Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 40:11 - ಕನ್ನಡ ಸತ್ಯವೇದವು C.L. Bible (BSI)

11 ನಿನ್ನ ಕಡುಕೋಪವನು ಎಲ್ಲೆಡೆಯೂ ಹರಡಿಸು ಕಣ್ಣಿಟ್ಟು ಗರ್ವಿಷ್ಠರೆಲ್ಲರನು ತಗ್ಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತುಂಬಿ ತುಳುಕುವ ನಿನ್ನ ಕೋಪವನ್ನು ಎರಚಿ, ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಅವನನ್ನು ತಗ್ಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತುಂಬಿತುಳುಕುವ ನಿನ್ನ ಕೋಪವನ್ನು ಎರಚಿ ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಅವನನ್ನು ತಗ್ಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀನು ದೇವರಂತಿದ್ದರೆ, ನಿನ್ನ ಕೋಪವನ್ನು ತೋರಿ ಗರ್ವಿಷ್ಠರನ್ನು ದಂಡಿಸು; ಅವರನ್ನು ದೀನರನ್ನಾಗಿ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿನ್ನ ಕಡುಕೋಪವನ್ನು ಎಲ್ಲಾ ಗರ್ವಿಷ್ಠರ ಮೇಲೆ ಸುರಿಸಿ, ಅವರನ್ನು ತಗ್ಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 40:11
34 ತಿಳಿವುಗಳ ಹೋಲಿಕೆ  

ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


ಜನಸಾಮಾನ್ಯರ ಅಟ್ಟಹಾಸ ಕುಗ್ಗಿಹೋಗುವುದು, ಜನಪ್ರಮುಖರ ಅಹಂಕಾರ ತಗ್ಗಿಹೋಗುವುದು; ಸರ್ವೇಶ್ವರ ಮಾತ್ರ ಆ ದಿನದಂದು ಉನ್ನತೋನ್ನತವಾಗಿರುವರು.


ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.


“ದೇವರ ದೃಷ್ಟಿಯಲ್ಲಿ ಪಾಪಮುಕ್ತನಾಗಿ ಮನೆಗೆ ತೆರಳಿದವನು ಈ ಸುಂಕವಸೂಲಿಯವನು, ಆ ಫರಿಸಾಯನಲ್ಲ, ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಏಕೆಂದರೆ, ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು. ತನ್ನನ್ನು ತಾನೇ ಕೆಳಗಿಳಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು ಯೇಸು.


“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


“ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಅಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ.


ಎಂದೇ ಸುರಿಸಿದನಾತ ರೋಷಾಗ್ನಿಯನು, ಯುದ್ಧದ ರೌದ್ರವನು ಅವರ ಮೇಲೆಲ್ಲ; ಸುತ್ತಲು ಉರಿ ಹತ್ತಿದರೂ ಅವರು ಅರಿಯಲಿಲ್ಲ, ದಹಿಸಿದರೂ ಅವರು ಕಲಿಯಲಿಲ್ಲ.


ಸಿಡಿಲಿನಿಂದ ಚೆದರಿಸಿಬಿಡು ಶತ್ರುಗಳನು I ನಿನ್ನಂಬುಗಳಿಂದ ಭ್ರಾಂತಗೊಳಿಸವರನು II


ಅವನ ಮೇಲೆ ಅದು ಬೀಸುತ್ತದೆ ನಿರ್ದಾಕ್ಷಿಣ್ಯದಿಂದ ತಪ್ಪಿಸಿಕೊಳ್ಳಲು ಅವನು ಯತ್ನಿಸುತ್ತಾನೆ ಅದರ ಹೊಡೆತದಿಂದ.


ಅವನು ಹೊಟ್ಟೆಯನು ತುಂಬಿಸಿಕೊಳ್ಳುವಾಗಲೇ ದೇವರು ಸುರಿಸುವರು ಕೋಪಾಗ್ನಿಯನು ಆಹಾರದಂತೆ.


‘ಉರಿದೇಳುತ್ತಿದೆ ಕೆಳಲೋಕದ ತನಕ ಎನ್ನ ಕೋಪಾಗ್ನಿ ದಹಿಸಿಬಿಡುವುದದು ಭೂಮಿಯನು ಬೆಳೆಸಹಿತವಾಗಿ ಭಸ್ಮಮಾಡುವುದದು ಬೆಟ್ಟಗಳನು ಬುಡಸಮೇತವಾಗಿ.


ಆತ ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಈಜಿಪ್ಟಿನವರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ ಆ ವಿಷಯದಲ್ಲೇ ಅವರನ್ನು ತಗ್ಗಿಸಿದ್ದಾನೆ. ಆದ್ದರಿಂದ ಸರ್ವೇಶ್ವರ ಸ್ವಾಮಿಯೇ ಎಲ್ಲ ದೇವರುಗಳಿಗಿಂತ ದೊಡ್ಡವರೆಂದು ಈಗ ತಿಳಿದುಕೊಂಡಿದ್ದೇನೆ,” ಎಂದು ಹೇಳಿದನು.


ಹೇ ಸರ್ವೇಶ್ವರಾ, ನಿನ್ನ ಭುಜಬಲ ಶಕ್ತಿಯುತ! ಪುಡಿ ಪುಡಿ ಮಾಡಿತು ನಿನ್ನ ಶತ್ರುಗಳನು ಆ ಬಾಹುಬಲ!


ಅಂಥವರು ದೇವರ ಉಸಿರಿನಿಂದಲೆ ನಾಶವಾಗುವರು ಆತನ ಸಿಟ್ಟಿನಿಂದಲೆ ಸತ್ತುಹೋಗುವರು.


ದುರುಳನು ಆಪತ್ತಿನಾ ದಿನ ಸುರಕ್ಷಿತನಾಗಿರುತ್ತಾನೆ ದೇವರ ಆ ಕೋಪೋದ್ರೇಕದ ದಿನ ಆಶ್ರಯ ಪಡೆಯುತ್ತಾನೆ.


ನಿನ್ನನ್ನು ಕೆಲಸದಿಂದ ತೆಗೆದುಬಿಡುವರು, ನಿನ್ನ ಪದವಿಯಿಂದ ತೆಗೆದುಹಾಕುವರು.


ಇದು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಸಂಕಲ್ಪವೇ ಸರಿ. ಗರ್ವಿಗಳ ಸಕಲ ದರ್ಪವನ್ನು ದಮನಮಾಡಲು, ವಿಶ್ವವಿಖ್ಯಾತರನ್ನು ಅವಮಾನಗೊಳಿಸಲು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಯೋಜನೆಯಿದು.


ಈಜುವವರು ಕೈಯಾಡಿಸುವಂತೆ ಮೋವಾಬ್ ರೊಚ್ಚಿನಲ್ಲಿ ಕೈಯಾಡಿಸುವುದು. ಅದರ ಗರ್ವವನ್ನೂ ಕೈಚಳಕವನ್ನೂ ಸರ್ವೇಶ್ವರ ಸ್ವಾಮಿ ಅಡಗಿಸಿಬಿಡುವರು.


ತಗ್ಗಿಸುವನಾತ ಎತ್ತರದಲಿ ವಾಸಿಸುವವರನು, ಕೆಡವಿ, ನೆಲಸಮಮಾಡಿ, ಧೂಳಾಗಿಸುವನು ಅವರು ವಾಸಮಾಡುವಾ ಉನ್ನತ ನಗರವನು.


ಮೋವಾಬ್ಯರಿಗೆ ಬಹಳ ಸೊಕ್ಕೇರಿದೆ! ಅವರ ಹೆಮ್ಮೆಯ ಸುದ್ದಿ, ಡಂಭಾಚಾರ, ಅಹಂಕಾರ, ಗರ್ವ, ಸ್ವಪ್ರತಿಷ್ಠೆ ಇವುಗಳ ಸಮಾಚಾರ ನಮ್ಮ ಕಿವಿಗೆ ಬಿದ್ದಿದೆ. -


“ರಾಜರೇ, ಕನಸಿನ ತಾತ್ಪರ್ಯ ಇದು: ನನ್ನೊಡೆಯರಾದ ಅರಸರಿಗೆ ಉಂಟಾಗಲಿರುವ ಪರಾತ್ಪರ ದೇವರ ತೀರ್ಪು ಹೀಗಿದೆ -


ನಾಶಗೊಳಿಸುವನು ನಿನೆವೆಯನು ಮಹಾಜಲಪ್ರಳಯದಲ್ಲೋ ಎಂಬಂತೆ ಹಿಂದಟ್ಟಿ ತಳ್ಳುವನು ವಿರೋಧಿಗಳನು ಗಾಢಾಂಧಕಾರಕ್ಕೋ ಎಂಬಂತೆ.


ಆತ ಪರ್ವತಗಳನ್ನೇ ಸರಿಸುತ್ತಾನೆ ಅರಿಯದಂತೆ ಅವುಗಳನ್ನು ಉರುಳಿಸುತ್ತಾನೆ ಸಿಟ್ಟುಗೊಂಡಂತೆ.


ಪ್ರಭೂ, ಲೋಕದ ನ್ಯಾಯಾಧಿಪತಿ I ಏಳು, ಗರ್ವಿಗಳಿಗೆ ಮಾಡು ತಕ್ಕಶಾಸ್ತಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು