು ಅಲ್ಲಿ ಹೇಳಿದ್ದನ್ನು ಕೇಳಿದಿಯೇನೋ? ಜ್ಞಾನವನ್ನೆಲ್ಲಾ ನಿನ್ನ ಕಡೆಗೆ ಸೆಳೆದುಕೊಂಡಿದ್ದೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವರ ರಹಸ್ಯ ಯೋಜನೆಗಳನ್ನು ಆಲಿಸಿರುವೆಯಾ? ನೀನೊಬ್ಬನೇ ಜ್ಞಾನಿಯೆಂದು ಭಾವಿಸಿಕೊಂಡಿರುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀನು ದೇವರ ಆಲೋಚನಾ ಸಭೆಯಲ್ಲಿ ಸದಸ್ಯನೋ? ಜ್ಞಾನವು ನಿನಗೆ ಮಾತ್ರ ಮೀಸಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 15:8
18 ತಿಳಿವುಗಳ ಹೋಲಿಕೆ  

“ಪ್ರಭುವಿನ ಮನಸ್ಸನ್ನು ಅರಿತವರಾರು? ಅವರಿಗೆ ಉಪದೇಶಿಸುವವರಾರು?


ಇವರಲ್ಲಿ ಯಾರು ತಾನೆ ಸರ್ವೇಶ್ವರನ ಆಲೋಚನಾ ಸಭೆಯಲ್ಲಿ ಹಾಜರಿದ್ದರು? ಸರ್ವೇಶ್ವರನ ವಾಕ್ಯವನ್ನು ಕೇಳಿ ತಿಳಿದುಕೊಂಡವನಾರು? ಆ ವಾಕ್ಯಕ್ಕೆ ಲಕ್ಷ್ಯಕೊಟ್ಟು ಗ್ರಹಿಸಿಕೊಂಡವನಾರು?


“ಪ್ರಭುವಿನ ಮನಸ್ಸನ್ನರಿತವರಾರು? ಪ್ರಭುವಿಗೆ ಉಪದೇಶಿಸುವವರಾರು?” ಎಂದು ಲಿಖಿತವಾಗಿದೆ. ನಾವಾದರೋ, ಕ್ರಿಸ್ತಯೇಸುವಿನ ಮನೋಭಾವನೆಯುಳ್ಳವರು.


ನಾನಿನ್ನು ನಿಮ್ಮನ್ನು ದಾಸರೆಂದು ಕರೆಯುವುದಿಲ್ಲ. ಧಣಿಯ ಕೆಲಸಕಾರ್ಯಗಳು ದಾಸನಿಗೆ ತಿಳಿಯವು. ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ.


“ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು” ಎಂದು ದೇವರು ಪ್ರವಾದಿಯ ಮುಖಾಂತರ ತಿಳಿಸಿದ್ದ ಪ್ರವಚನವನ್ನು ಯೇಸು ಹೀಗೆ ನೆರವೇರಿಸಿದರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.


ವಕ್ರಬುದ್ಧಿಯವನು ಸರ್ವೇಶ್ವರನಿಗೆ ಅಸಹ್ಯನು, ಸತ್ಯಸಂಧರು ಆತನಿಗೆ ಪ್ರೀತಿಪಾತ್ರರು.


ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


ಆ ದಿನಗಳು ನನ್ನ ಜೀವಮಾನದ ಸುಗ್ಗಿಕಾಲವಾಗಿತ್ತು ದೇವರ ಪ್ರೀತಿ ನನ್ನ ಗುಡಾರವನ್ನು ಆವರಿಸಿತ್ತು.


:ಹೌದ್ಹೌದು ನೀವೇ ಮಹಾಜನ, ನಿಮ್ಮೊಡನೆಯೇ ಸಾಯುವುದು ಸುಜ್ಞಾನ!


ಜ್ಞಾನದ ರಹಸ್ಯಗಳನು ದೇವರೇ ನಿನಗೆ ತಿಳಿಸಲಿ ಸುಜ್ಞಾನ ಬಹುಮುಖವಾದುದೆಂದು ಆತನೇ ತೋರಿಸಲಿ ನಿನ್ನ ದೋಷಗಳನ್ನೆಲ್ಲ ಆತ ಲಕ್ಷಿಸಿಲ್ಲ ಎಂಬುದು ನಿನಗೆ ತಿಳಿದಿರಲಿ.


“ರಹಸ್ಯವಾದವುಗಳು ನಮ್ಮ ದೇವರಾದ ಸರ್ವೇಶ್ವರನಿಗೆ ಸೇರಿದವು. ಆದರೆ ಅವರಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುವು; ಆದುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.


ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು