Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 39:16 - ಕನ್ನಡ ಸತ್ಯವೇದವು C.L. Bible (BSI)

16 ತನ್ನ ಮರಿ ತನ್ನದೇ ಅಲ್ಲ ಎಂಬಷ್ಟು ಕ್ರೂರತೆ ಅದರದು ತನ್ನ ಹೆರಿಗೆ ನಿಷ್ಫಲವಾಯಿತೆಂಬ ಸಂಕಟ ಅದಕ್ಕಿರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ತನ್ನ ಮರಿಗಳನ್ನು ತನ್ನವುಗಳೆಂದೆಣಿಸದೆ ಬಾಧೆಗೊಳಪಡಿಸುವುದು, ತನ್ನ ಹೆರಿಗೆ ನಿಷ್ಫಲವಾದರೂ ಅದಕ್ಕೆ ಏನೂ ಚಿಂತೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ತನ್ನ ಮರಿಗಳನ್ನು ತನ್ನವುಗಳೆಂದೆಣಿಸದೆ ಬಾಧೆಗೊಳಪಡಿಸುವದು, ತನ್ನ ಹೆರಿಗೆ ನಿಷ್ಫಲವಾದರೂ ಅದಕ್ಕೆ ಏನೂ ಚಿಂತೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಉಷ್ಟ್ರಪಕ್ಷಿಯು ತನ್ನ ಮರಿಗಳನ್ನು ಕಡೆಗಣಿಸಿ ತನ್ನ ಮರಿಗಳಲ್ಲವೆಂಬಂತೆ ವರ್ತಿಸುತ್ತದೆ; ಮರಿಗಳು ಸತ್ತುಹೋದರೆ ತನ್ನ ಪ್ರಯಾಸವು ವ್ಯರ್ಥವಾಯಿತೆಂಬ ಚಿಂತೆಯೂ ಅದಕ್ಕಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ತನ್ನ ಮರಿಗಳನ್ನು ತನ್ನವುಗಳಲ್ಲ ಎಂಬಂತೆ ಕ್ರೂರವಾಗಿ ನಡೆಸುತ್ತದೆ; ಉಷ್ಟ್ರಪಕ್ಷಿಯು ತನ್ನ ಹೆರಿಗೆ ವ್ಯರ್ಥವಾದರೂ ಅದಕ್ಕೆ ಚಿಂತೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 39:16
10 ತಿಳಿವುಗಳ ಹೋಲಿಕೆ  

ಮರಿಗಳಿಗೆ ಮೊಲೆಕೊಟ್ಟು ಹಾಲುಣಿಸುತ್ತವೆ ನರಿಗಳು ನನ್ನ ಜನರು ಆಗಿಹರು ಕಾಡಿನ ಉಷ್ಟ್ರಪಕ್ಷಿಯಂತೆ ಕ್ರೂರಿಗಳು.


ಮಾತ್ರವಲ್ಲ, ಅವರು ಅವಿವೇಕಿಗಳು, ಅಪ್ರಾಮಾಣಿಕರು, ನಿಷ್ಕರುಣಿಗಳು ಮತ್ತು ನಿರ್ದಯಿಗಳು.


ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು. ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥವಾಗುವುದು. ಇದೆಲ್ಲ ಸೇನಾಧೀಶ್ವರ ಸರ್ವೇಶ್ವರನ ಚಿತ್ತವಷ್ಟೆ.


ಹೇ, ಸರ್ವೇಶ್ವರಾ ಕಟಾಕ್ಷಿಸು ! ಇಷ್ಟೆಲ್ಲಾ ನೀ ಮಾಡಿದ್ದು ಯಾರಿಗೆಂದು ಯೋಚಿಸು ! ತಾಯಂದಿರು ತಿನ್ನಬೇಕೆ ತಾವು ಆರೈಕೆ ಮಾಡಿದ ತಮ್ಮ ಕರುಳ ಕುಡಿಯನ್ನೇ? ಹತರಾಗಬೇಕೆ ಯಾಜಕರೂ ಪ್ರವಾದಿಗಳೂ ಸ್ವಾಮಿಯ ಪವಿತ್ರಾಲಯದಲ್ಲೆ?


ಪಟ್ಟಣಕ್ಕೆ ದಾರಿತಿಳಿಯದವನಿಗೆ ಮೂಢರು ತಿಳಿಸಲು ಪಡುವ ಪ್ರಯಾಸ ಕೇವಲ ಆಯಾಸ.


ಆ ಮೊಟ್ಟೆಗಳನು ಜನರು ಕಾಲಿನಿಂದ ಮೆಟ್ಟಿಯಾರು ಕಾಡುಮೃಗ ಅವುಗಳನು ತುಳಿದೀತು ಎಂಬ ಯೋಚನೆ ಅದನು ಕಾಡದು.


ಅದಕ್ಕೆ ನಾನು ಕೊಡಲಿಲ್ಲ ಜ್ಞಾನವನು ದಯಪಾಲಿಸಲಿಲ್ಲ ಗ್ರಹಿಕೆಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು