Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:18 - ಕನ್ನಡ ಸತ್ಯವೇದವು C.L. Bible (BSI)

18 ಸಿರಿಸಂಪತ್ತು ನಿನ್ನನು ಕುಚೋದ್ಯಕ್ಕೆ ನೂಕೀತು, ಎಚ್ಚರಿಕೆ! ಹೆಚ್ಚು ಲಂಚಕೋರತನದಿಂದ ವಂಚಿತನಾಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿನ್ನ ಸಿಟ್ಟು ನಿನ್ನನ್ನು ಮರುಳುಗೊಳಿಸಿ ಕುಚೋದ್ಯಕ್ಕೆ ನೂಕದಂತೆ ನೋಡಿಕೋ! ಕೊಡಬೇಕಾದ ಈಡು ದೊಡ್ಡದೆಂದು ಹಿಂದೆಗೆಯಬೇಡ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿನ್ನ ಸಿಟ್ಟು ನಿನ್ನನ್ನು ಮರುಳುಗೊಳಿಸಿ ಕುಚೋದ್ಯಕ್ಕೆ ನೂಕೀತು, ನೋಡಿಕೋ! ಕೊಡಬೇಕಾದ ಈಡು ದೊಡ್ಡದೆಂದು ಹಿಂದೆಗೆಯಬೇಡ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೋಬನೇ, ಕೋಪವು ನಿನ್ನನ್ನು ಮೋಸಗೊಳಿಸದಿರಲಿ; ಹಣವು ನಿನ್ನ ಮನಸ್ಸನ್ನು ಮಾರ್ಪಡಿಸದಿರಲಿ, ನಿನ್ನನ್ನು ನಾಶನಕ್ಕೆ ನಡೆಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯಾರೂ ನಿನ್ನನ್ನು ಸಂಪತ್ತಿನಿಂದ ಆಕರ್ಷಿಸದಂತೆ ಜಾಗರೂಕನಾಗಿರು; ದೊಡ್ಡ ಲಂಚತನವು ನಿನ್ನನ್ನು ವಂಚಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:18
17 ತಿಳಿವುಗಳ ಹೋಲಿಕೆ  

ಮಾನವರ ಎಲ್ಲಾ ಪಾಪಾಕ್ರಮಗಳ ಮೇಲೆ ದೇವರ ಕೋಪಾಗ್ನಿ ಸ್ವರ್ಗದಿಂದ ಎರಗುವುದೆಂದು ಪ್ರಕಟವಾಗುತ್ತಿದೆ. ಏಕೆಂದರೆ, ಅವರ ಅಕ್ರಮ ನಡತೆ ಸತ್ಯವನ್ನು ಅಡಗಿಸುತ್ತಿದೆ.


‘ಇವನನ್ನು ಕಾಪಾಡಿ; ಅಧೋಲೋಕಕ್ಕೆ ತಳ್ಳಬೇಡಿ, ಬಿಡುಗಡೆ ಬೇಕಾದ ಈಡು ಇದೋ ಇಲ್ಲಿ!’ ಎಂದು ಹೇಳಿದರೆ,


ಹುರುಳಿಲ್ಲದ ಮಾತುಗಳನ್ನು ಆಡುವವರಿಗೆ ಮರುಳಾಗದಿರಿ. ಇಂಥ ಕೃತ್ಯಗಳನ್ನು ಮಾಡುವ ದುಷ್ಕರ್ಮಿಗಳ ಮೇಲೆ ದೇವರ ಕೋಪ ಎರಗುತ್ತದೆ.


ಇವರು ಎಲ್ಲರ ಉದ್ಧಾರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದರು. ಸರ್ವರೂ ಉದ್ಧಾರವಾಗಬೇಕೆಂಬ ದೈವೇಚ್ಛೆಗೆ ಸೂಕ್ತ ಸಮಯದಲ್ಲಿ ಸಾಕ್ಷಿ ನೀಡಿದರು.


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ಫರಿಸಾಯರಲ್ಲೂ ಸದ್ದುಕಾಯರಲ್ಲೂ ಅನೇಕರು ತನ್ನಿಂದ ಸ್ನಾನದೀಕ್ಷೆ ಪಡೆಯಲು ಬರುವುದನ್ನು ಯೊವಾನ್ನನು ನೋಡಿದನು. ಅವರನ್ನು ಉದ್ದೇಶಿಸಿ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆ ಕೊಟ್ಟವರಾರು?


ಏಕೆನೆ, ಎಡೆಬಿಡದೆ ದಂಡಿಸಿದರು ಪ್ರಜೆಗಳನು ಕೋಪೋದ್ರೇಕದಿಂದ ತಡೆಯಿಲ್ಲದೆ ದಬ್ಬಾಳಿಕೆ ನಡೆಸಿದರು ರಾಷ್ಟ್ರಗಳ ಮೇಲೆ ಸಿಟ್ಟಿನಿಂದ.


ಬೆಂಬಲವಾಗಿ ನಿಂತಿಹನು ಪ್ರಭು ನಿನ್ನ ಹತ್ತಿರದಲೆ I ಸದೆಬಡಿವನು ಅರಸರನು ತನ್ನ ಪ್ರಕೋಪ ದಿನದಲೆ II


ಸಾಕು ಮಾಡು ನಿನ್ನ ಕೈ ಹೊಡೆತವನು I ಅದರಿಂದ ನಾ ಸಾಯುತ್ತಿರುವೆನು II


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ಅನಂತರ ಸಿಡಿದೆದ್ದು ಹೀಗೆಂದು ನುಡಿವನು: “ನಾ ನೇಮಿಸಿದ ಅರಸನನೇ ಸ್ಥಾಪಿಸಿಹೆನು I ಸಿಯೋನ್ ಶ್ರೀಶಿಖರದಲೇ ಅವನನು ಇರಿಸಿಹೆನು” I ಈ ಪರಿ ಕೆರಳಿ ಕಳವಳಗೊಳಿಸುವನು ಅವರನು II


ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ.


“ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು. ಆದರೂ ನೀನು ಗೋಳಾಡಬೇಡ, ಅಳಬೇಡ, ಕಣ್ಣೀರು ಸುರಿಸಬೇಡ.


ಐಶ್ವರ್ಯವಾಗಲಿ, ಧನಸಾಮರ್ಥ್ಯವಾಗಲಿ ಕಷ್ಟಾನುಭವವಿಲ್ಲದೆ ನಿನಗೆ ಈಡಾಗವಿಲ್ಲಿ.


ಅದಕ್ಕೆ ಸರ್ವೇಶ್ವರ, “ನೀನು ಹೀಗೆ ಸಿಟ್ಟುಗೊಳ್ಳುವುದು ಸರಿಯೇ?” ಎಂದರು.


ಅದಕ್ಕೆ ದೇವರು: “ನೀನು ಸೋರೆಗಿಡದ ವಿಷಯದಲ್ಲಿ ಸಿಟ್ಟುಗೊಳ್ಳುವುದು ಸರಿಯೇ?” ಎಂದು ಕೇಳಲು, ಯೋನನು, “ಹೌದು, ಸಾವನ್ನು ಬಯಸುವಷ್ಟು ಸಿಟ್ಟುಗೊಳ್ಳುವುದು ಸರಿಯಲ್ಲವೇ?’ ಎಂದು ಉತ್ತರವಿತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು