Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:27 - ಕನ್ನಡ ಸತ್ಯವೇದವು C.L. Bible (BSI)

27 ನೀರಿನ ಹನಿಗಳನು ಹೀರಿಕೊಳ್ಳುತ್ತಾನೆ ಮಂಜಿನಿಂದ ತಿಳಿಮಳೆಯನು ಸುರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನೀರಿನ ಹನಿಗಳನ್ನು ಎಳೆದುಕೊಳ್ಳುವನು, ಅವು ತಿಳಿಮಳೆಯಾಗಿ ಆತನ ಮಂಜಿನಿಂದ ಉದುರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನೀರಿನ ಹನಿಗಳನ್ನು ಎಳೆದುಕೊಳ್ಳುವನು, ಅವು ತಿಳಿಮಳೆಯಾಗಿ ಆತನ ಮಂಜಿನಿಂದ ಉದುರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ದೇವರು ಭೂಮಿಯ ನೀರನ್ನು ಹಬೆಯ ರೂಪದಲ್ಲಿ ಮೇಲಕ್ಕೆ ಕೊಂಡೊಯ್ದು ಅದನ್ನು ಮಂಜನ್ನಾಗಿಯೂ ಮಳೆಯನ್ನಾಗಿಯೂ ಪರಿವರ್ತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ದೇವರು ನೀರಿನ ಹನಿಗಳನ್ನು ಕೂಡಿಸಿದಾಗ, ಮಂಜಿನಿಂದ ತಿಳಿಮಳೆ ಸುರಿಯುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:27
19 ತಿಳಿವುಗಳ ಹೋಲಿಕೆ  

ಕವಿಸುವನಾತ ಮೋಡಗಳನು ಗಗನದಲಿ I ಸುರಿಸುವನು ಮಳೆಯನು ಬುವಿಯಲಿ I ಬೆಳೆಸುವನು ಹುಲ್ಲನು ಬೆಟ್ಟಗಳಲಿ II


ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ.


ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.


ಕಿಚ್ಚು, ಕಲ್ಮಳೆ, ಹಿಮ, ಹಬೆ ಇವುಗಳೆಲ್ಲವೂ I ಆತ ಹೇಳಿದಂತೆ ಕೇಳುವ ಬಿರುಗಾಳಿಯೂ, II


ನಿನ್ನಾಜ್ಞೆ ಮೋಡ ಮುಟ್ಟಿದ ಮಾತ್ರಕೆ ಹೇರಳವಾದ ನೀರು ನಿನ್ನನು ಆವರಿಸುವುದೊ?


ಅದರ ಆರ್ಭಟವು ಆತನನ್ನು ಪ್ರಕಟಿಸುತ್ತದೆ ಆತನ ಆಗಮನವನು ದನಕರುಗಳಿಗೂ ತಿಳಿಸುತ್ತದೆ.”


ದೇವರೆಸಗುತ್ತಾನೆ ಅಸಾಧ್ಯ ಅತಿಶಯಗಳನು ಅಸಂಖ್ಯವಾದ ಅದ್ಭುತಕಾರ್ಯಗಳನು.


ಮಳೆಗರೆಯುತ್ತಾನೆ ಭೂಮಿಯ ಮೇಲೆ ನೀರೊದಗಿಸುತ್ತಾನೆ ಹೊಲಗದ್ದೆಗಳಿಗೆ.


ದೇವರೆನಿತೋ ಮಹೋನ್ನತನು ನಮ್ಮ ಅರಿವಿಗಾತನು ಎಟುಕನು ಅಸಂಖ್ಯಾತ ಆತನ ವರುಷಗಳು.


ಮೋಡಗಳು ಮಳೆಗರೆಯುತ್ತವೆ, ಹಲವಾರು ಜನರ ಮೇಲೆ ಅದನ್ನು ಚಿಮುಕಿಸುತ್ತವೆ.


ಹಿಮಕ್ಕೆ, ‘ಹದವಾಗಿ ಭೂಮಿಗೆ ಬೀಳು’ ಎನ್ನುತ್ತಾನೆ ಭಾರಿಮಳೆಗೆ, ‘ರಭಸದಿಂದ ಸುರಿ’ ಎನ್ನುತ್ತಾನೆ.


ಮೋಡಗಳ ಮೇಲೆ ಮಂಜನು ಹೇರುತ್ತಾನೆ ಮೇಘಮಂಡಲವು ಆತನ ಮಿಂಚನು ಹರಡುತ್ತದೆ.


ಆಕಾಶದಲ್ಲಿ ನೀರು ಭೋರ್ಗರೆಯುವಂತೆ ಭುವಿಯ ಕಟ್ಟಕಡೆಯಿಂದ ಮೋಡಗಳು ಏರುವಂತೆ ಮಳೆಗಾಗಿ ಮಿಂಚು ಹೊಳೆಯುವಂತೆ ತಮ್ಮ ಭಂಡಾರದಿಂದ ಗಾಳಿ ಬೀಸುವಂತೆ - ಮಾಡುತ್ತದೆ ಸರ್ವೇಶ್ವರನಾ ಗರ್ಜನೆ.


ಮಳೆಗೆ ಕಟ್ಟಳೆಯನು ವಿಧಿಸಿದಾಗ ಗುಡುಗು ಮಿಂಚಿಗೆ ಮಾರ್ಗವನ್ನೇರ್ಪಡಿಸಿದಾಗ,


ಆತನ ಜ್ಞಾನದಿಂದಲೆ ಅಡಿಸಾಗರ ಒಡೆಯುತ್ತದೆ ಆಕಾಶಮಂಡಲ ಇಬ್ಬನಿಯನ್ನು ಸುರಿಸುತ್ತದೆ.


ವಸಂತಕಾಲದಲ್ಲಿ ಮಳೆಗಾಗಿ ಸರ್ವೇಶ್ವರಸ್ವಾಮಿಗೆ ಪ್ರಾರ್ಥನೆ ಮಾಡಿರಿ. ಮೋಡ ಮಿಂಚುಗಳನ್ನು ಗಾಳಿಮಳೆಯನ್ನು ಉಂಟುಮಾಡುವವರು ಅವರೇ. ಸರ್ವರಿಗೂ ಹೊಲಗದ್ದೆಗಳಲ್ಲಿ ಪೈರುಪಚ್ಚೆಗಳನ್ನು ನೀಡುವವರು ಅವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು