Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:11 - ಕನ್ನಡ ಸತ್ಯವೇದವು C.L. Bible (BSI)

11 ಸುತ್ತಲಿನ ಅಪಾಯಗಳು ಅವನನ್ನು ಹೆದರಿಸುತ್ತವೆ ಅವನ ಹಿಮ್ಮಡಿ ತುಳಿಯುತ್ತಾ ಅವು ಬೆನ್ನು ಹತ್ತುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಎಲ್ಲಾ ಕಡೆಯಲ್ಲಿಯೂ ಅಪಾಯಗಳು ಅವನನ್ನು ಹೆದರಿಸಿ; ಅವನ ಹಿಮ್ಮಡಿ ತುಳಿಯುತ್ತಾ ಬೆನ್ನು ಹತ್ತುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಎಲ್ಲಾ ಕಡೆಯಲ್ಲಿಯೂ ಅಪಾಯಗಳು ಅವನನ್ನು ಅಂಜಿಸಿ ಹಿಮ್ಮಡಿತುಳಿಯುತ್ತಾ ಬೆನ್ಹತ್ತುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಎಲ್ಲಾ ಕಡೆಗಳಿಂದಲೂ ಅಪಾಯವು ಅವನನ್ನು ಭಯಪಡಿಸುತ್ತದೆ. ಅವನಿಡುವ ಪ್ರತಿಯೊಂದು ಹೆಜ್ಜೆಯನ್ನೂ ಭಯವು ಹಿಂಬಾಲಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ, ಅವನ ಕಾಲುಗಳನ್ನು ಓಡುವಂತೆ ಮಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:11
22 ತಿಳಿವುಗಳ ಹೋಲಿಕೆ  

ಭಯಹುಟ್ಟಿಸುವ ಅಪಾಯಗಳ ಸಪ್ಪಳ ಅವನ ಕಿವಿಯಲ್ಲಿ ಸೂರೆಗಾರನ ಧಾಳಿಯ ದಿಗಿಲು ಅವನು ಸುಖವಿರುವಲ್ಲಿ.


ಊರ ಹೊರಗೆ ಹೋಗುವಂತಿಲ್ಲ, ದಾರಿಯಲ್ಲಿ ನಡೆಯುವಂತಿಲ್ಲ. ಸುತ್ತಮುತ್ತಲೂ ಶತ್ರುವಿನ ಕತ್ತಿ, ಎಲ್ಲೆಲ್ಲೂ ದಿಗಿಲು ಎಂದರೆ ದಿಗಿಲು!”


ಶತ್ರುಗಳು ಅವರ ಗುಡಾರಗಳನ್ನೂ ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. ಅವರ ಗುಡಾರದ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ ತೆಗೆದುಕೊಂಡು ಹೋಗುವರು. ದಿಗಿಲು ನಿಮ್ಮ ಸುತ್ತಮುತ್ತಲು ಆವರಿಸಿದೆ ಎಂದು ಅವರಿಗೆ ಕೂಗಿ ಹೇಳುವರು.


“ಆದರೆ, ನನ್ನ ಕಣ್ಣಿಗೆ ಕಾಣುತ್ತಿರುವುದೇನು? ಅವರು ಓಡುತ್ತಿರುವರು ನೋಡು, ಧೈರ್ಯಗೆಟ್ಟು, ಬೆನ್ನುಗೊಟ್ಟು. ಅವರ ಶೂರರು ಹಿಂದಿರುಗದೆ ಓಡುತ್ತಿರುವರು ಪೆಟ್ಟುತಿಂದು, ದಿಗಿಲು ಕವಿದಿದೆ ಸುತ್ತ ಮುತ್ತಲು,” ಸರ್ವೇಶ್ವರನ ವಾಣಿ ಇದು.


ಆ ಬಾಣವನು ಕೀಳಲು ಅದು ಹೊರಬಂತು ಅವನ ಬೆನ್ನಿನಿಂದ ಅದರ ಮಿಂಚುಮೊನೆ ಆಚೆಬಂತು ಅವನ ಪಿತ್ತಕೋಶದಿಂದ ಅವನನು ಆವರಿಸಿಕೊಂಡಿತು ಭಯಭ್ರಾಂತ.


“ನಿಮ್ಮಲ್ಲಿ ಯಾರ್ಯಾರು ಶತ್ರುದೇಶಗಳಲ್ಲಿ ಅಳಿದುಳಿದಿರುವಿರೋ ಅವರ ಅಂತರಾಳದಲ್ಲಿ ಭಯಭೀತಿಯನ್ನು ಹುಟ್ಟಿಸುವೆನು. ಗಾಳಿಗೆ ತೂರಾಡುವ ತರಗೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು.ಆ ಸಪ್ಪಳ ಕೇಳಿ, ಖಡ್ಗಕ್ಕೆ ಹೆದರಿ ಓಡಿಹೋಗುವವರಂತೆ ಫೇರಿಕೀಳುವರು. ಯಾರೂ ಬೆನ್ನಟ್ಟಿಬಾರದಿದ್ದರೂ ಅವರು ಎದ್ದುಬಿದ್ದು ಓಡುವರು.


ಪ್ರಭುವಿನ ಭಯಭಕ್ತಿ ನಮಗಿರುವುದರಿಂದ ನಾವು ಮಾನವರ ಮನವೊಲಿಸಲು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲರು. ಅದು ನಿಮ್ಮ ಮನಸ್ಸಾಕ್ಷಿಗೂ ಅರಿವಾಗಿದೆಯೆಂದು ನಂಬುತ್ತೇವೆ.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಸತ್ಯಸಂಧನು ಸಿಂಹದಂತೆ ಧೈರ್ಯದಿಂದಿರುವನು.


ಕ್ಷಣ ಮಾತ್ರದಲಿ ಅಳಿದು ಹಾಳಾಗುವರು I ಭೀಕರವಾಗಿ ನಿರ್ಮೂಲವಾಗುವರು II


ದಿಗ್ಭ್ರಾಂತರಾಗುವರಿದೋ ಹಿಂದೆಂದು ಇಲ್ಲದಂತೆ ದುರುಳರು I ದೇವರಿಂದ ತಿರಸ್ಕೃತವಾದ ಅವರು ಪರಾಜಿತರಾಗುವರು I ದಿಕ್ಕುಪಾಲಾಗುವುವು ನಿಮ್ಮ ಮೇಲೆ ಬಿದ್ದವರ ಮೂಳೆಗಳು II


ಸ್ವಪ್ನದಂತೆ ಅವನು ಸಿಗದೆ ಹಾರಿಹೋಗುವನು ರಾತ್ರಿಯ ಕನಸಿನಂತೆ ಓಡಿಹೋಗುವನು.


ನನ್ನ ಮನದೊಳು ಸರ್ವಶಕ್ತನ ಬಾಣಗಳು ನಾಟಿವೆ ನನ್ನ ಅಂತರಂಗದೊಳು ಅವುಗಳ ವಿಷ ಹೀರಲಾಗುತ್ತಿದೆ ದೇವರಿಂದ ಬಂದ ಆತಂಕಗಳು ನನ್ನನು ಸುತ್ತುವರೆದಿವೆ.


ಅವನಿಗಾಗಿ ಜಾಲವನ್ನು ಅವಿತಿಡಲಾಗಿದೆ ದಾರಿಯಲಿ ಅವನಿಗಾಗಿ ಪಾಶವನ್ನು ಹೂತಿಡಲಾಗಿದೆ ನೆಲದಲಿ.


ಅವನನ್ನು ಬೆಳಕಿನಿಂದ ತಳ್ಳುವರು ಕತ್ತಲಿಗೆ ಅಟ್ಟಿಬಿಡುವರು ಅವನನ್ನು ಲೋಕದಿಂದಲೆ.


ಅದು ಹಾದುಹೋಗುವಾಗಲೆಲ್ಲಾ ನಿಮ್ಮನ್ನು ಹಿಡಿದುಬಿಡುವುದು. ಪ್ರತಿದಿನವೂ ಹಗಲೂ ರಾತ್ರಿ ಅದು ಹಾದುಹೋಗುವುದು. ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು.


ಆಗ ರಾಜ ಬೇಲ್ಶಚ್ಚರನು ಬಹಳ ಕಳವಳಗೊಂಡನು. ಅವನ ಮುಖ ಕಳೆಗುಂದಿತು. ಅವನ ಸಾಮಂತರು ದಿಕ್ಕುತೋಚದವರಾದರು.


ಫಿಲಿಷ್ಟಿಯರ ಪಾಳೆಯವನ್ನು ಕಂಡಾಗ ಭಯಭೀತಿಯಿಂದ ಅವನ ಎದೆಯೊಡೆಯಿತು.


ನಿನ್ನ ಸುತ್ತಲು ಉರುಲುಗಳು ಕಾದಿವೆ ಈ ಕಾರಣ ನಿನ್ನನು ತಲ್ಲಣಗೊಳಿಸಲಿದೆ ಭಯಭ್ರಾಂತಿ ತಟ್ಟನೆ.


ವಿಪತ್ತುಗಳು ಅವನನ್ನು ಹಿಂದಟ್ಟಿ ಹಿಡಿಯುವುವು ಹೊಳೆಯಂತೆ ಬಿರುಗಾಳಿ ಅವನನ್ನು ಅಪಹರಿಸುವುದು ರಾತ್ರಿಯಲ್ಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು