Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:28 - ಕನ್ನಡ ಸತ್ಯವೇದವು C.L. Bible (BSI)

28 ಮಳೆಗೆ ತಂದೆಯೊಬ್ಬನಿದ್ದಾನೆಯೆ? ಮಂಜಿನ ಹನಿಗೆ ಹೆತ್ತವಳಿದ್ದಾಳೆಯೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮಳೆಗೆ ತಂದೆಯುಂಟೋ? ಮಂಜಿನ ಹನಿಗಳನ್ನು ಪಡೆದವನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಮಳೆಗೆ ತಂದೆಯುಂಟೋ? ಮಂಜಿನ ಹನಿಗಳನ್ನು ಪಡೆದವನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೋಬನೇ, ಮಳೆಗೆ ತಂದೆಯಿರುವನೇ? ಇಬ್ಬನಿಯ ಹನಿಗಳನ್ನು ನಿರ್ಮಿಸಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಮಳೆಗೆ ತಂದೆ ಇದ್ದಾನೆಯೇ? ಮಂಜಿನ ಹನಿಗಳನ್ನು ಹೆತ್ತವಳಿದ್ದಾಳೆಯೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:28
22 ತಿಳಿವುಗಳ ಹೋಲಿಕೆ  

ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ.


ಕವಿಸುವನಾತ ಮೋಡಗಳನು ಗಗನದಲಿ I ಸುರಿಸುವನು ಮಳೆಯನು ಬುವಿಯಲಿ I ಬೆಳೆಸುವನು ಹುಲ್ಲನು ಬೆಟ್ಟಗಳಲಿ II


ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ.


“ಸುಗ್ಗಿಗೆ ಮೂರು ತಿಂಗಳಿರುವಾಗಲೂ ಮಳೆಯನ್ನು ತಡೆದವನು ನಾನೇ. ಒಂದೂರಿಗೆ ಮಳೆಯಾಗುವಂತೆಯೂ ಮತ್ತೊಂದೂರಿಗೆ ಮಳೆಯಾಗದಂತೆಯೂ ಮಾಡಿದವನು ನಾನೇ. ಒಂದು ಹೊಲಕ್ಕೆ ಮಳೆಯಾಗುವಂತೆ, ಮತ್ತೊಂದು ಹೊಲ ಮಳೆಯಿಲ್ಲದೆ ಬಾಡಿಹೋಗುವಂತೆ ಮಾಡಿದವನು ನಾನೇ.


“ಸಿಯೋನಿನ ಜನರೇ, ಹರ್ಷಿಸಿರಿ; ಸ್ವಾಮಿ ದೇವರಾದ ಸರ್ವೇಶ್ವರ ನಿಮಗೆ ಮಾಡಿದ ಉಪಕಾರಗಳಿಗಾಗಿ ಆನಂದಿಸಿರಿ. ನಿಮಗೆ ಅವರು ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು; ಮುಂಗಾರು ಹಿಂಗಾರು ಮಳೆಗಳನ್ನು ಸುರಿಸುವರು.


ಇರುವೆನು ಇಸ್ರಯೇಲಿಗೆ ಇಬ್ಬನಿಯಂತೆ ಅರಳುವುದು ಆ ನಾಡು ತಾವರೆಯಂತೆ ಬೇರೂರುವುದು ಲೆಬನೋನಿನ ದೇವದಾರು ವೃಕ್ಷದಂತೆ.


ಆಕಾಶದಲ್ಲಿ ನೀರು ಭೋರ್ಗರೆಯುವಂತೆ ಭುವಿಯ ಕಟ್ಟಕಡೆಯಿಂದ ಮೋಡಗಳು ಏರುವಂತೆ ಮಳೆಗಾಗಿ ಮಿಂಚು ಹೊಳೆಯುವಂತೆ ತಮ್ಮ ಭಂಡಾರದಿಂದ ಗಾಳಿ ಬೀಸುವಂತೆ - ಮಾಡುತ್ತದೆ ಸರ್ವೇಶ್ವರನಾ ಗರ್ಜನೆ.


ಮುಂಗಾರು, ಹಿಂಗಾರು ಹೀಗೆ ಸಕಾಲದ ಮಳೆಯನ್ನು ಬರಮಾಡುವವನು ನಾನು. ಸುಗ್ಗಿಯ ಕ್ಲುಪ್ತವಾರಗಳನ್ನು ಪ್ರತ್ಯೇಕಿಸುವವನು ನಾನು. ಆದರೆ ನೀವು ನನ್ನಲ್ಲಿ ಭಯಭಕ್ತಿ ಇಡಲು ಮನದಲ್ಲಿ ನೆನೆಯದೆ ಇದ್ದೀರಿ.


ಆತನ ಜ್ಞಾನದಿಂದಲೆ ಅಡಿಸಾಗರ ಒಡೆಯುತ್ತದೆ ಆಕಾಶಮಂಡಲ ಇಬ್ಬನಿಯನ್ನು ಸುರಿಸುತ್ತದೆ.


“ಭೂಗರ್ಭವನ್ನು ಭೇದಿಸಿಕೊಂಡು ಬಂದ ಸಮುದ್ರವನು ದ್ವಾರಗಳಿಂದ ಬಂಧಿಸಿ ಮುಚ್ಚಿದವನಾರು?


ನನ್ನ ಬೇರುಗಳು ನೀರಿನವರೆಗೆ ವ್ಯಾಪಿಸಿಕೊಂಡಿವೆ ನನ್ನ ರೆಂಬೆಗಳ ಮೇಲೆ ರಾತ್ರಿಯೆಲ್ಲ ಇಬ್ಬನಿ ಬಿದ್ದಿರುತ್ತದೆ.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.


ಮಳೆಯಾಗಲಿ, ಮಂಜಾಗಲಿ ಬೀಳದಿರಲಿ ಆ ಗಿಲ್ಬೋವ ಗುಡ್ಡಗಳ ಮೇಲೆ ಅದರ ಮೇಲಿನ ಹೊಲಗಳು ಬೆಳೆಕೊಡದಿರಲಿ ನೈವೇದ್ಯಕೆ. ಏಕೆನೆ ಅಲ್ಲಿ ಬಿದ್ದಿವೆ ಯುದ್ಧವೀರರ ಕತ್ತಿಗುರಾಣಿ ಅಭಿಷಿಕ್ತನಲ್ಲದವನ ಗುರಾಣಿಯಂತೆ ಆ ಸೌಲನ ಗುರಾಣಿ!


ವಾಸಿಸಿರಿ ಇಸ್ರಯೇಲರೇ, ನಿರ್ಭಯರಾಗಿ ಯಕೋಬನ ಸಂತತಿಯೇ, ಸುರಕ್ಷಿತವಾಗಿ ಆಗಸದಿಂದ ಮಳೆಸುರಿಯುವ ನಾಡಿನಲ್ಲಿ ಧಾನ್ಯ, ದ್ರಾಕ್ಷಾರಸ ಸಮೃದ್ಧಿಯಾಗಿರುವಲ್ಲಿ!


ಜೋಸೆಫ್ ಕುಲ ಕುರಿತು ಮೋಶೆ ನುಡಿದದ್ದು : “ಇವನ ಪ್ರಾಂತ್ಯ ಆಶೀರ್ವದಿತವಾಗಲಿ ಸರ್ವೇಶ್ವರನಿಂದ ಮೇಲಣ ಆಕಾಶದ ಮಂಜಿನಿಂದ ಕೆಳಗಿನ ಸಾಗರದ ಒರತೆಗಳಿಂದ;


ಆಗ ಇಸಾಕನು - "ಸಾರವತ್ತಾದ ಭೂಮಿಗೆ ದೂರ ಆಗಸದಿಂದೇಳುವ ಮಂಜಿಗೆ ದೂರ ಇರುವುದು ನೀ ನೆಲೆಸುವ ಬಿಡಾರ.


ದಯಪಾಲಿಸಲಿ ದೇವ ನಿನಗೆ ಆಗಸದ ಮಂಜನು, ಸಾರವುಳ್ಳ ಹೊಲವನು ಅನುಗ್ರಹಿಸಲಿ ಹೇರಳ ದವಸ ಧಾನ್ಯವನು, ದ್ರಾಕ್ಷಾರಸವನು.


ನೀರಿನ ಹನಿಗಳನು ಹೀರಿಕೊಳ್ಳುತ್ತಾನೆ ಮಂಜಿನಿಂದ ತಿಳಿಮಳೆಯನು ಸುರಿಸುತ್ತಾನೆ.


ಮೋಡಗಳು ಮಳೆಗರೆಯುತ್ತವೆ, ಹಲವಾರು ಜನರ ಮೇಲೆ ಅದನ್ನು ಚಿಮುಕಿಸುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು