Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:14 - ಕನ್ನಡ ಸತ್ಯವೇದವು C.L. Bible (BSI)

14 ಪಾಳು ಪೊಡವಿಯಲ್ಲಿ ನೆಲಮಾಳಿಗೆಗಳನ್ನು ನಿರ್ಮಿಸಿಕೊಂಡಿದ್ದ ರಾಜ-ಮಂತ್ರಿಗಳೊಡನೆ ನಾನಿರುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಭೂಲೋಕದಲ್ಲಿ ಹಾಳುಬಿದ್ದ ಪಟ್ಟಣಗಳನ್ನು ತಮ್ಮ ಸಮಾಧಿಗಾಗಿ ಕಟ್ಟಿಸಿಕೊಂಡ ಅರಸರೊಂದಿಗೂ, ಮಂತ್ರಿಗಳೊಡನೆಯೂ ನಾನಿರುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಭೂಲೋಕದಲ್ಲಿ ಹಾಳುಬಿದ್ದ ಪಟ್ಟಣಗಳನ್ನು ತಮಗಾಗಿ ಕಟ್ಟಿಸಿಕೊಂಡ ಅರಸರೊಂದಿಗೂ ಮಂತ್ರಿಗಳೊಡನೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಭೂರಾಜರೊಂದಿಗೂ ಮಂತ್ರಿಗಳೊಂದಿಗೂ ವಿಶ್ರಮಿಸಿಕೊಳ್ಳುತ್ತಿದ್ದೆನು. ಅವರು ತಮಗಾಗಿ ಕಟ್ಟಿಸಿಕೊಂಡ ಪಟ್ಟಣಗಳು ಈಗ ಹಾಳುಬಿದ್ದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಭೂಲೋಕದಲ್ಲಿ ಹಾಳುಬಿದ್ದ ಪಟ್ಟಣಗಳನ್ನು ತಮಗಾಗಿ ಕಟ್ಟಿಸಿಕೊಂಡ ರಾಜರೊಂದಿಗೂ ಮಂತ್ರಿಗಳೊಡನೆಯೂ ನಾನಿರುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:14
17 ತಿಳಿವುಗಳ ಹೋಲಿಕೆ  

ಹಾಳುಮಾಡಿದ್ದ ಪಟ್ಟಣಗಳಲ್ಲೆ ಅವನು ಸೇರಿಕೊಂಡಿದ್ದ ಯಾರೂ ವಾಸಮಾಡದೆ ದಿಬ್ಬವಾಗಿ ಮಾರ್ಪಟ್ಟಿದ್ದ ಶಾಪಗ್ರಸ್ತ ಮನೆಗಳಲ್ಲಿ ವಾಸಮಾಡಿಕೊಂಡಿದ್ದ.


ಆಗ ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ, ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ನಿವಾಸಿಯಾಗುವಂತೆ, ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲೇ ಸೇರಿಸುವೆನು.


ಪುರಾತನಕಾಲದ ಪಾಳುಬಿದ್ದ ಮನೆಗಳನ್ನು ನಿಮ್ಮವರು ಮರಳಿ ಕಟ್ಟುವರು. ತಲತಲಾಂತರಗಳಿಂದ ಪಾಳುಬಿದ್ದಿರುವ ತಳಹದಿಗಳ ಮೇಲೆ ಕಟ್ಟಡಗಳನ್ನು ನೀವು ನಿರ್ಮಿಸುವಿರಿ. ‘ಬಿದ್ದ ಗೋಡೆಯನ್ನು ಎಬ್ಬಿಸಿದ ರಾಷ್ಟ್ರ’ ಎಂಬ ಬಿರುದು ನಿಮಗೆ ಬರುವುದು.”


ಮನೆಯ ಮೇಲೆ ಮನೆಯನ್ನು, ಹೊಲದ ಮೇಲೆ ಹೊಲವನ್ನು ಕೂಡಿಹಾಕಿಸುತ್ತಾ ಇರುವವರಿಗೆ ಧಿಕ್ಕಾರ ! ಇತರರಿಗೆ ಕಿಂಚಿತ್ತನ್ನೂ ಬಿಡದೆ ನಾಡಿನ ನಡುವೆ ತಾವೇ ಗೌಡರಾಗಿ ವಾಸಿಸುವ ಇವರಿಗೆ ಧಿಕ್ಕಾರ !


ಆತ್ಮವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಸಾವೆಂಬ ಸಮರಕ್ಕೆ ವಿರಾಮವಿಲ್ಲ; ಅಂತೆಯೇ ದುಷ್ಟತನದ ಮೂಲಕ ಅದರಿಂದ ತಪ್ಪಿಸಿಕೊಳ್ಳಲಾಗದು.


ಸಾಯದೆಯೇ ಜೀವಿಸಬಲ್ಲ ನರನಾರು? I ಆ ತಳದಿಂದ ತಪ್ಪಿಸಿಕೊಳ್ಳುವವನಾರು? II


ದೂಡುವನು ಅವರನು ಕುರಿಹಿಂಡಿನಂತೆ ಪಾತಾಳಕೆ I ಮರಣವೇ ಕುರಿಗಾಹಿ ಆ ನಿಧನ ನಿವಾಸಿಗಳಿಗೆ I ವಿನಾಶಗೊಳ್ವುದು ಆ ತಳದಲ್ಲಿ ಅವರ ರೂಪರೇಖೆ I ಆಳುವರು ಸಜ್ಜನರು ಅವರೆಲ್ಲರನು ಉದಯಕಾಲಕೆ II


ನನ್ನನು ಮರಣಕ್ಕೆ ಗುರಿಮಾಡುವೆಯೆಂದು ತಿಳಿದಿದೆ ಸಮಸ್ತಜೀವಿಗಳು ತೆರಳುವ ಮಂದಿರಕ್ಕೆ ಸೇರಿಸುವೆಯೆಂದು ಗೊತ್ತೇ ಇದೆ.


ಮಂತ್ರಿಗಳನು ಬರಿಬತ್ತಲೆಯಾಗಿ ನಡೆಸುತ್ತಾನೆ ನ್ಯಾಯಾಧಿಪತಿಗಳನು ಮೂರ್ಖರನ್ನಾಗಿಸುತ್ತಾನೆ.


ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ರೆಹಬ್ಬಾಮನು ಅರಸನಾದನು.


ಅನಂತರ ದಾವೀದನು ಮರಣಹೊಂದಿ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿ ಮಾಡಿದರು.


ಅರಸರು ಹಾಕಿದ ಬಂಧನವನ್ನು ಬಿಚ್ಚಿ ಬಿಗಿಯುತ್ತಾನೆ ಅವರ ಸೊಂಟಕ್ಕೆ ಚಿಂದಿ.


ಸಂಭ್ರಮದಿ ಸ್ವಂತ ಸಮಾಧಿಗಳಲಿ ನಿರಂತರ ನಿದ್ರಿಸುತಿಹರು ಸಕಲ ರಾಷ್ಟ್ರಗಳ ಅರಸರು, ಸಮಸ್ತ ರಾಜರು.


ನಿನಗೇನು ಕೆಲಸವಿಲ್ಲಿ? ನಿನಗಾರಿಹರಿಲ್ಲಿ? ತೋಡಿಸಿಕೊಂಡಿರುವೆಯಾ ಗೂಡನ್ನಿಲ್ಲಿ? ಗೋರಿಯನ್ನು ಕೊರೆಯಿಸಿಕೊಂಡಿರುವೆಯಾ ಎತ್ತರದ ಬಂಡೆಯಲ್ಲಿ? ಕೆತ್ತಿಸಿಕೊಂಡಿರುವೆಯಾ ನಿನಗೊಂದು ನಿವಾಸವನಿಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು