Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 42:11 - ಕನ್ನಡ ಸತ್ಯವೇದವು C.L. Bible (BSI)

11 ಅವನ ಎಲ್ಲಾ ಅಣ್ಣತಮ್ಮಂದಿರು, ಅಕ್ಕತಂಗಿಯರು, ಹಿಂದಿನ ಪರಿಚಿತರು ಅವನನ್ನು ಕಾಣಬಂದು ಔತಣದಲ್ಲಿ ಭಾಗವಹಿಸಿದರು. ಅವನಿಗೆ ಸರ್ವೇಶ್ವರನಿಂದ ಒದಗಿದ್ದ ಆಪತ್ತಿಗಾಗಿ ಅನುತಾಪ ವ್ಯಕ್ತಪಡಿಸಿ, ಸಂತೈಸಿದರು. ಪ್ರತಿಯೊಬ್ಬರೂ ಒಂದೊಂದು ಬೆಳ್ಳಿ ನಾಣ್ಯವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಅವನ ಎಲ್ಲಾ ಅಣ್ಣತಮ್ಮಂದಿರೂ, ಎಲ್ಲಾ ಅಕ್ಕತಂಗಿಯರೂ, ಮೊದಲು ಅವನ ಮನೆಯಲ್ಲಿ ಅವನೊಂದಿಗೆ ಭೋಜನಮಾಡುತ್ತಿದ್ದ ಎಲ್ಲಾ ಪರಿಚಿತರೂ ಅವನ ಬಳಿಗೆ ಬಂದು ಯೆಹೋವನು ಅವನ ಮೇಲೆ ಬರಮಾಡಿದ್ದ ಆಪತ್ತಿನ ವಿಷಯವಾಗಿ ತಮ್ಮ ತಮ್ಮ ಅನುತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸಿದರು. ಇದಲ್ಲದೆ ಪ್ರತಿಯೊಬ್ಬರೂ ಒಂದೊಂದು ವರಹವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ಅವನ ಎಲ್ಲಾ ಅಣ್ಣತಮ್ಮಂದಿರೂ ಎಲ್ಲಾ ಅಕ್ಕತಂಗಿಯರೂ ಮೊದಲು ಅವನ ಮನೆಯಲ್ಲಿ ಅವನೊಂದಿಗೆ ಭೋಜನಮಾಡುತ್ತಿದ್ದ ಎಲ್ಲಾ ಪರಿಚಿತರೂ ಅವನ ಬಳಿಗೆ ಬಂದು ಯೆಹೋವನು ಅವನ ಮೇಲೆ ಬರಮಾಡಿದ್ದ ಆಪತ್ತಿನ ವಿಷಯವಾಗಿ ತಮ್ಮ ತಮ್ಮ ಅನುತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸಿದರು. ಇದಲ್ಲದೆ ಪ್ರತಿಯೊಬ್ಬರೂ ಒಂದೊಂದು ವರಹವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೋಬನ ಸಹೋದರಸಹೋದರಿಯರೂ ಅವನ ಪರಿಚಯಸ್ಥರೂ ಅವನ ಮನೆಗೆ ಬಂದರು; ಅವನೊಂದಿಗೆ ಊಟ ಮಾಡಿದರು; ಯೆಹೋವನು ಅವನಿಗೆ ಬಹಳ ಕಷ್ಟವನ್ನು ಬರಮಾಡಿದ್ದರಿಂದ ಅವರು ಮರುಕದಿಂದ ಅವನನ್ನು ಸಂತೈಸಿದರು. ಪ್ರತಿಯೊಬ್ಬರು ಯೋಬನಿಗೆ ಒಂದು ಬೆಳ್ಳಿಯ ನಾಣ್ಯವನ್ನೂ ಒಂದು ಚಿನ್ನದ ಉಂಗುರವನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಯೋಬನ ಎಲ್ಲಾ ಸಹೋದರರು, ಸಹೋದರಿಯರು, ಹಿಂದಿನ ಪರಿಚಿತರೆಲ್ಲರೂ ಅವನ ಬಳಿಗೆ ಬಂದರು. ಅವರು ಯೋಬನ ಸಂಗಡ ಅವನ ಮನೆಯಲ್ಲಿ ಊಟಮಾಡಿ, ಯೆಹೋವ ದೇವರು ಅವನ ಮೇಲೆ ಬರಮಾಡಿದ ಎಲ್ಲಾ ಆಪತ್ತಿಗಾಗಿ ಸಂತಾಪ ವ್ಯಕ್ತಪಡಿಸಿ ಅವನನ್ನು ಸಂತೈಸಿದರು. ಪ್ರತಿಯೊಬ್ಬರೂ ಒಂದೊಂದು ಬೆಳ್ಳಿ ನಾಣ್ಯವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಯೋಬನಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 42:11
18 ತಿಳಿವುಗಳ ಹೋಲಿಕೆ  

ಯೋಬನಿಗೆ ಒದಗಿದ್ದ ಆಪತ್ತಿನ ಸುದ್ದಿ ಆತನ ಮೂವರು ಮಿತ್ರರಿಗೆ ಮುಟ್ಟಿತು. ಅವರು ತಮ್ಮ ತಮ್ಮ ಊರುಗಳಿಂದ, ಅಂದರೆ, ತೇಮಾನ್ಯದಿಂದ ಎಲೀಫಜನೂ, ಶೂಹ್ಯದಿಂದ ಬಿಲ್ದದನು, ನಾಮಾಥ್ಯದಿಂದ ಚೋಫರನೂ ಹೊರಟುಬಂದರು. ಯೋಬನಿಗೆ ತಮ್ಮ ಸಂತಾಪವನ್ನು ವ್ಯಕ್ತಪಡಿಸಿ ಅವನನ್ನು ಸಾಂತ್ವನಗೊಳಿಸಬೇಕೆಂಬ ಒಂದೇ ಉದ್ದೇಶದಿಂದ ಅವರು ಆತನ ಬಳಿಗೆ ಬಂದರು.


ಒಬ್ಬನ ನಡತೆಯನ್ನುಸರ್ವೇಶ್ವರ ಮೆಚ್ಚಿದರೆ, ಅವನ ಶತ್ರುಗಳನ್ನು ಆತ ಮಿತ್ರರನ್ನಾಗಿಸುತ್ತಾನೆ.


ಒಂಟೆಗಳು ಕುಡಿದಾದ ನಂತರ ಅವನು ಆಕೆಯ ಮೂಗಿಗೆ ಅರ್ಧ ತೊಲೆಯ ತೂಕವುಳ್ಳ ಒಂದು ಚಿನ್ನದ ಮೂಗುತಿಯನ್ನೂ ಕೈಗಳಿಗೆ ಹತ್ತು ತೊಲೆಯ ತೂಕವುಳ್ಳ ಎರಡು ಚಿನ್ನದ ಬಳೆಗಳನ್ನೂ ತೊಡಿಸಿದನು.


ಆದ್ದರಿಂದ, ಜೋತುಬೀಳುವ ನಿಮ್ಮ ಕೈಗಳನ್ನು ಮೇಲೆತ್ತಿ, ಕುಸಿದುಬೀಳುವ ನಿಮ್ಮ ಮೊಣಕಾಲುಗಳನ್ನು ಚೇತರಿಸಿಕೊಳ್ಳಿ.


ಸೆರೆಯಲ್ಲಿರುವವರನ್ನು ಸ್ಮರಿಸಿಕೊಳ್ಳಿ. ಅವರ ಸಂಗಡ ನೀವೂ ಸೆರೆಯಲ್ಲಿರುವಂತೆ ಭಾವಿಸಿಕೊಳ್ಳಿ. ಅನ್ಯಾಯಕ್ಕೆ ಒಳಗಾಗಿರುವವರನ್ನು ಜ್ಞಾಪಕದಲ್ಲಿಟ್ಟುಕೊಳ್ಳಿ. ಅನ್ಯಾಯಕ್ಕೆ ಒಳಗಾಗಬಲ್ಲ ದೇಹವೊಂದು ನಿಮಗೂ ಸಹ ಇದೆಯಲ್ಲವೇ?


ಒಂದು ಅಂಗಕ್ಕೆ ನೋವಾದರೆ, ಎಲ್ಲಾ ಅಂಗಗಳೂ ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ನಲಿವಾದರೆ, ಮಿಕ್ಕೆಲ್ಲಾ ಅಂಗಗಳು ಅದರೊಡನೆ ಸೇರಿ ನಲಿದಾಡುತ್ತವೆ.


ಸಂತೋಷಪಡುವವರೊಂದಿಗೆ ಸಂತೋಷಪಡಿರಿ; ದುಃಖಿಸುವವರೊಡನೆ ದುಃಖಿಸಿರಿ.


ನಾನು ನಿಮಗೆ ಬಾಯಿಮಾತಿನಿಂದ ಧೈರ್ಯ ಹೇಳಬಹುದಿತ್ತು ತುಟಿಮಾತುಗಳಿಂದ ಆದರಿಸಿ ಸಾಂತ್ವನ ನೀಡಬಹುದಿತ್ತು.


ನಿನ್ನ ನುಡಿ ಎಡವಿಬೀಳುವವರನ್ನು ನಿಲ್ಲಗೊಳಿಸಿತು ಕುಸಿದುಬೀಳುವ ಮೊಣಕಾಲುಗಳನ್ನು ಬಲಪಡಿಸಿತು.


ಕೆಲವು ಮಂದಿ ಪುಂಡುಪೋಕರು, “ಇವನೇನೋ ನಮ್ಮನ್ನು ರಕ್ಷಿಸುವವನು!” ಎಂದು ತಾತ್ಸಾರಮಾಡಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.


ಇಸ್ರಯೇಲರು ಈಜಿಪ್ಟಿನಿಂದ ತಂದ ಜೋಸೆಫನ ಎಲುಬುಗಳನ್ನು ಶೆಕೆಮ್ ಊರಿನ ಹೊಲದಲ್ಲಿ ಹೂಳಿಟ್ಟರು. ಈ ಹೊಲವನ್ನು ಯಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿನಾಣ್ಯ ಕೊಟ್ಟು ಕೊಂಡುಕೊಂಡಿದ್ದನು. ಅದು ಜೋಸೆಫ್ಯರ ಸೊತ್ತಾಗಿತ್ತು.


ದುಃಖಶಮನಮಾಡಲು ಪುತ್ರಪುತ್ರಿಯರೆಲ್ಲರು ಎಷ್ಟು ಪ್ರಯತ್ನಿಸಿದರೂ ಅವನು ಸಾಂತ್ವನಗೊಳ್ಳಲಿಲ್ಲ; "ನಾನು ಹೀಗೆಯೇ ಹಂಬಲಿಸುತ್ತಾ ನನ್ನ ಮಗನಿರುವ ಮೃತ್ಯುಲೋಕವನ್ನು ಸೇರುತ್ತೇನೆ,” ಎಂದು ಮಗನಿಗಾಗಿ ದುಃಖಿಸುತ್ತಲೇ ಇದ್ದ.


ಬಳಿಕ ತಾನು ತಂದಿದ್ದ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ವಸ್ತ್ರಗಳನ್ನು ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಬೆಲೆಬಾಳುವ ಉಡುಗೊರೆಗಳನ್ನು ಕೊಟ್ಟನು.


ಅನೇಕ ಯೆಹೂದ್ಯರು ಮಾರ್ತಳನ್ನೂ ಮರಿಯಳನ್ನೂ ಕಂಡು ಅವರ ಸೋದರನ ಮರಣಕ್ಕಾಗಿ ಸಂತಾಪ ಸೂಚಿಸಲು ಬಂದಿದ್ದರು.


ಬಡವನನ್ನು ನೆರೆಯವರೂ ತುಚ್ಛವಾಗಿ ಕಾಣುವರು; ಹಣವಂತನಿಗಾದರೊ ಬಹುಜನ ಮಿತ್ರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು