Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:21 - ಕನ್ನಡ ಸತ್ಯವೇದವು C.L. Bible (BSI)

21 ಎಷ್ಟು ಅಗೆದರೂ ದೊರಕದು ಅಂಥವರಿಗೆ ನಿಧಿನಿಕ್ಷೇಪ ಅದಕ್ಕಿಂತ ಮಿಗಿಲಾಗಿ ಬಯಸಿದರೂ ಬಾರದು ಮರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರು ನಿಕ್ಷೇಪಕ್ಕಾಗಿ ಅಗೆಯುವ ಆಶೆಗಿಂತಲೂ ಹೆಚ್ಚಾದ ಆಶೆಯಿಂದ ಮರಣವನ್ನು ಹಾರೈಸಿ ಹುಡುಕಿದರೂ ಅದು ದೊರೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರು ನಿಕ್ಷೇಪಕ್ಕಾಗಿ ಅಗೆಯುವ ಆಶೆಗಿಂತಲೂ ಹೆಚ್ಚಾದ ಆಶೆಯಿಂದ ಮರಣವನ್ನು ಹಾರೈಸಿ ಹುಡುಕಿದರೂ ಅದು ದೊರೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವನು ಸಾಯಲು ಬಯಸಿದರೂ ಸಾವು ಬರುವುದಿಲ್ಲ. ಹೂಳಿಟ್ಟಿರುವ ಭಂಡಾರವನ್ನು ಹುಡುಕುವುದಕ್ಕಿಂತಲೂ ಹೆಚ್ಚಾಗಿ ವ್ಯಥೆಯುಳ್ಳವನು ಸಾವನ್ನೇ ಹುಡುಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವರು ನಿಕ್ಷೇಪಕ್ಕಾಗಿ ಅಗಿಯುವ ಆಶೆಗಿಂತಲೂ ಹೆಚ್ಚಾದ ಆಶೆಯಿಂದ ಮರಣವನ್ನು ಹಾರೈಸಿ ಹುಡುಕಿದರೂ ಅದು ದೊರೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:21
13 ತಿಳಿವುಗಳ ಹೋಲಿಕೆ  

ಆಂಥ ದಿನಗಳಲ್ಲಿ ಮನುಷ್ಯರು ಮರಣವನ್ನು ಅಪೇಕ್ಷಿಸುವರು. ಆದರೆ ಅದು ಅವರಿಗೆ ಪ್ರಾಪ್ತವಾಗುವುದಿಲ್ಲ. ಸತ್ತರೆ ಸಾಕೆಂದು ಬಯಸುವರು; ಪ್ರಯತ್ನಿಸುವರು. ಆದರೆ ಮೃತ್ಯು ಅವರಿಂದ ದೂರ ಸರಿಯುವುದು.


ಹಣದಂತೆ ಅದನ್ನು ಹುಡುಕು, ನಿಧಿಯಂತೆ ಅದನ್ನು ತಡಕು.


ಸೂರ್ಯನು ಏರುತ್ತಿರಲು, ಸರ್ವೇಶ್ವರನ ಚಿತ್ತಾನುಸಾರ ಬಿಸಿಯಾದ ಮೂಡಣ ಗಾಳಿ ಬೀಸಿತು. ಬಿಸಿಲಿನ ತಾಪದಿಂದ ಯೋನನು ಮೂರ್ಛೆಹೋಗುವಂತಾದನು; ಸಾವನ್ನು ಅಪೇಕ್ಷಿಸುತ್ತಾ: “ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಬೇಡಿಕೊಂಡನು.


“ಆದುದರಿಂದ ಸರ್ವೇಶ್ವರಾ, ನನ್ನ ಪ್ರಾಣವನ್ನು ಹಿಂತೆಗೆದುಕೊಳ್ಳಿ. ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಮೊರೆಯಿಟ್ಟನು.


ತರುವಾಯ ತಾನೊಬ್ಬನೇ, ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ದೂರಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. “ಸರ್ವೇಶ್ವರಾ, ನನಗೆ ಸಾಕಾಯಿತು; ನನ್ನ ಪ್ರಾಣವನ್ನು ತೆಗೆದುಬಿಡಿ; ನನ್ನ ಪೂರ್ವಜರಿಗಿಂತ ನಾನು ಉತ್ತಮನಲ್ಲ,” ಎಂದು ದೇವರನ್ನು ಪ್ರಾರ್ಥಿಸಿದನು.


ನೀವು ಹೀಗೆ ಮಾಡುವುದಕ್ಕಿಂತಲೂ ನನ್ನನ್ನು ಈ ಕೂಡಲೆ ಕೊಂದುಹಾಕಿದರೆ ಉಪಕಾರವಾದೀತು; ನನಗಾಗುತ್ತಿರುವ ಸಂಕಟವನ್ನು ಸಹಿಸಲಾರೆ,” ಎಂದನು.


ಅವರು ಸಮಾಧಿಗೆ ಸೇರುವಾಗ ಆಗುವುದು ಅವರಿಗೆ ಅಮಿತಾನಂದ.


ಈ ಕೆಟ್ಟ ವಂಶದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು. ಇದು ಸರ್ವೇಶ್ವರನಾದ ನನ್ನ ನುಡಿ.”


ಅಯ್ಯೋ, ನನ್ನ ವಿಜ್ಞಾಪನೆ ನೆರವೇರುವುದಿಲ್ಲವೇಕೆ? ದೇವರು ನನ್ನ ಕೋರಿಕೆಯನ್ನು ಈಡೇರಿಸುವುದಿಲ್ಲವೇಕೆ?


ದೇವರು ನನ್ನನ್ನು ನಸುಕಿಬಿಡಬಾರದೆ? ತನ್ನ ಕೈಯನ್ನು ಚಾಚಿ ಸಂಹರಿಸಿಬಿಡಬಾರದೆ?


ಎಂದೇ ಉಸಿರುಕಟ್ಟಿ ನಾನು ಪ್ರಾಣಬಿಡುವುದು ಲೇಸು ಮೂಳೆಮಾಂಸದ ಈ ತಡಿಕೆಬಾಳಿಗಿಂತ ಸಾವು ಲೇಸು.


ದುರ್ಜನರು ನಿರಾಶೆಯಿಂದ ಕಂಗೆಡುವರು ಪ್ರಾಣಬಿಡಬೇಕೆಂಬುದೇ ಅವರ ಆಶೆಯಾಗಿರುವುದು.”


ಇದನ್ನು ನೋಡಿ ಜೀವದಿಂದ ಇರುವವರಿಗಿಂತ ಸತ್ತವರೇ ಧನ್ಯರೆಂದು ಹೊಗಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು