Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:7 - ಕನ್ನಡ ಸತ್ಯವೇದವು C.L. Bible (BSI)

7 ದಾರಿತಪ್ಪಿ ನಾನು ನಡೆದಿದ್ದರೆ ನನ್ನ ಹೃದಯ, ಕಣ್ಗಳನ್ನು ಹಿಂಬಾಲಿಸಿದ್ದರೆ ಕಲ್ಮಷ ನನ್ನ ಕೈಗೆ ಅಂಟಿಕೊಂಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ನಡತೆಯಲ್ಲಿ ದಾರಿತಪ್ಪಿದ್ದರೆ, ನನ್ನ ಹೃದಯವು ಕಂಡಕಂಡದ್ದನ್ನು ಹಿಂಬಾಲಿಸಿದ್ದರೆ, ನನ್ನ ಕೈಗಳಲ್ಲಿ ಕಲ್ಮಷವು ಅಂಟಿಕೊಂಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನನ್ನ ನಡತೆಯಲ್ಲಿ ದಾರಿತಪ್ಪಿದ್ದರೆ ನನ್ನ ಹೃದಯವು ಕಂಡಕಂಡದ್ದನ್ನು ಹಿಂಬಾಲಿಸಿದ್ದರೆ ನನ್ನ ಕೈಗಳಲ್ಲಿ ಕಲ್ಮಷವು ಅಂಟಿಕೊಂಡಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನು ನೀತಿಮಾರ್ಗವನ್ನು ಬಿಟ್ಟುಹೋಗಿದ್ದರೆ, ನನ್ನ ಕಣ್ಣುಗಳು ನನ್ನ ಹೃದಯವನ್ನು ಕೆಟ್ಟದ್ದಕ್ಕೆ ನಡೆಸಿದ್ದರೆ, ನನ್ನ ಕೈಗಳು ಪಾಪದಿಂದ ಕೊಳಕಾಗಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ದಾರಿತಪ್ಪಿ ನಡೆದಿದ್ದರೆ, ನನ್ನ ಕಣ್ಣು ಕಂಡವುಗಳ ಹಿಂದೆ ನನ್ನ ಹೃದಯವು ಹೋಗಿದ್ದರೆ, ನನ್ನ ಅಂಗೈಗಳಲ್ಲಿ ದೋಷ ಅಂಟಿಕೊಂಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:7
16 ತಿಳಿವುಗಳ ಹೋಲಿಕೆ  

ಆ ಗೊಂಡೆಗಳ ಪ್ರಯೋಜನವಿದು - ನೀವು ಅವುಗಳನ್ನು ನೋಡುವಾಗ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅವುಗಳನ್ನು ಪಾಲಿಸಬೇಕು. ಹಿಂದೆ ನೀವು ನನಗೆ ದ್ರೋಹಿಗಳಾಗಿ ನಿಮ್ಮ ಮನಸ್ಸಿಗೆ ಬಂದಂತೆ, ಕಣ್ಣಿಗೆ ತೋರಿದಂತೆ ದಾರಿತಪ್ಪಿ ನಡೆದಿರಿ.


ನಿನ್ನ ಬಲಗಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತೆಸೆದುಬಿಡು; ನಿನ್ನ ಇಡೀ ದೇಹ ನರಕಕ್ಕೆ ತುತ್ತಾಗುವುದಕ್ಕಿಂತ ನಿನ್ನ ಒಂದು ಅಂಗ ನಾಶವಾಗುವುದೇ ಲೇಸು.


“ಏಕೆಂದರೆ ಇಸ್ರಯೇಲ್ ವಂಶದವರಲ್ಲಾಗಲಿ ಇಸ್ರಯೇಲಿನಲ್ಲಿ ನೆಲೆಸಿರುವ ವಿದೇಶಿಗಳಲ್ಲಾಗಲಿ ಯಾವನಾದರೂ ನನ್ನಿಂದ ಅಗಲಿ ವಿಗ್ರಹಗಳನ್ನು ಹೃದಯದಲ್ಲಿ ನೆಲೆಗೊಳಿಸಿಕೊಂಡು ಪಾಪಕಾರಿಯಾದ ಆ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯ ಬಳಿಗೆ ಬಂದು, ಅವನ ಮೂಲಕ ದೈವೋತ್ತರವನ್ನು ಕೇಳಿಕೊಂಡರೆ ಅವನಿಗೆ ಸರ್ವೇಶ್ವರನಾದ ನಾನೇ ಉತ್ತರಕೊಡುವೆನು.


“ನರಪುತ್ರನೇ, ಈ ಜನರು ವಿಗ್ರಹಗಳನ್ನು, ತಮ್ಮ ಹೃದಯದಲ್ಲಿ ನೆಲೆಗೊಳಿಸಿಕೊಂಡಿದ್ದಾರೆ. ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆಯೇ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಅಲ್ಲ.


ಹೀಗೆ ಅಳಿದುಳಿದು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನು ಹಾಗು ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹ ಮಾಡಿದ ತಮ್ಮ ಕಣ್ಣುಗಳನ್ನು ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು.


ಸನ್ಮಾರ್ಗದಲ್ಲಿ ನಡೆವವನು, ಸತ್ಯವನ್ನೇ ನುಡಿವವನು, ಬಲಾತ್ಕಾರ್ಯದಿಂದ ಲಭಿಸಿದ್ದನ್ನು ತಿರಸ್ಕರಿಸುವವನು, ಲಂಚಕ್ಕೆ ಕೈಚಾಚದೆ ಹಿಂದಕ್ಕೆ ಸರಿವವನು, ಕೊಲೆ ಮಾತುಗಳಿಗೆ ಕಿವಿ ಮುಚ್ಚಿಕೊಳ್ಳುವವನು, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನು - ಇಂಥವನೇ ಉನ್ನತ ಸ್ಥಾನದಲ್ಲಿ ವಾಸಿಸುವನು.


ನೀಚಕಾರ್ಯಗಳನು ನಾ ವೀಕ್ಷಿಸಲಾರೆ I ಅಧರ್ಮಿಗಳ ನಡೆಯನು ನಾ ಸಹಿಸಲಾರೆ I ಅಂಥವರ ಸಹವಾಸವನು ನಾ ತಾಳಲಾರೆ II


ಆತನ ಹೆಜ್ಜೆಯ ಜಾಡಿನಲ್ಲೆ ನಾನು ಕಾಲಿಟ್ಟೆ ಓರೆಯಾಗದೆ ಆತನ ದಾರಿಯನ್ನೇ ಹಿಡಿದೆ.


ಹಿಮದಿಂದ ನಾನು ಸ್ನಾನಮಾಡಿದರೂ ಚೌಳಿನಿಂದ ನಾನು ಕೈತೊಳೆದರೂ


ಸನ್ಮಾರ್ಗದಲ್ಲಿ ಮುಂದುವರೆವವನು ಸಜ್ಜನನು ಬಲಗೊಳ್ಳುತ್ತಲೇ ಇರುವನು ಶುದ್ಧಹಸ್ತನು.


ಆದರೂ ನಾನು ಹಿಂಸಾಚಾರಕ್ಕೆ ಕೈಹಾಕಲಿಲ್ಲ ನಾನು ಮಾಡುವ ಪ್ರಾರ್ಥನೆ ನಿರ್ಮಲ.


ನೀವು ನ್ಯಾಯವಂತರೆಂದು ನಾನು ಒಪ್ಪಿದರೆ ನನಗಿರಲಿ ಧಿಕ್ಕಾರ! ನಾನು ಸತ್ಯತೆಯನ್ನು ಕಳೆದುಕೊಳ್ಳಲಾರೆ ಸಾಯುವ ತನಕ.


ನ್ಯಾಯನೀತಿಯನ್ನು ಬಿಡದೆ ಹಿಡಿವೆನು ಭದ್ರವಾಗಿ ನನ್ನ ಬಾಳಿನ ಯಾವ ದಿನದಂದೂ ನಿಂದಿಸಿದ್ದಿಲ್ಲ ನನ್ನ ಮನಸ್ಸಾಕ್ಷಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು