Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 40:12 - ಕನ್ನಡ ಸತ್ಯವೇದವು C.L. Bible (BSI)

12 ಹೌದು, ಕಣ್ಣಿಟ್ಟು ಗರ್ವಿಷ್ಠರೆಲ್ಲರನು ತಗ್ಗಿಸು ದುಷ್ಟರನು ನಿಂತಲ್ಲೇ ತುಳಿದುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಕುಗ್ಗಿಸಿ, ದುಷ್ಟರನ್ನು ತಟ್ಟನೆ ಕೆಡವಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಕುಗ್ಗಿಸಿ ದುಷ್ಟರನ್ನು ತಟ್ಟನೆ ಕೆಡವಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಗರ್ವಿಷ್ಠರ ಕಡೆಗೆ ನೋಡಿ ಅವರನ್ನು ದೀನರನ್ನಾಗಿ ಮಾಡು. ದುಷ್ಟರನ್ನು ಅವರು ನಿಂತಿರುವಲ್ಲಿಯೇ ಜಜ್ಜಿಹಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಹೌದು, ಗರ್ವಿಷ್ಠರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರು ನಿಂತಿರುವ ಸ್ಥಳದಲ್ಲಿಯೇ ಕೆಡವಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 40:12
20 ತಿಳಿವುಗಳ ಹೋಲಿಕೆ  

“ದ್ರಾಕ್ಷಿಹಣ್ಣನು ತುಳಿವಂತೆ ತುಳಿದಿದ್ದೇನೆ ರಾಷ್ಟ್ರಗಳನು ಒಬ್ಬಂಟಿಗನಾಗೇ ಯಾರು ಇರಲಿಲ್ಲ ನನಗೆ ಸಹಾಯಕ್ಕೆ. ಅವರನ್ನು ತುಳಿದೆ ಕೋಪದಿಂದ ರೋಷಾವೇಶದಿಂದ ಹೊಸಕಿದೆ ಕಾಲಿನಿಂದ. ಅವರ ರಕ್ತ ನನ್ನ ಬಟ್ಟೆಗಳ ಮೇಲೆ ಸಿಡಿದಿದೆ. ನನ್ನ ಉಡುಪಿಗೆಲ್ಲಾ ಆ ಬಿಸಿರಕ್ತ ಮೆತ್ತಿಕೊಂಡಿದೆ.


ನಾನು ಕಾರ್ಯತತ್ಪರನಾಗುವ ದಿನದಂದು ನೀವು ದುಷ್ಟರನ್ನು ತುಳಿದುಬಿಡುವಿರಿ. ಅವರು ನಿಮ್ಮ ಕಾಲಡಿಯ ಧೂಳಿಯಾಗುವರು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಇವರೆಲ್ಲರು ರಣವೀರರಂತೆ ಶತ್ರುಗಳನ್ನು ಬೀದಿಕೆಸರಿನಲ್ಲಿ ತುಳಿದುಬಿಡುವರು. ಸರ್ವೇಶ್ವರ ತಮ್ಮ ಸಂಗಡ ಇದ್ದಾರೆಂದು ಧೈರ್ಯದಿಂದ ಯುದ್ಧಮಾಡುವರು, ಎದುರಿಸುವ ಕುದುರೆ ಸವಾರರನ್ನು ಭ್ರಾಂತಿಗೊಳಿಸುವರು.”


ಸರ್ವೇಶ್ವರ ಇಂತೆನ್ನುತ್ತಾರೆ : “ನಾನು ಲೋಕದವರಿಗೆ ಪಾಪದ ಫಲವನ್ನೂ ದುರುಳರಿಗೆ ದುಷ್ಕೃತ್ಯಗಳ ಫಸಲನ್ನೂ ತಿನ್ನಿಸುವೆನು. ಸೊಕ್ಕಿದವನ ಕೊಬ್ಬನ್ನು ಕರಗಿಸುವೆನು. ಬಲಾತ್ಕಾರ ಮಾಡುವವರ ಹೆಮ್ಮೆಯನ್ನು ಅಡಗಿಸುವೆನು.


ಆ ಧರ್ಮಭ್ರಷ್ಟ ಪ್ರಜೆಗೆ ಇದಿರಾಗಿ ಅಸ್ಸೀರಿಯವನ್ನು ಕಳುಹಿಸುತ್ತೇನೆ. ನನ್ನ ಕೋಪಕ್ಕೆ ಗುರಿಯಾದ ಜನರಿಗೆ ವಿರುದ್ಧ ಕಾರ್ಯವನ್ನು ಕೈಗೊಳ್ಳಲು ಆಜ್ಞೆ ಮಾಡುತ್ತೇನೆ. ನನ್ನ ಪ್ರಜೆಯನ್ನು ಸೂರೆಮಾಡಲು, ಕೊಳ್ಳೆಹೊಡೆಯಲು, ಬೀದಿಯ ಕಸದಂತೆ ತುಳಿದುಬಿಡಲು ಅದಕ್ಕೆ ಆಜ್ಞೆಮಾಡುತ್ತೇನೆ.


ಮಳೆ ತುಂಬಿದ ಮೋಡಗಳು ನೆಲದ ಮೇಲೆ ಸುರಿದುಬಿಡುತ್ತವೆ. ಮರವು ದಕ್ಷಿಣದ ಕಡೆಗಾಗಲಿ, ಉತ್ತರದ ಕಡೆಗಾಗಲಿ ಉರುಳಿದರೆ ಬಿದ್ದ ಕಡೆಯಲ್ಲೆ ಬಿದ್ದಿರುತ್ತದೆ.


ಗರ್ವಿಷ್ಠನ ಮನೆಯನ್ನು ಸರ್ವೇಶ್ವರ ಕೆಡವಿಬಿಡುವನು; ವಿಧವೆಯ ಎಲ್ಲೆ ಮೇರೆಯನ್ನು ಸುಭದ್ರಪಡಿಸುವನು.


ನಮ್ಮ ಪರ ದೇವನಿರಲು ಹೆಣಗುವೆವು ಶೂರರಾಗಿ I ವೈರಿಗಳನು ತುಳಿದುಬಿಡುವನಾತ ಖರೆಯಾಗಿ II


ತಟ್ಟನೆ ಜನಾಂಗಗಳು ನಿರ್ಮೂಲವಾಗುವಂಥ ರಾತ್ರಿಯನು ಬಯಸಬೇಡ.


ಬಡತನ, ಸಿರಿತನ ಕೊಡುವವನು ಆ ಸರ್ವೇಶ್ವರನೇ ತಗ್ಗಿಸುವವನು, ಹೆಚ್ಚಿಸುವವನು ಆತನೇ.


ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!


ಸೇನಾಧೀಶ್ವರ ಸರ್ವೇಶ್ವರ ದಿನವೊಂದನ್ನು ಗೊತ್ತುಮಾಡಿದ್ದಾರೆ. ಅಹಂಕಾರದಿಂದ ಉಬ್ಬಿಹೋದವರಿಗೆ, ಉದ್ಧಟತನದಿಂದ ಕೊಬ್ಬಿಹೋದವರಿಗೆ,


ನಿನ್ನನ್ನು ಕೆಲಸದಿಂದ ತೆಗೆದುಬಿಡುವರು, ನಿನ್ನ ಪದವಿಯಿಂದ ತೆಗೆದುಹಾಕುವರು.


ಇದು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಸಂಕಲ್ಪವೇ ಸರಿ. ಗರ್ವಿಗಳ ಸಕಲ ದರ್ಪವನ್ನು ದಮನಮಾಡಲು, ವಿಶ್ವವಿಖ್ಯಾತರನ್ನು ಅವಮಾನಗೊಳಿಸಲು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಯೋಜನೆಯಿದು.


ಮೋವಾಬ್ಯರಿಗೆ ಬಹಳ ಸೊಕ್ಕೇರಿದೆ! ಅವರ ಹೆಮ್ಮೆಯ ಸುದ್ದಿ, ಡಂಭಾಚಾರ, ಅಹಂಕಾರ, ಗರ್ವ, ಸ್ವಪ್ರತಿಷ್ಠೆ ಇವುಗಳ ಸಮಾಚಾರ ನಮ್ಮ ಕಿವಿಗೆ ಬಿದ್ದಿದೆ. -


“ರಾಜರೇ, ಕನಸಿನ ತಾತ್ಪರ್ಯ ಇದು: ನನ್ನೊಡೆಯರಾದ ಅರಸರಿಗೆ ಉಂಟಾಗಲಿರುವ ಪರಾತ್ಪರ ದೇವರ ತೀರ್ಪು ಹೀಗಿದೆ -


ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


ಹಾಗೆ ಅವರ ಎದೆ ಗರ್ವದಿಂದ ಉಬ್ಬಿಹೋಯಿತು. ಮನಸ್ಸಿಗೆ ಸೊಕ್ಕೇರಿಹೋಯಿತು. ಅವರನ್ನೂ ರಾಜಾಸ್ಥಾನದಿಂದ ತಳ್ಳಲಾಯಿತು. ಮಾನ ಕಳೆದುಹೋಯಿತು.


ಪ್ರಭೂ, ಲೋಕದ ನ್ಯಾಯಾಧಿಪತಿ I ಏಳು, ಗರ್ವಿಗಳಿಗೆ ಮಾಡು ತಕ್ಕಶಾಸ್ತಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು