Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:18 - ಕನ್ನಡ ಸತ್ಯವೇದವು C.L. Bible (BSI)

18 ಸುಜ್ಞಾನವಿರುವಲ್ಲಿ ಹವಳ-ಸ್ಫಟಿಕಗಳು ನೆನಪಿಗೆ ಬಾರವು ಮಾಣಿಕ್ಯಗಳ ಸಂಪಾದನೆಗಿಂತ ಅದರ ಸಂಪಾದನೆ ಶ್ರೇಷ್ಠವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಜ್ಞಾನವಿರುವಲ್ಲಿ ಹವಳವೂ, ಸ್ಫಟಿಕವೂ ನೆನಪಿಗೆ ಬರುವುದಿಲ್ಲ. ಮುತ್ತುಗಳನ್ನು ಸಂಪಾದಿಸುವುದಕ್ಕಿಂತಲೂ ಜ್ಞಾನವನ್ನು ಸಂಪಾದಿಸುವುದು ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 [ಜ್ಞಾನವಿರುವಲ್ಲಿ] ಹವಳವೂ ಸ್ಪಟಿಕವೂ ನೆನಪಿಗೆ ಬರುವದಿಲ್ಲ. ಮುತ್ತುಗಳನ್ನು ಸಂಪಾದಿಸುವದಕ್ಕಿಂತಲೂ ಜ್ಞಾನವನ್ನು ಸಂಪಾದಿಸುವದು ಎಷ್ಟೋ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಜ್ಞಾನವು ಹವಳಕ್ಕಿಂತಲೂ ಸ್ಪಟಿಕಕ್ಕಿಂತಲೂ ಹೆಚ್ಚು ಬೆಲೆ ಬಾಳುತ್ತದೆ. ಜ್ಞಾನವು ಮಾಣಿಕ್ಯಕ್ಕಿಂತಲೂ ಅಮೂಲ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹವಳವೂ, ಸೂರ್ಯಕಾಂತ ಶಿಲೆಯೂ ಜ್ಞಾನಕ್ಕೆ ಹೋಲಿಸಲು ಅರ್ಹವಲ್ಲ; ಜ್ಞಾನದ ಬೆಲೆಯು ಮಾಣಿಕ್ಯಗಳಿಗಿಂತ ಎಷ್ಟೋ ಶ್ರೇಷ್ಠ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:18
13 ತಿಳಿವುಗಳ ಹೋಲಿಕೆ  

ಮಾಣಿಕ್ಯಕ್ಕಿಂತ ಜ್ಞಾನದ ಬೆಲೆ ಅಮೂಲ್ಯ. ನಿನಗಿಷ್ಟವಾದುದಾವುದೂ ಅದಕ್ಕೆ ಸಾಟಿಯಿಲ್ಲ.


ಕೈಕೆಲಸದ ವಸ್ತುಗಳು ನಿನಗೆ ಅಪಾರವಾಗಿದ್ದವು; ಆದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಮಡಿ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿಯುತ್ತಿದ್ದರು.


ನನ್ನ ಜನತೆಯ ಮಹನೀಯರು ಹಿಮಕ್ಕಿಂತ ಶುಭ್ರ, ಹಾಲಿಗಿಂತ ಬಿಳುಪು. ಅವರ ದೇಹದ ಬಣ್ಣ ಹವಳವನ್ನು ಮೀರಿತ್ತು ಅವರ ರೂಪ ಇಂದ್ರನೀಲ ಮಣಿಯಂತೆ ಅಂದವಾಗಿತ್ತು.


ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು? ಆಕೆ ಹವಳಕ್ಕಿಂತಲೂ ಬಹು ಮೌಲ್ಯಳು.


ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿಯೊಂದು ಹೆಬ್ಬಾಗಿಲನ್ನು ಒಂದೊಂದು ಮುತ್ತಿನಿಂದ ಮಾಡಲಾಗಿತ್ತು. ನಗರದ ಬೀದಿ ಸ್ವಚ್ಛವಾದ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.


ಇವರು ಚಿನ್ನ, ಬೆಳ್ಳಿ, ಮುತ್ತು ರತ್ನಾಭರಣಗಳನ್ನೂ ನಯವಾದ ನಾರುಮಡಿ, ಕೆನ್ನೀಲಿಯ ವಸ್ತ್ರ, ರೇಷ್ಮೆ ಬಟ್ಟೆ ಮತ್ತು ಕಡುಗೆಂಪು ಉಡುಪುಗಳನ್ನೂ ಎಲ್ಲಾ ಬಗೆಯ ಗಂಧಕ ಚಕ್ಕೆಗಳನ್ನೂ ಎಲ್ಲಾ ವಿಧದ ದಂತದ ಸಾಮಾನುಗಳನ್ನೂ ಬಹು ಬೆಲೆಬಾಳುವ ಮರದ, ಕಂಚಿನ, ಕಬ್ಬಿಣದ, ಚಂದ್ರಕಾಂತ ಶಿಲೆಯ ಸಾಮಾನುಗಳನ್ನೂ ಅವಳಿಗೆ ಮಾರುತ್ತಿದ್ದರು.


ಆ ಸ್ತ್ರೀ ಕೆನ್ನೀಲಿಯ ಹಾಗೂ ಕಡುಗೆಂಪಾದ ಬಟ್ಟೆಯನ್ನು ಧರಿಸಿದ್ದಳು; ಚಿನ್ನ, ಮುತ್ತು, ರತ್ನಾಭರಣಗಳಿಂದ ಅಲಂಕೃತಳಾಗಿದ್ದಳು. ಕೈಯಲ್ಲಿ ಚಿನ್ನದ ಪಾತ್ರೆಯನ್ನೂ ಹಿಡಿದಿದ್ದಳು. ಅವಳ ಹಾದರದ ಅಸಹ್ಯಗಳಿಂದಲೂ ಕಳಂಕಗಳಿಂದಲೂ ಅದು ತುಂಬಿತ್ತು.


ಅಂತೆಯೇ, ಮಹಿಳೆಯರು, ಸಭ್ಯತೆಯನ್ನು ಮೀರದೆ ಘನತೆ, ಗೌರವಕ್ಕೆ ಒಪ್ಪುವಂತಹ ಉಡುಪನ್ನು ಧರಿಸಿಕೊಳ್ಳಬೇಕು.


“ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.”


ಜ್ಞಾನವೆಂಬುದು ಹವಳಕ್ಕಿಂತ ಶ್ರೇಷ್ಠ, ಇಷ್ಟವಸ್ತುಗಳಾವುವು ಅದಕ್ಕೆ ಸಾಟಿಯಿಲ್ಲ.


ಜ್ಞಾನವನ್ನು ಕಂಡು ಹಿಡಿಯುವವನು ಧನ್ಯನು, ವಿವೇಕವನ್ನು ಗಳಿಸುವವನು ಭಾಗ್ಯವಂತನು.


ಹೊನ್ನು ಉಂಟು, ಹವಳದ ರಾಶಿ ಉಂಟು; ಆದರೆ ತಿಳುವಳಿಕೆಯುಳ್ಳ ತುಟಿಗಳು ಬೆಲೆಮೀರಿದ ಆಭರಣಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು