Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 32:6 - ಕನ್ನಡ ಸತ್ಯವೇದವು C.L. Bible (BSI)

6 ಆಗ ಬೂಜಿನವನಾದ ಬರಕೇಲನ ಮಗ ಎಲೀಹುವನು ಕೊಟ್ಟ ಉತ್ತರ: “ನಾನು ಕಿರಿಯವನು, ನೀವು ಎಷ್ಟೋ ಹಿರಿಯವರು ಎಂದೇ ಸಂಕೋಚಪಟ್ಟೆನು ನನ್ನ ಅಭಿಪ್ರಾಯ ತಿಳಿಸಲು ಅಂಜಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಆ ಎಲೀಹು ಇಂತೆಂದನು, “ನಾನು ಯೌವನಸ್ಥನು, ನೀವು ನನಗಿಂತ ಹಿರಿಯರು; ಆದುದರಿಂದ ಸಂಕೋಚಪಟ್ಟು ನನ್ನ ಅಭಿಪ್ರಾಯವನ್ನು ನಿಮಗೆ ಅರಿಕೆಮಾಡಲು ಹೆದರಿದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಆ ಎಲೀಹು ಇಂತೆಂದನು - ನಾನು ಯೌವನಸ್ಥನು, ನೀವು ಅತಿವೃದ್ಧರು; ಆದದರಿಂದ ಸಂಕೋಚಪಟ್ಟು ನನ್ನ ಅಭಿಪ್ರಾಯವನ್ನು ನಿಮಗೆ ಅರಿಕೆ ಮಾಡಲು ಅಂಜಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಎಲೀಹು ಮಾತಾಡಲಾರಂಭಿಸಿ ಹೀಗೆಂದನು: “ನಾನು ವಯಸ್ಸಿನಲ್ಲಿ ಚಿಕ್ಕವನು, ನೀವು ವೃದ್ಧರು. ಆದಕಾರಣ, ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸಲು ಹಿಂಜರಿದೆನು ಮತ್ತು ಹೆದರಿಕೊಂಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಬೂಜ್ಯನಾದ ಬರಕೇಲನ ಮಗ ಎಲೀಹು ಹೇಳಿದ್ದೇನೆಂದರೆ: “ನಾನು ಪ್ರಾಯದಲ್ಲಿ ಯುವಕನು, ನೀವು ಪ್ರಾಯಸ್ಥರು. ಆದ್ದರಿಂದ ನಾನು ಸಂಕೋಚಗೊಂಡು ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವುದಕ್ಕೆ ಭಯಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 32:6
14 ತಿಳಿವುಗಳ ಹೋಲಿಕೆ  

ನಮ್ಮಲ್ಲಿದ್ದಾರೆ ತಲೆ ನರೆತವರು, ವಯೋವೃದ್ಧರು ನಿಮ್ಮಪ್ಪನಿಗಿಂತಲೂ ಹೆಚ್ಚು ಮುದುಕರಾದವರು.


ಹಿರಿಯರನ್ನು ಗದರಿಸಬೇಡ; ಅವರನ್ನು ತಂದೆಯಂತೆ ಭಾವಿಸಿ ಗೌರವದಿಂದ ತಿಳುವಳಿಕೆ ನೀಡು. ಯುವಕರೊಡನೆ ಸೋದರಭಾವನೆಯಿಂದ ವರ್ತಿಸು.


ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಹಾಗೆಯೇ, ಯುವಕರು ಎಲ್ಲ ವಿಷಯಗಳಲ್ಲೂ ಜಿತೇಂದ್ರಿಯರಾಗಿರಬೇಕೆಂದು ನೀನು ಎಚ್ಚರಿಸು.


ಆದ್ದರಿಂದ ಸಲ್ಲಿಸಬೇಕಾದುದನ್ನು ಅವರಿಗೆ ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು, ಯಾರಿಗೆ ವಿಧೇಯತೆಯೋ ಅವರಿಗೆ ವಿಧೇಯತೆಯನ್ನು, ಯಾರಿಗೆ ಗೌರವವೋ ಅವರಿಗೆ ಗೌರವವನ್ನು ಸಲ್ಲಿಸಿರಿ.


ನೀನು ಮನುಜರಿಗೆಲ್ಲ ಆದಿಪುರುಷನೋ? ಬೆಟ್ಟಗಳಿಗಿಂತ ಮುಂಚಿತವಾಗಿ ಹುಟ್ಟಿದವನೋ?


“ತಲೆನರೆತ ವೃದ್ಧರ ಮುಂದೆ ಎದ್ದುನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಸರ್ವೇಶ್ವರ.


ಆಗ ಬೂಜ್‍ನವನಾದ ಬರಕೇಲನ ಮಗ ಎಲೀಹುವನಿಗೆ ಸಿಟ್ಟೇರಿತು. ಇವನು ರಾಮ್‍ಗೋತ್ರಕ್ಕೆ ಸೇರಿದವನು. ಯೋಬನು ತಾನು ದೇವರಿಗಿಂತ ನ್ಯಾಯವಂತನೆಂದು ಎಣಿಸಿಕೊಂಡ ಕಾರಣ ಎಲೀಹುವನಿಗೆ ಸಿಟ್ಟುಹತ್ತಿತ್ತು.


ಆ ಮೂವರ ಬಾಯಿಯಲ್ಲಿ ಉತ್ತರವೇ ಇಲ್ಲದುದನ್ನು ಕಂಡು ಕಿಡಿಕಿಡಿಯಾದನು.


ಜ್ಞಾನವಿದೆ ವಯೋವೃದ್ಧರಲ್ಲಿ ವಿವೇಕವಿದೆ ದೀರ್ಘಾಯುಷ್ಯರಲ್ಲಿ.


ಎಲೀಹುವನು ಮತ್ತೆ ಹೀಗೆಂದನು:


ಎಲೀಹುವನು ಮತ್ತೆ ಹೀಗೆಂದು ಹೇಳಿದನು:


ಬಳಿಕ ಎಲೀಹುವನು ಮುಂದುವರೆದು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು