Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:17 - ಕನ್ನಡ ಸತ್ಯವೇದವು C.L. Bible (BSI)

17 ದಣಿದವರಿಗೆ ದೊರಕುವುದು ಆ ಕೂಪದಲಿ ವಿಶ್ರಾಂತಿ ಅಣಗುವುದಲ್ಲಿ ದುರುಳರು ಕೊಡುವ ಹಾವಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅಲ್ಲಿ ದುಷ್ಟರ ಆಗ್ರಹವು ಅಣಗಿ ಹೋಗುವುದು, ದಣಿದವರು ದಣಿವಾರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅಲ್ಲಿ ದುಷ್ಟರ ಆಗ್ರಹವು ಅಣಗಿ ಹೋಗುವದು, ದಣಿದವರು ದಣುವಾರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದುಷ್ಟರು ಸಮಾಧಿಯಲ್ಲಿರುವಾಗ ಕೇಡುಮಾಡುವುದನ್ನು ನಿಲ್ಲಿಸುವರು. ಆಯಾಸಗೊಂಡಿರುವ ಜನರು ಸಮಾಧಿಯಲ್ಲಿ ವಿಶ್ರಾಂತಿಯನ್ನು ಕಂಡುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅಲ್ಲಿ ದುಷ್ಟರು ತೊಂದರೆ ಕೊಡುವುದು ಇರುವುದಿಲ್ಲ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:17
16 ತಿಳಿವುಗಳ ಹೋಲಿಕೆ  

ಇದಾದ ಮೇಲೆ ಸ್ವರ್ಗದಿಂದ ಬಂದ ಧ್ವನಿಯೊಂದು ಕೇಳಿಸಿತು. ಅದು ನನಗೆ, “ನೀನಿದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿ ಸಾಯುವವರು ಭಾಗ್ಯವಂತರು,” ಎಂದು ತಿಳಿಸಿತು. ಆಗ ದೇವರ ಆತ್ಮ, “ಹೌದು, ಅವರೇ ಭಾಗ್ಯವಂತರು. ಇನ್ನು ಅವರ ಸಂಕಷ್ಟಗಳು ಮುಗಿದು ಅವರಿಗೆ ವಿಶ್ರಾಂತಿ ದೊರಕುವುದು; ಅವರ ಸುಕೃತ್ಯಗಳಿಗೆ ತಕ್ಕ ಪ್ರತಿಫಲ ದೊರಕುವುದು,” ಎಂದು ಹೇಳಿತು.


ಇವು ನನ್ನ ಸಂಗಡ ಪಾತಾಳಕ್ಕೆ ಬರಲಾದೀತೆ? ನಾವು ಜೊತೆಯಾಗಿ ಮಣ್ಣಿಗೆ ಸೇರಲಾದೀತೆ?”


ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಪಡೋಣ. ನಮ್ಮಲ್ಲಿ ಯಾರೂ ಆ ಜನರಂತೆ ಅವಿಧೇಯತೆಯಿಂದ ವರ್ತಿಸಿ ವಿಶ್ವಾಸಭ್ರಷ್ಟರಾಗದೆ ಇರೋಣ.


ಆದಕಾರಣ, ದೇವಜನರು ಅನುಭವಿಸುವುದಕ್ಕಿರುವ ಸಬ್ಬತ್ತೆಂಬ ವಿಶ್ರಾಂತಿ ಇನ್ನೂ ಉಳಿದಿದೆ.


ಆಹಾ! ಬಚ್ಚಿಡಲಾರೆಯಾ ನನ್ನನ್ನು ಪಾತಾಳದೊಳಗೆ? ಅಲ್ಲಿ ಮರೆಮಾಚಿಡಲಾರೆಯಾ ನಿನ್ನ ಕೋಪ ಇಳಿಯುವವರೆಗೆ? ಕಾಲವನ್ನು ಗೊತ್ತುಮಾಡಲಾರೆಯಾ ನನ್ನನು ನೆನೆಯುವುದಕೆ?


“ಗೆಳೆಯರೇ, ನನ್ನ ಮಾತಿಗೆ ಕಿವಿಗೊಡಿ; ದೇಹವನ್ನು ಕೊಂದುಹಾಕುವವರಿಗೆ ಭಯಪಡಬೇಡಿ. ಕೊಂದುಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.


ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ.


ಆತನು ಆ ದುರ್ಜನರ ನಡುವೆ ಬಾಳುತ್ತಾ ಅವರ ದುಷ್ಕೃತ್ಯಗಳನ್ನು ಕಂಡು ಕೇಳುತ್ತಿದ್ದಾಗ, ಅವನ ನಿರ್ಮಲ ಹೃದಯ ದಿನೇದಿನೇ ಅತೀವ ವೇದನೆಯನ್ನು ಅನುಭವಿಸುತ್ತಿತ್ತು.


ನಿನ್ನ ಸಮೇತ ಇಸ್ರಯೇಲರನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವರು. ನಾಳೆ ನೀನೂ ನಿನ್ನ ಮಕ್ಕಳೂ ನಾನಿರುವಲ್ಲಿಗೆ ಬರುವಿರಿ. ಸರ್ವೇಶ್ವರ ಇಸ್ರಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವರು,” ಎಂದು ಹೇಳಿದನು.


ಗರ್ಭಸ್ರಾವವಾಗಿ ಬಿದ್ದು ಹೂಳಿಟ್ಟಪಿಂಡದಂತೆ ಬೆಳಕನ್ನೇ ಕಾಣದೆ ಸತ್ತುಹೋದ ಕೂಸುಗಳಂತೆ ಪ್ರಾಯಶಃ ಜನ್ಮವೇ ಇಲ್ಲದವನಾಗಿ ನಾನಿರುತ್ತಿದ್ದೆ.


ಸೆರೆಯಾಳುಗಳಿಗೆ ದಣಿಯ ಕರ್ಕಶದನಿ ಕೇಳಿಸದು ಅಲ್ಲಿ ಖೈದಿಗಳು ಸಾಮೂಹಿಕವಾಗಿ ವಿಶ್ರಮಿಸಿಕೊಳ್ಳುವರಲ್ಲಿ.


ಇದನ್ನು ನೋಡಿ ಜೀವದಿಂದ ಇರುವವರಿಗಿಂತ ಸತ್ತವರೇ ಧನ್ಯರೆಂದು ಹೊಗಳಿದೆ.


ಅವರ ಪ್ರೀತಿ, ದ್ವೇಷ, ಮತ್ಸರ, ಅವರು ಸತ್ತಾಗಲೇ ಅಳಿದುಹೋಗುತ್ತವೆ. ಇಹಲೋಕದಲ್ಲಿ ನಡೆಯುವ ಯಾವುದರಲ್ಲೂ ಅವರಿಗೆ ಇನ್ನೆಂದಿಗೂ ಪಾಲಿರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು