Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 2:13 - ಕನ್ನಡ ಸತ್ಯವೇದವು C.L. Bible (BSI)

13 ಯೋಬನು ಅನುಭವಿಸುತ್ತಿದ್ದ ಅಪಾರ ಬಾಧೆಯನ್ನು ನೋಡಿ ಆತನೊಂದಿಗೆ ಏನನ್ನೂ ಮಾತನಾಡದೆ ಏಳು ದಿನಗಳವರೆಗೆ ಹಗಲಿರುಳೂ ಅವನ ಹತ್ತಿರದಲ್ಲೇ ನೆಲದ ಮೇಲೆ ತೆಪ್ಪನೆ ಕುಳಿತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಬಳಿಕ ಅವನಿಗೆ ವಿಪರೀತ ಬಾಧೆ ಎಂದು ತಿಳಿದು ಏಳು ದಿನಗಳವರೆಗೆ ಹಗಲಿರುಳೂ ನೆಲದ ಮೇಲೆ ಅವನೊಂದಿಗೆ ಕುಳಿತುಕೊಂಡರು. ಅವನ ಸಂಗಡ ಒಬ್ಬರೂ ಮಾತನಾಡದೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಬಳಿಕ ಅವನಿಗೆ ವಿಪರೀತ ಬಾಧೆ ಎಂದು ತಿಳಿದು ಏಳು ದಿನಗಳವರೆಗೆ ಹಗಲಿರುಳೂ ನೆಲದ ಮೇಲೆ ಅವನೊಂದಿಗೆ ಕುಳಿತು ಅವನ ಸಂಗಡ ಒಬ್ಬರೂ ಮಾತಾಡದೆಯೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಳಿಕ ಆ ಮೂವರು ಸ್ನೇಹಿತರು ಏಳುದಿನ ಹಗಲಿರುಳು ಯೋಬನೊಂದಿಗೆ ನೆಲದ ಮೇಲೆ ಕುಳಿತುಕೊಂಡಿದ್ದರು. ಯೋಬನು ವಿಪರೀತ ನೋವಿನಲ್ಲಿದ್ದ ಕಾರಣ ಅವರು ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅನಂತರ ಯೋಬನು ಅನುಭವಿಸುತ್ತಿದ್ದ ಬಾಧೆಯು ಎಷ್ಟು ಕ್ರೂರವೆಂದು ಅವರು ನೋಡಿ, ಅವನ ಸಂಗಡ ಏಳು ಹಗಲು, ಏಳು ರಾತ್ರಿ ನೆಲದ ಮೇಲೆ ಕುಳಿತುಕೊಂಡಿದ್ದರು. ಒಬ್ಬನಾದರೂ ಒಂದು ಮಾತನ್ನೂ ಯೋಬನಿಗೆ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 2:13
12 ತಿಳಿವುಗಳ ಹೋಲಿಕೆ  

ಅವರು ಜೋರ್ಡನ್ ನದಿಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು; ಜೋಸೆಫನು ತನ್ನ ತಂದೆಗೋಸ್ಕರ ಏಳು ದಿನದ ಶೋಕಾಚರಣೆಯನ್ನು ಏರ್ಪಡಿಸಿದನು.


ಅನಂತರ ಕೆಬಾರ್ ನದಿಯ ಹತ್ತಿರ ತೇಲ್ ಅಬೀಬ್‍ನಲ್ಲಿ ವಾಸವಾಗಿದ್ದ ಗಡೀಪಾರಾಗಿ ಸೆರೆಯಾಳುಗಳಾಗಿದ್ದವರ ಬಳಿಗೆ ಬಂದೆ. ಅವರು ಕೂತಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆ; ಏಳು ದಿವಸ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ದನಾಗಿ ಇದ್ದುಬಿಟ್ಟೆ.


ನಾನು ಈ ಸಮಾಚಾರವನ್ನು ಕೇಳಿದಾಗ ನೆಲಕಚ್ಚಿ ಕುಳಿತು ಅತ್ತೆ; ಹಲವಾರು ದಿನಗಳವರೆಗೆ ಶೋಕಿಸಿದೆ, ಉಪವಾಸವಿದ್ದೆ, ಪರಲೋಕ ದೇವರ ಮುಂದೆ ಪ್ರಾರ್ಥನೆ ಮಾಡುತ್ತಾ ಇದ್ದೆ.


ನಿನ್ನ ಪುರದ್ವಾರಗಳಲ್ಲಿ ದುಃಖ ಪ್ರಲಾಪ ತುಂಬಿರುವುದು. ನೀನು ನಗ್ನಳಂತೆ ನೆಲದ ಮೇಲೆ ಕುಳಿತುಬಿಡುವೆ.


ನಿದ್ರಿಸದಂತೆ ನೀನೆನ್ನ ಕಣ್‍ಗಳ ತೆರೆದಿರುವೆ I ನುಡಿಯಲಾಗದ ತೆರದಿ ನಾ ತಳಮಳಗೊಂಡಿರುವೆ II


“ಯಾರಾದರೂ ನಿನ್ನೊಡನೆ ಮಾತನಾಡಿದರೆ ಬೇಸರವೇಕೆ ನಿನಗೆ? ಆದರೂ ಯಾರಿಂದಾದೀತು ಮಾತನಾಡದೆ ಸುಮ್ಮನಿರುವುದಕ್ಕೆ?


ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟರು. ಹೀಗೆ ಬೈಗೂ ಬೆಳಗೂ ಆಗಿ ಎರಡನೆಯ ದಿನ ಆಯಿತು.


ಹೀಗೆ ಬೈಗೂ ಬೆಳಗೂ ಆಗಿ ಮೊದಲನೆಯ ದಿನವಾಯಿತು.


ಈ ಸಮಾಚಾರವನ್ನು ಕೇಳಿದೊಡನೆ ನಾನು ಸಿಟ್ಟಿನಿಂದ ಬಟ್ಟೆಗಳನ್ನೂ ಮೇಲಂಗಿಯನ್ನೂ ಹರಿದುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆ.


“ಕೆಳಕ್ಕಿಳಿದು ಬಾ, ಯುವತಿಯೇ ಧೂಳಲ್ಲಿ ಕುಳಿತುಕೋ, ಬಾಬೆಲೆ ! ಕುವರಿಯೇ, ಕುಕ್ಕರಿಸು ನೆಲದಲಿ ಸಿಂಹಾಸನವಿಲ್ಲ ಇಲ್ಲಿ. ಎಲೈ, ಕಸ್ದೀಯರ ನಗರಿಯೇ, ನೀನಲ್ಲ ಇನ್ನು ಕೋಮಲೆ,, ಸುಕುಮಾರಿ ಎಂದು ಎನಿಸಿಕೊಳ್ಳೆ.


ಕೊನೆಗೆ ಯೋಬನೇ ಬಾಯ್ದೆರೆದು ತನ್ನ ಹುಟ್ಟು ದಿನವನ್ನು ಹೀಗೆಂದು ಶಪಿಸಿದ:


ತಲೆಯ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸೊಂಟಕ್ಕೆ ಸುತ್ತಿಕೊಂಡು ಕುಕ್ಕರಿಸಿಹರು ಸಿಯೋನ್ ನಗರಿಯ ಪ್ರಮುಖರು ತಲೆ ತಗ್ಗಿಸಿಹರು ಜೆರುಸಲೇಮಿನ ಯುವತಿಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು