Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:26 - ಕನ್ನಡ ಸತ್ಯವೇದವು C.L. Bible (BSI)

26 ನಾನು ಒಳಿತನು ನಿರೀಕ್ಷಿಸಿದಾಗ ಕೇಡು ಬಂದೊದಗಿತು ಬೆಳಕನು ಎದುರು ನೋಡುವಾಗ ಕತ್ತಲು ಕವಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಾನು ಒಳ್ಳೆಯದನ್ನು ನಿರೀಕ್ಷಿಸುತ್ತಿರುವಲ್ಲಿ ಕೇಡು ಬಂತು, ಬೆಳಕನ್ನು ಎದುರು ನೋಡುತ್ತಿರುವಾಗ ಕತ್ತಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನಾನು ಒಳ್ಳೇದನ್ನು ನಿರೀಕ್ಷಿಸುತ್ತಿರುವಲ್ಲಿ ಕೇಡು ಬಂತು, ಬೆಳಕನ್ನು ಎದುರುನೋಡುತ್ತಿರುವಾಗ ಕತ್ತಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದರೆ ನಾನು ಒಳ್ಳೆಯವುಗಳನ್ನು ನಿರೀಕ್ಷಿಸುತ್ತಿದ್ದಾಗ ನನಗೆ ಕೇಡುಗಳೇ ಆದವು. ನಾನು ಬೆಳಕಿಗಾಗಿ ಎದುರುನೋಡುತ್ತಿದ್ದಾಗ ನನಗೆ ಕತ್ತಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಾನು ಒಳ್ಳೆಯದನ್ನು ನಿರೀಕ್ಷಿಸುತ್ತಿರಲು ಕೇಡು ಬಂದೊದಗಿತು; ನಾನು ಬೆಳಕನ್ನು ಎದುರು ನೋಡಲು, ಅಂಧಕಾರ ಬಂದು ಕವಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:26
14 ತಿಳಿವುಗಳ ಹೋಲಿಕೆ  

ಸುಖಶಾಂತಿಯನ್ನು ನಿರೀಕ್ಷಿಸಿದೆವು, ಯಾವ ಒಳಿತೂ ಸಿಗಲಿಲ್ಲ. ಸುಕ್ಷೇಮ ಕಾಲವನ್ನು ಎದುರುನೋಡಿದೆವು. ನಮಗೆ ಗಿಟ್ಟಿದ್ದು ಭಯಭ್ರಾಂತಿ ಮಾತ್ರ.


“ಸ್ವಾಮೀ, ನೀವು ಜುದೇಯವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರೊ? ಸಿಯೋನಿನ ಬಗ್ಗೆ ನಿಮಗೆ ಮನಃಪೂರ್ವಕವಾದ ಅಸಹ್ಯ ಹುಟ್ಟಿದೆಯೊ? ಗುಣವಾಗದಂಥ ಪೆಟ್ಟನ್ನು ನಮಗೆ ಕೊಟ್ಟಿರುವಿರಿ ಏಕೆ? ಸುಖವನ್ನು ನಿರೀಕ್ಷಿಸಿದೆವು, ಸಿಗಲಿಲ್ಲ ನಮಗೆ ಯಾವ ಫಲ. ಸುಕ್ಷೇಮವನ್ನು ಎದುರು ನೋಡಿದೆವು, ಇಗೋ ಬಂದೊದಗಿದೆ ಸಂಕಟ.


ಮಾರೋತಿನ ನಿವಾಸಿಗಳು ತಮ್ಮ ಸಂಕಟ ಪರಿಹಾರವಾಗುವುದೋ ಇಲ್ಲವೋ ಎಂದು ವೇದನೆಪಡುತ್ತಾರೆ: ಏಕೆಂದರೆ ಸ್ವಾಮಿಯಿಂದ ಬಂದ ವಿಪತ್ತು ಜೆರುಸಲೇಮಿನ ಪುರದ್ವಾರವನ್ನು ಮುಟ್ಟಿದೆ.


ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ : ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.


ಉದಯವಾಗುವುದು ಜ್ಯೋತಿ ಸಜ್ಜನರಿಗೆ I ಆನಂದವಿದೆ ಯಥಾರ್ಥ ಹೃದಯಿಗಳಿಗೆ II


ನನಗೇಕೆ ನಿರಂತರವಾದ ವೇದನೆ? ಗುಣವಾಗದ ಗಡಸು ಗಾಯ? ನೀರು ಇರುವುದಾಗಿ ತೋರಿಸಿಕೊಳ್ಳುವ ಕಳ್ಳ ತೊರೆಯಾಗಬೇಕೆ ನೀವು ನನಗೆ?”


ಆಗ ನಾನಿಂತೆಂದೆ: ‘ನನ್ನ ಗೂಡಿನಲ್ಲೇ ಹಾಯಾಗಿ ಸಾಯುವೆ ನನ್ನ ದಿನಗಳು ಮರಳಿನಂತೆ ಅಸಂಖ್ಯಾತವಾಗಿರುತ್ತವೆ.’


ನನ್ನ ವಿನಾಶಕ್ಕೆ ಈ ಅಂಧಕಾರವು ನಿಮಿತ್ತವಲ್ಲ ನನ್ನ ಮುಖಕ್ಕೆ ಕವಿದಿರುವ ಈ ಕಾರ್ಗತ್ತಲು ಕಾರಣವಲ್ಲ.


ನಾನು ಮುಂದೆ ಹೋಗದಂತೆ ದೇವರು ಅಡ್ಡಗೋಡೆ ಹಾಕಿದ್ದಾನೆ ನನ್ನ ಹಾದಿಗೆ ಕತ್ತಲೆ ಕವಿಯುವಂತೆ ಮಾಡಿದ್ದಾನೆ.


ಅವನನ್ನು ಬೆಳಕಿನಿಂದ ತಳ್ಳುವರು ಕತ್ತಲಿಗೆ ಅಟ್ಟಿಬಿಡುವರು ಅವನನ್ನು ಲೋಕದಿಂದಲೆ.


ಅವನ ಗುಡಾರದ ಬೆಳಕು ಕತ್ತಲಾಗುವುದು ಅವನ ಮೇಲಣ ಸೊಡರು ನಂದಿಹೋಗುವುದು.


ಆತ ನನ್ನನ್ನು ಕರೆದೊಯ್ದು ಬೆಳಕಿನಲ್ಲಿ ಅಲ್ಲ, ಕತ್ತಲಲ್ಲೇ ನಡೆಸಿದ.


ಆಗ ಜನರು ಹೀಗೆನ್ನುತ್ತಾರೆ : ಈ ಕಾರಣದಿಂದಲೇ ನ್ಯಾಯನಿರ್ಣಯವು ನಮ್ಮಿಂದ ದೂರವಾಗಿದೆ, ಸದ್ಧರ್ಮವು ನಮಗೆ ದೊರಕದೆ ಇದೆ. ಬೆಳಕಿಗಾಗಿ ಕಾದಿರುವ ನಮ್ಮನ್ನು ಕತ್ತಲು ಆವರಿಸಿದೆ. ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಮ್ಮನ್ನು ಅಂಧಕಾರವೇ ಬೆನ್ನಟ್ಟುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು