Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:21 - ಕನ್ನಡ ಸತ್ಯವೇದವು C.L. Bible (BSI)

21 ಕೇಡಿಗರ ನಿವಾಸಗಳ ಗತಿ ಹೀಗೆಯೇ ದೇವರನು ಅಲಕ್ಷಿಸುವವನ ಸ್ಥಿತಿ ಇದುವೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕೆಡುಕರ ನಿವಾಸಗಳ ಸ್ಥಿತಿಯು ಇಂಥದೇ. ದೇವರನ್ನು ಲಕ್ಷಿಸದವನ ಸ್ಥಿತಿಯು ಹೀಗೆಯೇ ಇರುತ್ತದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಕೆಡುಕರ ನಿವಾಸಗಳ ಅವಸ್ಥೆಯು ಇಂಥದೇ. ದೇವರನ್ನು ಲಕ್ಷಿಸದವನ ಸ್ಥಿತಿಯು ಹೀಗೆಯೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇದು ಸತ್ಯ, ದುಷ್ಟನ ಮನೆಗೆ ಇದೇ ಸಂಭವಿಸುವುದು. ದೇವರ ಬಗ್ಗೆ ಗಮನಕೊಡದ ವ್ಯಕ್ತಿಗೆ ಇದೇ ಸಂಭವಿಸುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿಶ್ಚಯವಾಗಿ ದುಷ್ಟರ ನೆಲೆಯು ಹೀಗೆಯೇ ಇರುವುದು; ದೇವರನ್ನು ಅರಿಯದವನ ಸ್ಥಿತಿ ಇದೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:21
16 ತಿಳಿವುಗಳ ಹೋಲಿಕೆ  

ಸರ್ವೇಶ್ವರ : “ಸುಳ್ಳಾಡಲು ಬಿಲ್ಲಿನಂತೆ ನಾಲಿಗೆ ಬಗ್ಗಿಸುತ್ತಾರೆ ಸತ್ಯಕ್ಕೆ ಪ್ರತಿಕೂಲವಾಗಿಯೆ ನಾಡಿನಲ್ಲಿ ಪ್ರಬಲಿಸಿದ್ದಾರೆ ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನಾದರೊ ಅರಿಯದೆ ಇದ್ದಾರೆ.”


ತಾವು ದೇವರನ್ನು ಬಲ್ಲವರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಇಂಥವರು ಅವಿಧೇಯರೂ ಅಸಹ್ಯರೂ ಆಗಿರುವುದರಿಂದ ಯಾವುದೇ ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆ.


ದೇವರ ಅರಿವೇ ಇಲ್ಲದ ಅನ್ಯಜನರಂತೆ ಕಾಮಾತಿರೇಕದಿಂದ ವರ್ತಿಸಬಾರದು.


ಸರ್ವೇಶ್ವರಾ, ನಿಮ್ಮನ್ನು ಅರಿತುಕೊಳ್ಳದವರ ಮೇಲೆ ನಿಮ್ಮ ನಾಮವನ್ನು ಉಚ್ಚರಿಸದವರ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿದುಬಿಡಿ. ಅವರು ಯಕೋಬ್ಯರನ್ನು ಕಬಳಿಸಿದ್ದಾರೆ ಹೌದು, ಪೂರ್ತಿಯಾಗಿ ಕಬಳಿಸಿಬಿಟ್ಟಿದ್ದಾರೆ ಅವರ ನಿವಾಸಗಳನ್ನು ನಾಶಮಾಡಿದ್ದಾರೆ.


ಅವನ ಕಾಲದವರೆಲ್ಲರೂ ತಮ್ಮ ಪೂರ್ವಜರಂತೆ ದೈವಾಧೀನರಾದ ಮೇಲೆ ಬೇರೊಂದು ಸಂತಾನ ಹುಟ್ಟಿಕೊಂಡಿತು. ಇವರು ಸರ್ವೇಶ್ವರಸ್ವಾಮಿಯನ್ನು ಮರೆತರು; ಇಸ್ರಯೇಲರಿಗೆ ಮಾಡಿದ ಮಹತ್ಕಾರ್ಯಗಳ ನೆನಪು ಇವರಿಗೆ ಇರಲಿಲ್ಲ.


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ಸುರಿ ರೌದ್ರವನು ನಿನ್ನನರಿಯದಾ ಮ್ಲೇಚ್ಛರ ಮೇಲೆ I ನಿನ್ನ ಶ್ರೀನಾಮವನು ಉಚ್ಚರಿಸದಾ ರಾಜ್ಯಗಳ ಮೇಲೆ II


ನಿಮ್ಮ ಪ್ರಶ್ನೆ ಇದು: “ಆ ಖದೀಮನ ಮನೆ ಏನಾಯಿತು? ಆ ದುರುಳರು ನಿವಾಸಿಸುತ್ತಿದ್ದ ಗುಡಾರ ಏನಾಯಿತು?”


ಆದರೆ ಈ ದುರುಳರೇ, ದೇವರಿಗೆ, ‘ನಮ್ಮನ್ನು ಬಿಟ್ಟು ತೊಲಗು, ನಮಗೆ ಬೇಡವಾಗಿದೆ ನಿನ್ನ ಮಾರ್ಗದ ಅರಿವು’.


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ಏಲಿಯ ಮಕ್ಕಳು ಮಹಾದುಷ್ಟರು. ಅವರು ಸರ್ವೇಶ್ವರನನ್ನು ಲಕ್ಷಿಸುತ್ತಿರಲಿಲ್ಲ.


ಅದಕ್ಕೆ ಫರೋಹನು, “ 'ಸರ್ವೇಶ್ವರ' ಎಂಬುವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಯೇಲರನ್ನು ಹೋಗಬಿಡಬೇಕೊ? ಆ ಸರ್ವೇಶ್ವರನು ಯಾರೋ ನನಗೆ ಗೊತ್ತಿಲ್ಲ. ಇಸ್ರಯೇಲರನ್ನು ನಾನು ಹೋಗಬಿಡುವುದಿಲ್ಲ,” ಎಂದು ಬಿಟ್ಟನು.


ಅವರ ಗುಡಾರದ ಗೂಟವನ್ನು ಕೀಳಲಾಗುವುದು ಬುದ್ಧಿಹೀನರಾಗಿಯೆ ಅವರು ಸತ್ತುಹೋಗುವರು.


ಆಗ ಯೋಬನು ಮತ್ತೆ ಹೀಗೆಂದನು:


ಇದುವೆ ದುರುಳನಿಗೆ ದೇವರು ವಿಧಿಸುವ ಭಾಗ್ಯ ದೇವರಿಂದ ಅವನಿಗೆ ನೇಮಿಸಲಾಗಿರುವ ಸ್ವಾಸ್ತ್ಯ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು