Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 24:13 - ಕನ್ನಡ ಸತ್ಯವೇದವು C.L. Bible (BSI)

13 ಬೆಳಕನ್ನು ಪ್ರತಿಭಟಿಸುವವರಿದ್ದಾರೆ ಅದರ ಮಾರ್ಗವನ್ನು ತಿಳಿಯದೆ ಅದರ ಹಾದಿಯನ್ನು ಕೈಗೊಳ್ಳದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಬೆಳಕಿನ ವಿರುದ್ಧ ತಿರುಗಿ ಬಿದ್ದವರು ಇದ್ದಾರೆ; ಇವರು ಹಗಲಿನ ದಾರಿಗಳನ್ನು ತಿಳಿಯದವರಾಗಿ, ಅದರ ಹಾದಿಗಳಲ್ಲಿ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಬೆಳಕಿನ ಮೇಲೆ ತಿರುಗಿಬಿದ್ದವರು ಇದ್ದಾರೆ; ಇವರು ಹಗಲಿನ ದಾರಿಗಳನ್ನು ತಿಳಿಯದವರಾಗಿ ಅದರ ಹಾದಿಗಳಲ್ಲಿ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಬೆಳಕಿಗೆ ವಿರೋಧವಾಗಿ ದಂಗೆ ಎದ್ದಿರುವ ಜನರಿದ್ದಾರೆ. ಅವರಿಗೆ ಹಗಲಿನ ಮಾರ್ಗಗಳ ಪರಿಚಯವಿಲ್ಲ. ಅವರು ಅದರ ಮಾರ್ಗಗಳಲ್ಲಿ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಬೆಳಕಿನ ವಿರೋಧವಾಗಿ ತಿರುಗಿಬಿದ್ದವರು ಇದ್ದಾರೆ; ಅಂಥವರು ಬೆಳಕಿನ ಮಾರ್ಗಗಳನ್ನು ಅರಿಯದವರು; ಬೆಳಕಿನ ದಾರಿಗಳಲ್ಲಿ ವಾಸವಾಗಿರದವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 24:13
26 ತಿಳಿವುಗಳ ಹೋಲಿಕೆ  

ಅಂತೆಯೇ, ತಮ್ಮ ಆದ್ಯ ಅಂತಸ್ತನ್ನು ಉಳಿಸಿಕೊಳ್ಳದೆ, ತಮ್ಮ ಯೋಗ್ಯ ನಿವಾಸವನ್ನು ಕಳೆದುಕೊಂಡ ದೇವದೂತರನ್ನು ಶಾಶ್ವತ ಸಂಕಲೆಗಳಿಂದ ಬಂಧಿಸಲಾಯಿತು; ಮಹಾದಿನದಲ್ಲಿ ಸಂಭವಿಸುವ ದಂಡನೆಯ ತೀರ್ಪಿಗಾಗಿ ಅವರನ್ನು ಕಾರ್ಗತ್ತಲೆಯಲ್ಲಿ ಕೂಡಿಡಲಾಯಿತು.


ದುರ್ಜನರ ಮಾರ್ಗ ಕಗ್ಗತ್ತಲಿನ ಹಾಗೆ, ಎಡವಿಬಿದ್ದ ಸ್ಥಳವೇ ತಿಳಿಯದು ಅವರಿಗೆ.


ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.


ಒಬ್ಬನು ಒಳ್ಳೆಯದನ್ನು ಮಾಡಬೇಕೆಂದು ತಿಳಿದಿದ್ದೂ ಅದನ್ನು ಮಾಡದಿದ್ದರೆ ಅದು ಅವನಿಗೆ ಪಾಪವಾಗಿರುತ್ತದೆ.


ಇಂಥವುಗಳನ್ನು ಮಾಡುವವರು ಮರಣದಂಡನೆಗೆ ಪಾತ್ರರು ಎಂಬ ದೈವನಿಯಮವನ್ನು ಅರಿತಿದ್ದರೂ ಇಂಥ ಹೀನ ಕೃತ್ಯಗಳನ್ನು ಮಾಡುತ್ತಾರೆ. ತಾವು ಮಾಡುವುದೇ ಅಲ್ಲದೆ ಹಾಗೆಮಾಡುವ ಇತರರನ್ನೂ ಪ್ರೋತ್ಸಾಹಿಸುತ್ತಾರೆ.


ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು.


“ತಮ್ಮ ಕಣ್ಣುಗಳಿಂದ ಅವರು ಕಾಣದಂತೆಯೂ ತಮ್ಮ ಮನದಿಂದ ಗ್ರಹಿಸದಂತೆಯೂ ಹಾಗೂ ಮನತಿರುಗಿ ನನ್ನಿಂದ ಗುಣಹೊಂದದಂತೆಯೂ ಅವರ ಕಣ್ಣುಗಳನ್ನು ಕುರುಡಾಗಿಸಿರುವರು; ಅವರ ಮನಸ್ಸನ್ನು ಕಲ್ಲಾಗಿಸಿರುವರು ದೇವರು.”


ಅದಕ್ಕೆ ಯೇಸು, “ಇನ್ನು ತುಸುಕಾಲ ಮಾತ್ರ ಜ್ಯೋತಿ ನಿಮ್ಮ ನಡುವೆ ಇರುತ್ತದೆ. ನಿಮ್ಮನ್ನು ಕತ್ತಲು ಕವಿಯದಂತೆ ಜ್ಯೋತಿಯಿರುವಾಗಲೇ ನಡೆಯಿರಿ. ಕತ್ತಲಲ್ಲಿ ನಡೆಯುವವನಿಗೆ ಗೊತ್ತುಗುರಿ ಕಾಣದು.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ಯೇಸು ಸ್ವಾಮಿ ತಮ್ಮಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ ಹೀಗೆಂದರು: “ನನ್ನ ಮಾತಿಗೆ ನೀವು ಶರಣಾದರೆ ನಿಜವಾಗಿಯೂ ನೀವು ನನ್ನ ಶಿಷ್ಯರು.


ಕತ್ತಲು ಅಂಥವರನು ಸುತ್ತುವರೆದಿರುತ್ತದೆ ಹಾಡುಹಗಲಲ್ಲೆ ರಾತ್ರಿಯಲ್ಲೋ ಎಂಬಂತೆ ತಡಕಾಡುತ್ತಾರೆ ಅವರು ನಡುಹಗಲಲ್ಲೇ.


ನಗರಗಳಲ್ಲಿ ನರಳುವವರಿದ್ದಾರೆ ಗಾಯಗೊಂಡವರು ಮೊರೆಯಿಡುತ್ತಾರೆ ಆದರೆ ದೇವರು ಕಿವಿಗೊಡದಿದ್ದಾನೆ.


ಕೊಲೆಪಾತಕ ಏಳುತ್ತಾನೆ ಮುಂಜಾನೆಯೇ ದೀನದಲಿತರನ್ನು ಕೊಂದುಹಾಕುತ್ತಾನೆ ರಾತ್ರಿಯಲ್ಲಿ ವರ್ತಿಸುತ್ತಾನೆ ಕಳ್ಳನಂತೆ.


ಮಧ್ಯರಾತ್ರಿಯಲ್ಲಿ ಇವಳೆದ್ದು, ನಿಮ್ಮ ಸೇವಕಳಾದ ನಾನು ಗಾಢನಿದ್ರೆಯಲ್ಲಿದ್ದಾಗ, ನನ್ನ ಮಗುವನ್ನು ನನ್ನ ಬಳಿಯಿಂದ ತೆಗೆದು ತನ್ನ ಮಗ್ಗುಲಲ್ಲಿ ಇಟ್ಟುಕೊಂಡಳು. ಸತ್ತುಹೋದ ತನ್ನ ಮಗುವನ್ನು ನನ್ನ ಮಗ್ಗುಲಲ್ಲಿಟ್ಟಳು.


ಕಳ್ಳರು ಕತ್ತಲಲ್ಲಿ ಮನೆಗೆ ನುಗ್ಗುತ್ತಾರೆ ಕನ್ನ ಕೊರೆದು ಬೆಳಕು ಕಾಣದೆ ಇರುತ್ತಾರೆ ಹಗಲಲ್ಲಿ ಅವಿತುಕೊಂಡು.


‘ಧರಣಿಯ ಅಂಚುಗಳನು ಹಿಡಿದು ದುರುಳರನ್ನು ಅದರೊಳಗಿಂದ ಒದರಿಬಿಡು’ ಎಂದು ಅದಕ್ಕೆ ಅಪ್ಪಣೆಮಾಡಿದೆಯಾ?


ದುರುಳರಿಂದ ಬೆಳಕನು ಹಿಂತೆಗೆದುಕೊಳ್ಳಲಾಗುವುದು ಅವರು ಎತ್ತಿದ ಕೈಯನು ಮುರಿಯಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು