Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 42:7 - ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರಸ್ವಾಮಿ ಈ ಮಾತುಗಳನ್ನು ಯೋಬನಿಗೆ ಹೇಳಿದ ಮೇಲೆ ತೇಮಾನ್ಯನಾದ ಎಲೀಫಜನಿಗೆ, “ನಿನ್ನ ಮೇಲೂ ನಿನ್ನ ಗೆಳೆಯರಿಬ್ಬರ ಮೇಲೂ ನನಗೆ ಕೋಪವಿದೆ! ನನ್ನ ದಾಸ ಯೋಬನಂತೆ ನೀವು ನನ್ನ ವಿಷಯವಾಗಿ ಸರಿಯಾದುದನ್ನು ಆಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ಈ ಮಾತುಗಳನ್ನು ಯೋಬನಿಗೆ ಹೇಳಿದ ಮೇಲೆ ತೇಮಾನ್ಯನಾದ ಎಲೀಫಜನನ್ನು ಕುರಿತು, “ನಿನ್ನ ಮೇಲೆಯೂ, ನಿನ್ನ ಇಬ್ಬರು ಸ್ನೇಹಿತರ ಮೇಲೆಯೂ ಕೋಪಗೊಂಡಿದ್ದೇನೆ; ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಯಥಾರ್ಥವನ್ನಾಡಿದಂತೆ ನೀನು ಆಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನು ಈ ಮಾತುಗಳನ್ನು ಯೋಬನಿಗೆ ಹೇಳಿದ ಮೇಲೆ ತೇಮಾನ್ಯನಾದ ಎಲೀಫಜನನ್ನು ಕುರಿತು - ನಿನ್ನ ಮೇಲೆಯೂ ನಿನ್ನ ಇಬ್ಬರು ಸ್ನೇಹಿತರ ಮೇಲೆಯೂ ಕೋಪಗೊಂಡಿದ್ದೇನೆ; ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಯಥಾರ್ಥವನ್ನಾಡಿದಂತೆ ನೀವು ಆಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಯೋಬನೊಂದಿಗೆ ಮಾತಾಡಿದ ಮೇಲೆ, ಎಲೀಫಜನೊಂದಿಗೆ ಮಾತಾಡಿದನು. ಎಲೀಫಜನು ತೇಮಾನ್ ಪಟ್ಟಣದವನಾಗಿದ್ದನು. ಯೆಹೋವನು ಎಲೀಫಜನಿಗೆ, “ನಾನು ನಿನ್ನ ಮೇಲೆಯೂ ನಿನ್ನ ಇಬ್ಬರು ಸ್ನೇಹಿತರ ಮೇಲೆಯೂ ಕೋಪಗೊಂಡಿದ್ದೇನೆ. ಯಾಕೆಂದರೆ ನೀನು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ. ಆದರೆ ಯೋಬನು ನನ್ನ ಬಗ್ಗೆ ಹೇಳಿದವುಗಳು ಸತ್ಯವಾಗಿವೆ. ಯೋಬನು ನನ್ನ ಸೇವಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಯೋಬನ ಸಂಗಡ ಮಾತಾಡಿದ ತರುವಾಯ, ತೇಮಾನ್ಯನಾದ ಎಲೀಫಜನಿಗೆ, “ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ನನಗೆ ಕೋಪವಿದೆ. ಏಕೆಂದರೆ ನೀವು ನನ್ನ ದಾಸನಾದ ಯೋಬನಂತೆ ನೀವು ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 42:7
13 ತಿಳಿವುಗಳ ಹೋಲಿಕೆ  

ಆ ಮೂವರ ಬಾಯಿಯಲ್ಲಿ ಉತ್ತರವೇ ಇಲ್ಲದುದನ್ನು ಕಂಡು ಕಿಡಿಕಿಡಿಯಾದನು.


ಹೌದು ದೇವಾ, ನಿನಗೆ ದ್ರೋಹವೆಸಗಿದೆ I ನಿನ್ನ ಕಣ್ಗೆ ಕೆಟ್ಟದುದನೆ ಮಾಡಿದೆ II ನಿನ್ನ ನಿರ್ಣಯವು ನ್ಯಾಯಯುತ I ನೀ ನೀಡುವ ತೀರ್ಪು ನಿರ್ಲಿಪ್ತ II


ಆಗ ತೇಮಾನ್ಯನಾದ ಎಲೀಫಜನು ಹೀಗೆಂದನು:


ಯೋಬನಿಗೆ ಒದಗಿದ್ದ ಆಪತ್ತಿನ ಸುದ್ದಿ ಆತನ ಮೂವರು ಮಿತ್ರರಿಗೆ ಮುಟ್ಟಿತು. ಅವರು ತಮ್ಮ ತಮ್ಮ ಊರುಗಳಿಂದ, ಅಂದರೆ, ತೇಮಾನ್ಯದಿಂದ ಎಲೀಫಜನೂ, ಶೂಹ್ಯದಿಂದ ಬಿಲ್ದದನು, ನಾಮಾಥ್ಯದಿಂದ ಚೋಫರನೂ ಹೊರಟುಬಂದರು. ಯೋಬನಿಗೆ ತಮ್ಮ ಸಂತಾಪವನ್ನು ವ್ಯಕ್ತಪಡಿಸಿ ಅವನನ್ನು ಸಾಂತ್ವನಗೊಳಿಸಬೇಕೆಂಬ ಒಂದೇ ಉದ್ದೇಶದಿಂದ ಅವರು ಆತನ ಬಳಿಗೆ ಬಂದರು.


ಆಗ ಶೂಹ್ಯನಾದ ಬಿಲ್ದದನು ಇಂತೆಂದನು:


ಆಗ ನಾಮಾಥ್ಯನಾದ ಚೋಫರನು ಹೀಗೆಂದ:


ಆಗ ಸರ್ವೇಶ್ವರ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ಆತನಿಗೆ ಸರಿಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಗನು,” ಎಂದು ಹೇಳಿದರು.


ಆತ ವಿಮೋಚಿಸುತ್ತಾನೆ ನಿರ್ದೋಷಿಗಳನು ನಿನ್ನ ಕೈ ಶುದ್ಧವಿರಲಿ ವಿಮೋಚಿಸುವನು ನಿನ್ನನು.


ಆಗ ಯೋಬನು ಸರ್ವೇಶ್ವರಸ್ವಾಮಿಗೆ ಇಂತೆಂದನು:


ಆಗ ಯೋಬನು ಸರ್ವೇಶ್ವರಸ್ವಾಮಿಗೆ ಕೊಟ್ಟ ಉತ್ತರ ಇದು:


ಆದುದರಿಂದ ನಾನು ಹೇಳಿದ್ದೆಲ್ಲಕ್ಕಾಗಿ ವಿಷಾದಿಸುತ್ತೇನೆ ಬೂದಿಯಲು, ಧೂಳಿನಲು ಕುಳಿತು ಪಶ್ಚಾತ್ತಾಪಪಡುತ್ತೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು