Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:9 - ಕನ್ನಡ ಸತ್ಯವೇದವು C.L. Bible (BSI)

9 ದೇವರೆಸಗುತ್ತಾನೆ ಅಸಾಧ್ಯ ಅತಿಶಯಗಳನು ಅಸಂಖ್ಯವಾದ ಅದ್ಭುತಕಾರ್ಯಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು ಅಪ್ರಮೇಯ ಮಹಾಕಾರ್ಯಗಳನ್ನೂ, ಅಸಂಖ್ಯಾತವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನು ಅಪ್ರಮೇಯ ಮಹಾಕಾರ್ಯಗಳನ್ನೂ ಅಸಂಖ್ಯವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರ ಅದ್ಭುತಕಾರ್ಯಗಳು ಗ್ರಹಿಸಲಶಕ್ಯ. ಆತನ ಮಹತ್ಕಾರ್ಯಗಳು ಅಸಂಖ್ಯಾತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರು ಸಂಶೋಧನೆ ಮಾಡಲಾಗದಷ್ಟು ಮಹಾಕಾರ್ಯಗಳನ್ನೂ, ಅಸಂಖ್ಯವಾದ ಅದ್ಭುತ ಕೃತ್ಯಗಳನ್ನೂ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:9
18 ತಿಳಿವುಗಳ ಹೋಲಿಕೆ  

ಪ್ರಭು, ಎನ್ನ ದೇವ, ನಿನಗೆ ಸಮಾನತೆ ಎಲ್ಲಿಯದು I ನೀನೆಸಗಿದ ಪವಾಡ ಪ್ರಯೋಜನಗಳೆನಿತು I ಅಗಣಿತವಾದವುಗಳ ವಿವರ ಅಸದಳವಾದುದು II


ಅಪ್ರತಿಮ ಮಹಾಕಾರ್ಯಗಳನ್ನು ಎಸಗಿರುವನು ಅಸಂಖ್ಯ ಅದ್ಭುತಕರ ಪವಾಡಗಳನ್ನು ಮಾಡಿರುವನು.


ಸುತ್ಯರ್ಹನು ಸ್ವಾಮಿದೇವನು, ಇಸ್ರಯೇಲರ ದೇವನು I ಆತನೋರ್ವನೇ ಮಹತ್ಕಾರ್ಯಗಳನು ಎಸಗುವಂತವನು II


ಪ್ರಭು, ನೀನೊಬ್ಬನೇ ದೇವನು I ಅದ್ಭುತಶಾಲಿ, ಮಹೋನ್ನತನು II


ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


ದೇವರಕಂಠ ತನ್ನ ಅದ್ಭುತಕಾರ್ಯಗಳನು ಘೋಷಿಸುತ್ತದೆ ನಮ್ಮಿಂದರಿಯಲಾಗದ ಮಹಾತ್ಕಾರ್ಯಗಳನು ಎಸಗುತ್ತಾನೆ.


ನೀವು ಕೇಳಿಲ್ಲವೇ? ನಿಮಗೆ ತಿಳಿದಿಲ್ಲವೇ? ಸರ್ವೇಶ್ವರ ಅನಂತ ದೇವರಲ್ಲವೇ? ಭೂದಿಗಂತಗಳನ್ನು ಆತ ಸೃಜಿಸಿದನಲ್ಲವೇ? ದಣಿವೆಂಬುದು ಇಲ್ಲ, ಬಳಲಿಕೆ ಎಂಬುದು ಇಲ್ಲ ಆತನಿಗೆ. ಆತನ ದಕ್ಷಸಾಮರ್ಥ್ಯ ಅಗಮ್ಯ ಪರಿಶೋಧನೆಗೆ.


ಎಣಿಕೆಗೆ ಅವುಗಳ ಸಂಖ್ಯೆ ಸಮುದ್ರತೀರದ ಮರಳಿನಂತೆ I ಎಚ್ಚತ್ತು ಎಣಿಸಲೆತ್ನಿಸೆ ನಿನ್ನ ಮುಂದಿರುವೆ ಮುಂಚಿನಂತೆ II


‘ಅಜ್ಞಾನದ ಮಾತುಗಳನ್ನಾಡುವ ನೀನು ಯಾರು?’ ‘ಸತ್ಯಾಲೋಚನೆಗಳನು ಮಂಕುಮಾಡುವ ನೀನಾರು?’ ಈ ನಿಮ್ಮ ನುಡಿಯಂತೆ ಅರ್ಥಹೀನ ಮಾತುಗಳನು ನಾನಾಡಿದೆ ನನ್ನ ಬುದ್ಧಿಗೆಟುಕದ ಪವಾಡಗಳನ್ನು ಟೀಕಿಸಿದೆ.


ನಾನು ತಲೆಯೆತ್ತಿದರೆ ಬೇಟೆಯಾಡುವೆ ನನ್ನನ್ನು ಸಿಂಹದಂತೆ ಮತ್ತೆ ನಿನ್ನ ಶಕ್ತಿ ಸಾಮರ್ಥ್ಯವನ್ನು ನನ್ನ ಮೇಲೆ ಪ್ರಯೋಗಿಸುವೆ.


ಯೋಬನೇ, ಈ ಮಾತುಗಳನು ಕೇಳು ದೇವರ ಅದ್ಭುತಗಳನು ಮೌನದಿಂದ ಧ್ಯಾನಿಸು:


ಮೋಡಗಳ ತೇಲಾಟವನು ಬಲ್ಲೆಯಾ? ಜ್ಞಾನಪೂರ್ಣನಾ ಅದ್ಭುತಕಾರ್ಯಗಳನು ಗ್ರಹಿಸಿರುವೆಯಾ?


ಪ್ರಭು ಮಹಾತ್ಮನು, ಸ್ತುತ್ಯರ್ಹನು I ಆತನ ಮಹಿಮೆ ಅಗಮ್ಯವಾದದು II


ಒಂದೊಂದು ವಸ್ತುವನ್ನೂ ಸಮಯಕ್ಕೆ ತಕ್ಕಂತೆ ಸುಂದರವಾಗಿ ನಿರ್ಮಿಸಿದ್ದಾರೆ ದೇವರು. ಇದಲ್ಲದೆ, ಮನುಷ್ಯನ ಹೃದಯದಲ್ಲಿ ಅಮರತ್ವದ ಪ್ರತಿಯನ್ನು ಮೂಡಿಸಿದ್ದಾರೆ.


“ಇವೆಲ್ಲವನ್ನು ನನ್ನ ಕಣ್ಣುಗಳು ಕಂಡಿವೆ. ಕಿವಿಗಳು ಕೇಳಿ ಗ್ರಹಿಸಿಕೊಂಡಿವೆ.


ಬೇಡವಾದವು ನಿನಗೆ ಯಜ್ಞಾರ್ಪಣೆ, ಬಲಿಕಾಣಿಕೆ I ಬಯಸಿಲ್ಲ ನೀ ಹೋಮವನೆ, ಪರಿಹಾರಕ ಬಲಿಯನೆ I ಶ್ರವಣಶಕ್ತಿಯನು ಅನುಗ್ರಹಿಸಿದೆ ನೀನು ನನಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು