Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:18 - ಕನ್ನಡ ಸತ್ಯವೇದವು C.L. Bible (BSI)

18 ತಾನು ದುಡಿದು ಗಳಿಸಿದ್ದನ್ನು ತಿಂದು ಅನುಭವಿಸಲಾರನು ಅದು ಪರರ ಪಾಲಾಗುವುದು ವ್ಯಾಪಾರದಿಂದ ಬಂದ ವರಮಾನ ಅವನಿಗೆ ಆನಂದ ತರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನು ದುಡಿದದ್ದನ್ನು ಅನುಭವಿಸದೆ ಪರರ ಪಾಲು ಮಾಡುವನು, ಅವನ ಲಾಭದಿಂದಾಗತಕ್ಕ ಆನಂದವು ಅವನಿಗೆ ಸಿಕ್ಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನು ದುಡಿದದ್ದನ್ನು ಅನುಭವಿಸದೆ ಪರರ ಪಾಲು ಮಾಡುವನು, ಅವನ ಲಾಭದಿಂದಾಗತಕ್ಕ ಆನಂದವು ಅವನಿಗೆ ಸಿಕ್ಕುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದುಷ್ಟನು ಗಳಿಸಿದ ಲಾಭಗಳು ಬೇರೆಯವರ ಪಾಲಾಗುವುದು. ತನ್ನ ಲಾಭವನ್ನು ಅನುಭವಿಸಲು ಅವನಿಗೆ ಸಾಧ್ಯವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನು ತನ್ನ ಪ್ರಯಾಸದ ಫಲವನ್ನು ಸವಿಯದೆ ಪರರಿಗೆ ಕೊಡಬೇಕಾಗುವುದು; ಅವನು ತಾನು ಪಡೆದ ಲಾಭದ ಆನಂದವನ್ನು ಅನುಭವಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:18
25 ತಿಳಿವುಗಳ ಹೋಲಿಕೆ  

“ಬಾಬಿಲೋನಿಯದ ಬೇಲ್‍ದೇವತೆಯನ್ನು ದಂಡಿಸುವೆನು. ಅದು ನುಂಗಿದ್ದನ್ನು ಅದರ ಬಾಯಿಂದಲೇ ಕಕ್ಕಿಸುವೆನು. ಪ್ರವಾಹವಾಗಿ ಅಲ್ಲಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಬಾರರು. ಆ ಬಾಬಿಲೋನಿನ ಪೌಳಿಗೋಡೆ ಇನ್ನು ಬಿದ್ದುಹೋಗುವುದು.


“ನೆರೆಯವನಿಗೆ ಕೂಲಿಕೊಡದೆ ಬಿಟ್ಟಿಕೆಲಸ ಮಾಡಿಸಿಕೊಂಡು ಅರಮನೆಯನ್ನು ಕಟ್ಟಿಸಿಕೊಳ್ಳುವವನಿಗೆ ಧಿಕ್ಕಾರ ! ಅವನು ಅರಮನೆಯನ್ನು ಕಟ್ಟಿಸಿಕೊಳ್ಳುವುದು ಅನೀತಿಯಿಂದ ಮಹಡಿಗಳನ್ನು ನಿರ್ಮಿಸಿಕೊಳ್ಳುವುದು ಅನ್ಯಾಯದಿಂದ.


ಪಾತಾಳಕ್ಕಿಳಿಯುವವರನ್ನು ನರಕ ನುಂಗುವಂತೆ ಅವರನ್ನು ಜೀವಸಹಿತ ಪೂರ್ತಿಯಾಗಿ ಕಬಳಿಸಿಬಿಡೋಣ ಬಾ;


ನುಂಗಿದ ಗಂಟನು ಅವನು ಹೊರಗೆ ಕಕ್ಕುವನು ಹೊಟ್ಟೆಯಿಂದ ದೇವರು ಅದನು ಹೊರಡಿಸುವನು.


ಅವನ ಮಕ್ಕಳು ಬಡವರಿಗೆ ಪರಿಹಾರವನು ತೆರುವರು ಅವನ ಕೈಗಳೆ ಅವನಾಸ್ತಿಯನು ಹಿಂತಿರುಗಿಸಬೇಕಾಗುವುದು.


ಅಂಧನಿರ್ದೇಶಕರೇ, ನೀವು ಸೊಳ್ಳೆಯನ್ನೇನೋ ಸೋಸುತ್ತೀರಿ, ಆದರೆ ಒಂಟೆಯನ್ನೇ ನುಂಗಿಬಿಡುತ್ತೀರಿ.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ನನ್ನನ್ನು ಮುರಿದು ತಿಂದುಬಿಟ್ಟ ನನ್ನನ್ನು ಕುಡಿದು ಬಿಸಾಡಿದ ಪಾತ್ರೆಯನ್ನಾಗಿಸಿಬಿಟ್ಟ. ಘಟಸರ್ಪದ ಹಾಗೆ ನನ್ನನ್ನು ನುಂಗಿದ ನನ್ನ ರುಚಿಪದಾರ್ಥಗಳಿಂದ ಹೊಟ್ಟೆ ತುಂಬಿಸಿಕೊಂಡ ಮಿಕ್ಕಿದುದನ್ನೆಲ್ಲ ತೊಳೆದು ಎಸೆದುಬಿಟ್ಟ.


ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”


ನನ್ನ ವೈರಿಗೆ ಕೇಡುಬಂದಾಗ ನಾನು ಹಿಗ್ಗಿದೆನೋ? ಅವನ ವಿನಾಶಕ್ಕಾಗಿ ನಾನು ಸಂತೋಷಪಟ್ಟೆನೋ?


ನನ್ನ ಆಸ್ತಿ ಅಪಾರವೆಂದು ಕೊಚ್ಚಿಕೊಂಡಿದ್ದರೆ ನಾನೇ ಸಂಪಾದಿಸಿದ ಸಂಪತ್ತೆಂದು ಹೆಚ್ಚಳಪಟ್ಟಿದ್ದರೆ,


ದುಷ್ಟನ ಜಯಘೋಷ ಅಲ್ಪಕಾಲದ್ದು ಭ್ರಷ್ಟನ ಉಲ್ಲಾಸ ಕ್ಷಣಿಕವಾದದ್ದು.


ದಿಕ್ಕಿಲ್ಲದವರನ್ನು ತುಳಿದುಬಿಡುವವರೇ, ನಾಡಿನ ಬಡವರನ್ನು ನಿರ್ಮೂಲ ಮಾಡುವವರೇ, ಕೇಳಿ,


ಇಸ್ರಯೇಲ್, ಹರ್ಷಿಸದಿರು; ಇತರ ರಾಷ್ಟ್ರಗಳೊಡನೆ ಆನಂದಿಸದಿರು. ನಿನ್ನ ದೇವರನ್ನು ತೊರೆದು ವ್ಯಭಿಚಾರ ಮಾಡಿರುವೆ. ಇತರರ ಕಣಗಳಿಂದ ದೊರಕುವ ಕಾಳು ನಿನ್ನ ವ್ಯಭಿಚಾರದ ಸಂಭಾವನೆಯೆಂದು ಹಂಬಲಿಸಿರುವೆ.


“ಸಮಯ ಬಂದಿದೆ, ದಿನ ಹತ್ತಿರವಾಗಿದೆ; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿ ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.


ನಿನ್ನನ್ನು ನೋಡಿ ಶತ್ರುಗಳೆಲ್ಲರು ಕಟಕಟನೆ ಹಲ್ಲು ಕಡಿಯುತ್ತಾರಲ್ಲಾ ಬಾಯಿ ಕಿಸಿದು ! “ಹಾ, ಆಕೆಯನ್ನು ಕಬಳಿಸಿಬಿಟ್ಟೆವು ಈ ದಿನಕ್ಕಾಗಿಯೆ ನಾವು ಕಾದಿದ್ದೆವು ಈಗ ಅದನ್ನು ಕಣ್ಣಾರೆ ಕಂಡೆವು” ಎಂದು ಕೊಚ್ಚಿಕೊಳ್ಳುತ್ತಾರಲ್ಲಾ !


ಸಜ್ಜನರು ಧರಿಸಿಕೊಳ್ಳುವರು ಆ ವಸ್ತ್ರಗಳನು ನಿರ್ದೋಷಿಗಳು ಹಂಚಿಕೊಳ್ಳುವರು ಆ ಬೆಳ್ಳಿಯನು.


ನಾನು ಬಿತ್ತಿದ್ದನ್ನು ಮತ್ತೊಬ್ಬ ಉಣ್ಣಲಿ ನನ್ನ ಬೆಳೆಯು ಬುಡಮೇಲಾಗಲಿ.


ಬುದ್ಧಿವಂತನ ಮನೆಯ ಸಿರಿ, ಎಣ್ಣೆ ಬೆಣ್ಣೆ; ಬುದ್ಧಿಹೀನನು ನುಂಗಿಬಿಡುವನು ಸರ್ವಸ್ವವನ್ನೆ.


“ನೀವು ಮದುವೆಮಾಡಿಕೊಂಡ ಮಹಿಳೆಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿದ ದ್ರಾಕ್ಷಿತೋಟದ ಬೆಳೆ ನಿಮಗೆ ದೊರಕದು.


ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ನಾಡಿನ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ನಿರಂತರ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು