Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:4 - ಕನ್ನಡ ಸತ್ಯವೇದವು C.L. Bible (BSI)

4 ಆಶ್ರಯ ಎಂಬುದು ಅವನ ಮಕ್ಕಳಿಗಿಲ್ಲ ನ್ಯಾಯಸ್ಥಾನದಲ್ಲಿ ಗೆಲುವು ಅವರಿಗಿಲ್ಲ ಅವರನ್ನು ಬಿಡಿಸತಕ್ಕವರಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನ ಮಕ್ಕಳು ಆಶ್ರಯವಿಲ್ಲದೆ ನ್ಯಾಯಸ್ಥಾನದಲ್ಲಿ ಸೋತುಹೋಗುವರು. ಅವರನ್ನು ಬಿಡಿಸತಕ್ಕವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನ ಮಕ್ಕಳು ನಿರಾಶ್ರಯರಾಗಿ ನ್ಯಾಯಸ್ಥಾನದಲ್ಲಿ ಸೋತುಹೋಗುವರು. ಅವರನ್ನು ಬಿಡಿಸತಕ್ಕವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವನ ಮಕ್ಕಳಿಗೆ ಸಹಾಯಮಾಡುವಂಥವರು ಇರಲಿಲ್ಲ. ಅವರ ಪರವಾಗಿ ವಾದಿಸಲು ನ್ಯಾಯಾಲಯದಲ್ಲಿ ಒಬ್ಬರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನ ಮಕ್ಕಳು ಭದ್ರತೆಯಿಲ್ಲದವರಾಗುವರು; ಬಿಡಿಸತಕ್ಕವರಿಲ್ಲದೆ ಅವರು ನ್ಯಾಯಸ್ಥಾನದಲ್ಲಿ ಸೋತುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:4
16 ತಿಳಿವುಗಳ ಹೋಲಿಕೆ  

ಭಾಗ್ಯವಂತನು ಅಂಥ ಬಾಣಗಳಿಂದ ಬತ್ತಳಿಕೆ ತುಂಬಿದವನು I ಸೋತುಹೋಗದೆ ನ್ಯಾಯಲಾಯದೊಳೂ ವೈರಿಯೊಡನೆ ವಾದಿಸುವನು II


ದೂರವಿದೆ ದುರುಳರಿಗೆ ಆ ಜೀವೋದ್ಧಾರ I ಅವರಿಗಿದೆ ನಿನ್ನ ನಿಬಂಧನೆಗಳ ತಾತ್ಸಾರ II


ಸಜ್ಜನರನ್ನು ಹಿಂಸಿಸಿ, ಲಂಚಕ್ಕೆ ಕೈ ಒಡ್ಡುವವರೇ, ನ್ಯಾಯಮಂಟಪದಲ್ಲಿ ಬಡವರಿಗೆ ನ್ಯಾಯದೊರಕಿಸದಿರುವವರೇ, ನಿಮ್ಮ ಪಾಪಗಳು ಅಪಾರ! ನಿಮ್ಮ ದ್ರೋಹಗಳು ಬಹಳ! ಇದು ನನಗೆ ಗೊತ್ತು.


ಇಲ್ಲದಿರೆ ಶತ್ರು ತಿಳಿದಾನು ನನಗೆ ರಕ್ಷಕನಿಲ್ಲವೆಂದು I ಝಲ್ಲನೆ ಸೀಳಿಬಿಟ್ಟಾನು ಸಿಂಹದಂತೆ ಮೇಲೆಬಿದ್ದು II


ಅವನಿಗೆ ಮಕ್ಕಳು ಹೆಚ್ಚಿದರೂ ಕತ್ತಿಗೆ ತುತ್ತಾಗುವರು ಅವನ ಸಂತತಿಯವರಿಗೆ ಊಟದ ಕೊರತೆ ತಪ್ಪದು.


ನಾನು ಅಪರಾಧಿಯಲ್ಲವೆಂದು ತಿಳಿದಿದೆಯಲ್ಲವೆ? ನಿನ್ನ ಕೈಯಿಂದ ಬಿಡಿಸಬಲ್ಲವರಾರೂ ಇಲ್ಲವಲ್ಲವೆ?


ಬಹುಶಃ ನಿನ್ನ ಮಕ್ಕಳು ಆತನ ವಿರುದ್ಧ ಪಾಪಮಾಡಿರಬೇಕು ಎಂದೇ ಆತ ಅವರನು ಆ ದ್ರೋಹದ ನಿಮಿತ್ತ ದಂಡಿಸಿರಬೇಕು.


ಆಗ ತಟ್ಟನೆ ಅರಣ್ಯ ಕಡೆಯಿಂದ ಬಿರುಗಾಳಿ ಎದ್ದಿತು; ನಾಲ್ಕು ಕಡೆಯಿಂದಲೂ ಮನೆಗೆ ಬಡಿಯಿತು. ಮನೆ ಕುಸಿದುಬಿತ್ತು. ಯುವಕಯುವತಿಯರೆಲ್ಲ ಸತ್ತುಹೋದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ತಂದಿದ್ದೇನೆ,” ಎಂದು ತಿಳಿಸಿದನು.


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ಅಂಥ ನಗರಕ್ಕೆ ಓಡಿಹೋದವನು ಮೊದಲು ಊರಬಾಗಿಲಲ್ಲೇ ನಿಂತುಕೊಂಡು ಅಲ್ಲಿನ ಹಿರಿಯರಿಗೆ ತನ್ನ ಸಂಗತಿಯನ್ನು ತಿಳಿಯಪಡಿಸಲಿ. ಅವರು ಅವನನ್ನು ಊರೊಳಗೆ ಸೇರಿಸಿಕೊಳ್ಳಲಿ; ವಾಸಕ್ಕೆ ಸ್ಥಳಕೊಡಲಿ.


ಅವನ ಮಕ್ಕಳು ಬಡವರಿಗೆ ಪರಿಹಾರವನು ತೆರುವರು ಅವನ ಕೈಗಳೆ ಅವನಾಸ್ತಿಯನು ಹಿಂತಿರುಗಿಸಬೇಕಾಗುವುದು.


ಜ್ಞಾನವು ಮೂರ್ಖನಿಗೆ ಎಟುಕದಷ್ಟು ಎತ್ತರ; ನ್ಯಾಯಸ್ಥಾನದಲ್ಲಿ ಅವನು ಬಾಯಿಬಿಡಲಾರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು