Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:27 - ಕನ್ನಡ ಸತ್ಯವೇದವು C.L. Bible (BSI)

27 ನನ್ನ ಹೃದಯ ಅವಕ್ಕೆ ಮಾರುಹೋಗಿದ್ದರೆ ಬಾಯ್ಮೇಲೆ ಕೈಯಿಟ್ಟು ಅವನ್ನು ಆರಾಧಿಸಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹೃದಯವು ಮರುಳುಗೊಂಡು, ಕೈಯನ್ನು ಬಾಯಿ ಮುದ್ದಾಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಹೃದಯವು ಮರುಳುಗೊಂಡು ಕೈಯನ್ನು ಬಾಯಿ ಮುದ್ದಾಡಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಾನು ಮರುಳುಗೊಂಡು ನನ್ನ ಕೈಗೆ ಮುದ್ದಿಡುವುದರ ಮೂಲಕ ಸೂರ್ಯಚಂದ್ರರನ್ನು ಪೂಜಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನನ್ನ ಹೃದಯವು ಮರುಳುಗೊಂಡು, ನನ್ನ ಕೈ ಅವುಗಳನ್ನು ನನ್ನ ಬಾಯಿಂದ ಗೌರವದಿಂದ ಮುಗಿದಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:27
12 ತಿಳಿವುಗಳ ಹೋಲಿಕೆ  

ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ದೇವರನ್ನು ಅವರು ಅರಿತಿದ್ದರೂ ದೇವರೆಂದು ಗೌರವಿಸಲಿಲ್ಲ; ದೇವರಿಗೆ ಉಪಕಾರ ಸ್ಮರಣೆಯನ್ನು ಮಾಡಲಿಲ್ಲ. ಬದಲಾಗಿ ಅವರು ವ್ಯರ್ಥ ಆಲೋಚನೆಗಳಲ್ಲಿ ಮಗ್ನರಾದರು. ಅವರ ವಿವೇಕರಹಿತ ಮನಸ್ಸು ಅಂಧಕಾರಮಯ ಆಯಿತು.


ಈಗ ಎಫ್ರಯಿಮರ ಪಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅವರು ಬೆಳ್ಳಿಬಂಗಾರವನ್ನು ಕರಗಿಸಿ ಇಷ್ಟಬಂದಂತೆ ಬೊಂಬೆಗಳನ್ನು ಮಾಡಿಕೊಂಡಿದ್ದಾರೆ. ಅವೆಲ್ಲವು ಶಿಲ್ಪಿಗಳ ಕೈಕೆಲಸವೇ ಹೊರತು ಮತ್ತೇನು ಅಲ್ಲ. ಇಂಥ ವಿಗ್ರಹಗಳನ್ನು ಪೂಜೆಗಾಗಿ ಪ್ರತಿಷ್ಠಾಪನೆಮಾಡುತ್ತಾರೆ. ಬುದ್ಧಿಜೀವಿಗಳಾದ ಇವರು ಬಸವನಿಗೆ ಮುದ್ದಿಡುತ್ತಾರೆ.


ಅಂಥವನು ಮುಕ್ಕುವುದು ಬೂದಿಯನ್ನೇ; ಅವನ ಹೃದಯ ಮೋಸಗೊಂಡು ಅವನನ್ನು ತಪ್ಪುದಾರಿಗೆ ಎಳೆದಿದೆ. ಎಂದೇ, ಅವನು ಅಂಗೈ ಹುಣ್ಣಿನಂತಿರುವ ಆ ಸುಳ್ಳನ್ನೂ ಅರಿಯದೆ ಇದ್ದಾನೆ; ತನ್ನನ್ನೇ ರಕ್ಷಿಸಿಕೊಳ್ಳಲು ಆಗದೆ ಇದ್ದಾನೆ.


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳುಸಾವಿರ ಮಂದಿ ಇಸ್ರಯೇಲರನ್ನು ಉಳಿಸುವೆನು,” ಎಂದು ಹೇಳಿದನು.


“ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ, ನಿಮಗೆ ಅಥವಾ ನಿಮ್ಮ ಪಿತೃಗಳಿಗೆ ಗೊತ್ತಿಲ್ಲದ ಇತರ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಒಳ ಒಳಗೇ ನಿಮಗೆ ಬೋಧಿಸಬಹುದು.


ಆದರೆ ನೀವು ಎಚ್ಚರಿಕೆಯಿಂದಿರಬೇಕು; ಮರುಳುಗೊಂಡು ಸರ್ವೇಶ್ವರ ಹೇಳಿದ ಮಾರ್ಗವನ್ನು ಬಿಟ್ಟು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ,


ಪ್ರಕಾಶಮಯ ಸೂರ್ಯನನು ನೋಡಿ ಕಾಂತಿಯುತ ಚಂದ್ರನ ಚಲನೆಯನು ದಿಟ್ಟಿಸಿ,


ಇದು ಕೂಡ ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾಗುತ್ತಿತ್ತು ಮೇಲಣ ಲೋಕದ ದೇವರಿಗೆ ದ್ರೋಹವೆಸಗಿದಂತಾಗುತ್ತಿತ್ತು.


ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ ಭ್ರಮೆಗೊಂಡು, ಸೂರ್ಯ, ಚಂದ್ರ, ನಕ್ಷತ್ರಗಳೆನಿಸಿಕೊಳ್ಳುವ ಆಕಾಶದ ಪರಿವಾರಗಳನ್ನು ಆರಾಧಿಸಬಾರದು, ಪೂಜಿಸಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಅವುಗಳನ್ನು ಜಗದ ಬೇರೆ ಎಲ್ಲ ಜನಾಂಗಗಳಿಗಾಗಿ ಕೊಟ್ಟಿದ್ದಾರೆ.


ಸರ್ವೇಶ್ವರನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆದುತಂದರು; ಇಗೋ, ಆ ಆಲಯದ ಬಾಗಿಲ ಮುಂದೆ, ಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಸುಮಾರು ಇಪ್ಪತ್ತೈದು ಜನರು ಸರ್ವೇಶ್ವರನ ಆಲಯಕ್ಕೆ ಬೆನ್ನುಮಾಡಿ ಪೂರ್ವದ ಕಡೆಗೆ ಮುಖಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು