Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:23 - ಕನ್ನಡ ಸತ್ಯವೇದವು C.L. Bible (BSI)

23 ಸರ್ವಶಕ್ತನ ಕಡೆಗೆ ಹಿಂದಿರುಗಿದೆಯಾದರೆ ನಿನ್ನ ಗುಡಾರಗಳಿಂದ ಅನ್ಯಾಯವನು ತೊರೆದೆಯಾದರೆ, ನೀನು ಉದ್ಧಾರವಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀನು ಸರ್ವಶಕ್ತನಾದ ದೇವರ ಕಡೆಗೆ ತಿರುಗಿಕೊಂಡು, ನಿನ್ನ ಗುಡಾರಗಳಿಂದ ಅನ್ಯಾಯವನ್ನು ದೂರಮಾಡಿದರೆ ಉದ್ಧಾರವಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀನು ಸರ್ವಶಕ್ತನ ಕಡೆಗೆ ತಿರುಗಿಕೊಂಡು ನಿನ್ನ ಗುಡಾರಗಳಿಂದ ಅನ್ಯಾಯವನ್ನು ದೂರಮಾಡಿದರೆ ಉದ್ಧಾರವಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೋಬನೇ, ನೀನು ಸರ್ವಶಕ್ತನಾದ ದೇವರಿಗೆ ಅಭಿಮುಖನಾಗಿ ನಿನ್ನ ಮನೆಯಲ್ಲಿರುವ ಪಾಪವನ್ನು ನಿರ್ಮೂಲಮಾಡಿದರೆ ಉದ್ಧಾರವಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರಮಾಡಿ, ಸರ್ವಶಕ್ತರ ಕಡೆಗೆ ನೀನು ತಿರುಗಿಕೊಂಡರೆ, ನೀನು ಪುನಃಸ್ಥಾಪಿತವಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:23
20 ತಿಳಿವುಗಳ ಹೋಲಿಕೆ  

ಎಂದೇ ನೀನು ನನ್ನ ಜನರಿಗೆ ಹೀಗೆಂದು ಹೇಳು: “ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ಮರಳಿ ನನಗೆ ಅಭಿಮುಖರಾಗಿರಿ. ಆಗ ನಾನು ನಿಮಗೆ ಮರಳಿ ಅಭಿಮುಖನಾಗುವೆನು.


ಪ್ರಿಯರೇ, ನೀವಾದರೋ ಅತಿ ಪರಿಶುದ್ಧ ವಿಶ್ವಾಸದ ಆಧಾರದ ಮೇಲೆ ನಿರ್ಮಿಸಲಾದ ಮಂದಿರದಂತೆ ಪ್ರವರ್ಧಿಸಿರಿ; ಪವಿತ್ರಾತ್ಮ ಅವರಿಂದ ಪ್ರೇರಿತರಾಗಿ ಪ್ರಾರ್ಥಿಸಿರಿ.


ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.


ಅವರಲ್ಲಿ ಸ್ಥಿರವಾಗಿರಿ. ಅವರನ್ನೇ ಅವಲಂಬಿಸಿ ನಿಮ್ಮ ಬಾಳೆಂಬ ಸೌಧವನ್ನು ನಿರ್ಮಿಸಿರಿ. ನೀವು ಕಲಿತುಕೊಂಡಿರುವಂತೆ ನಿಮ್ಮ ವಿಶ್ವಾಸ ಅವರಲ್ಲಿ ದೃಢವಾಗಿರಲಿ. ಕೃತಜ್ಞತೆಯು ನಿಮ್ಮಲ್ಲಿ ಉಕ್ಕೇರಲಿ.


ದಮಸ್ಕಸ್ ಮೊದಲ್ಗೊಂಡು ಜೆರುಸಲೇಮಿಗೂ ಮತ್ತು ಎಲ್ಲ ಜುದೇಯ ನಾಡಿಗೂ ಹಾಗೂ ಅನ್ಯಧರ್ಮೀಯರಲ್ಲಿಗೂ ಹೋಗಿ, ಜನರು ತಮ್ಮತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೈವಾಭಿಮುಖಿಗಳಾಗಬೇಕೆಂದು ಬೋಧಿಸಿದೆ; ಪಶ್ಚಾತ್ತಾಪ ಸೂಚಕಕಾರ್ಯಗಳನ್ನು ಕೈಗೊಳ್ಳುವಂತೆ ಘೋಷಿಸಿದೆ.


ಇಸ್ರಯೇಲೆಂಬ ಯುವತಿಯೇ, ನಿನ್ನ ಪಾಳುಬಿದ್ದ ಪ್ರದೇಶಗಳನ್ನು ನಾನು ಪುನಃ ಕಟ್ಟುವೆನು, ಅವು ಕಟ್ಟಡಗಳಿಂದ ಕೂಡಿರುವುವು. ನೀನು, ಮತ್ತೆ ತಾಳಮೇಳಗಳನ್ನು ತೆಗೆದುಕೊಂಡು ನಲಿದಾಡುವವರ ನಾಟ್ಯಗಳಲ್ಲಿ ಭಾಗವಹಿಸುವೆ.


ಸನ್ಮಾರ್ಗದಲ್ಲಿ ನಡೆವವನು, ಸತ್ಯವನ್ನೇ ನುಡಿವವನು, ಬಲಾತ್ಕಾರ್ಯದಿಂದ ಲಭಿಸಿದ್ದನ್ನು ತಿರಸ್ಕರಿಸುವವನು, ಲಂಚಕ್ಕೆ ಕೈಚಾಚದೆ ಹಿಂದಕ್ಕೆ ಸರಿವವನು, ಕೊಲೆ ಮಾತುಗಳಿಗೆ ಕಿವಿ ಮುಚ್ಚಿಕೊಳ್ಳುವವನು, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನು - ಇಂಥವನೇ ಉನ್ನತ ಸ್ಥಾನದಲ್ಲಿ ವಾಸಿಸುವನು.


ಸರ್ವೇಶ್ವರ ಇಂತೆಂದರು : “ಇಸ್ರಯೇಲಿನ ಜನರೇ, ನೀವು ನನಗೆ ದೊಡ್ಡ ದ್ರೋಹಮಾಡಿದಿರಿ. ಈಗಲಾದರೂ ನನ್ನ ಕಡೆಗೆ ತಿರುಗಿಕೊಳ್ಳಿರಿ.


ಇದಲ್ಲದೆ ಸರ್ವೇಶ್ವರ ಈಜಿಪ್ಟಿನವರನ್ನು ದಂಡಿಸುವರು, ಗಾಯಗೊಳಿಸಿದರೂ ಗುಣಪಡಿಸುವರು. ಈಜಿಪ್ಟಿನವರು ಸ್ವಾಮಿಯ ಕಡೆಗೆ ತಿರುಗಿಕೊಳ್ಳುವರು. ಸ್ವಾಮಿ ಅವರ ಮೊರೆಯನ್ನು ಆಲಿಸಿ ಅವರನ್ನು ಗುಣಪಡಿಸುವರು.


ಅನ್ಯಜನರು ವಾಸಮಾಡುವರು ಅವನ ಗುಡಾರದೊಳಗೆ ಗಂಧಕವನ್ನು ಸುರಿಸಲಾಗುವುದು ಅವನ ಮನೆಯ ಮೇಲೆ.


ಆತ ಕೆಡವಿದ್ದನ್ನು ಯಾರಿಂದಲೂ ಕಟ್ಟಲಾಗದು ಆತ ಸೆರೆಹಿಡಿದವರನ್ನು ಯಾರಿಂದಲೂ ಬಿಡಿಸಲಾಗದು.


ಅವರು ಆಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿದರು. ಅವನನ್ನು ಮರಳಿ ಜೆರುಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟರು. ಆಗ ಸರ್ವೇಶ್ವರಸ್ವಾಮಿಯೇ ದೇವರು ಎಂಬುದು ಅವನಿಗೆ ಮನದಟ್ಟಾಯಿತು.


ಪಾಪವನು ಕ್ಷಮಿಸುವವನು ನೀನು I ಎಂತಲೆ ಭಯಭಕ್ತಿಗೆ ಪಾತ್ರನು II


ನನ್ನನ್ನು ಜನರು ಮರೆಹೋಗುತ್ತಾ ಹೀಗೆನ್ನುವರು: “ಬನ್ನಿ, ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗೋಣ. ಅವರು ನಮ್ಮನ್ನು ಛಿದ್ರಗೊಳಿಸಿದವರು. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ; ಅವರೇ ನಮ್ಮ ಗಾಯಗಳನ್ನು ಕಟ್ಟಿ ಗುಣಪಡಿಸುವರು. ಒಂದೆರಡು ದಿನಗಳ ನಂತರ ಅವರು ನಮ್ಮನ್ನು ಬದುಕಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು