Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 26:12 - ಕನ್ನಡ ಸತ್ಯವೇದವು C.L. Bible (BSI)

12 ಸಮುದ್ರವನು ಭೇದಿಸುತ್ತಾನೆ ಪರಾಕ್ರಮದಿಂದ ಘಟಸರ್ಪವನೂ ಹೊಡೆದು ಹಾಕುತ್ತಾನೆ ವಿವೇಕಶಕ್ತಿಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನು ತನ್ನ ವಿವೇಕ ಶಕ್ತಿಯಿಂದ ಘಟಸರ್ಪವನ್ನು ಹೊಡೆದುಹಾಕಿದನು; ತನ್ನ ಪರಾಕ್ರಮದಿಂದ ಸಾಗರವನ್ನು ಶಾಂತಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆತನು ತನ್ನ ವಿವೇಕಶಕ್ತಿಯಿಂದ ಘಟಸರ್ಪವನ್ನು ಹೊಡೆದುಹಾಕಿದನು; ತನ್ನ ಪರಾಕ್ರಮದಿಂದ ಸಾಗರವನ್ನು ಶಾಂತಿಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೇವರ ಶಕ್ತಿಯು ಸಮುದ್ರವನ್ನು ಪ್ರಶಾಂತಗೊಳಿಸುವುದು. ದೇವರ ಶಕ್ತಿಯು ರಹಬನ ಸಹಾಯಕರನ್ನು ನಾಶಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೇವರು ತಮ್ಮ ಶಕ್ತಿಯಿಂದ ಸಮುದ್ರವನ್ನು ಕಲಕಿದ್ದಾರೆ; ದೇವರು ತಮ್ಮ ಜ್ಞಾನದಿಂದ ಘಟಸರ್ಪನಾದ ರಹಾಬನನ್ನು ಹೊಡೆದುಹಾಕುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 26:12
16 ತಿಳಿವುಗಳ ಹೋಲಿಕೆ  

ನಿನ್ನ ದೇವರಾದ ಸರ್ವೇಶ್ವರ ನಾನೆ ಸಮುದ್ರವನು ಕಲ್ಲೋಲಗೊಳಿಸುವವನು ನಾನೆ ಅದರ ಅಲೆಗಳನು ಭೋರ್ಗರೆಸುವವನು ನಾನೆ ನನ್ನ ಹೆಸರು ಸೇನಾಧೀಶ್ವರ ಸರ್ವೇಶ್ವರ!


ಸರ್ವೇಶ್ವರನು, ಹಗಲಲ್ಲಿ ಬೆಳಕು ನೀಡಲು ಸೂರ್ಯನನ್ನು ನೇಮಿಸಿದಾತ. ಇರುಳಲ್ಲಿ ಬೆಳಕು ನೀಡಲು ಚಂದ್ರ ನಕ್ಷತ್ರಗಳನ್ನು ಏರ್ಪಡಿಸಿದಾತ. ಅಲೆಗಳು ಭೋರ್ಗರೆವಷ್ಟು ಸಮುದ್ರವನ್ನು ಕೆರಳಿಸುವಾತ ‘ಸೇನಾಧೀಶ್ವರ ಸರ್ವೇಶ್ವರ’ ಎಂಬ ನಾಮಧೇಯದಿಂದ ಪ್ರಸಿದ್ಧನಾತ.


ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?


ಆದರೆ ದೇವರಲ್ಲಿದೆ ಜ್ಞಾನದೊಡನೆ ಶಕ್ತಿಕೂಡ ಆತನಲ್ಲಿದೆ ವಿವೇಕ ಮತ್ತು ಸನ್ಮತಿ ಸಹ.


ರಹೆಬನ ಸಹಾಯಕರು ಕಾಲಿಗೆರಗಿದರೂ ದೇವರು ತನ್ನ ಸಿಟ್ಟು ಸಿಡುಕನು ಬಿಟ್ಟುಬಿಡನು.


ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.


ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


ಸೇನಾಧೀಶ್ವರ ಸರ್ವೇಶ್ವರ ದಿನವೊಂದನ್ನು ಗೊತ್ತುಮಾಡಿದ್ದಾರೆ. ಅಹಂಕಾರದಿಂದ ಉಬ್ಬಿಹೋದವರಿಗೆ, ಉದ್ಧಟತನದಿಂದ ಕೊಬ್ಬಿಹೋದವರಿಗೆ,


ಸ್ವಶಕ್ತಿಯಿಂದ ಸಮುದ್ರವನೆ ಭೇದಿಸಿದೆ ನೀನು I ಜಲರಾಶಿಯ ಭುಜಂಗಗಳ ತಲೆ ಜಜ್ಜಿದಾತ ನೀನು II


ಜಲಪ್ರಳಯದೊಳು ಪ್ರಭು ಆಸೀನನಾಗಿಹನು I ಯುಗಯುಗಾಂತರಕು ಅರಸನಾಗಿ ಆಳುವನು II


ಆಕಾಶಮಂಡಲದ ಸ್ತಂಭಗಳು ಕದಲುವುವು ಆತನ ಗದರಿಕೆಗೆ ಅವುಗಳು ಬೆರಗಾಗುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು