Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:14 - ಕನ್ನಡ ಸತ್ಯವೇದವು C.L. Bible (BSI)

14 ಸಂಕಟದಲ್ಲಿ ಆಗದಾ ನೆಂಟನಿಗೆ ಸರ್ವಶಕ್ತನಲ್ಲಿ ಭಯಭಕ್ತಿ ಇರುವುದುಂಟೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಒಬ್ಬನು ಮನಗುಂದಿ ಸರ್ವಶಕ್ತನಾದ ದೇವರ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ; ಅವನ ಮಿತ್ರನು ಅವನಿಗೆ ದಯೆ ತೋರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಒಬ್ಬನು ಮನಗುಂದಿ ಸರ್ವಶಕ್ತನ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ ಅವನ ವಿುತ್ರನು ಅವನಿಗೆ ದಯೆ ತೋರಿಸತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಕಷ್ಟದಲ್ಲಿರುವವನಿಗೆ ಅವನ ಸ್ನೇಹಿತನು ದಯೆತೋರಬೇಕು; ಒಂದುವೇಳೆ ಅವನು ಸರ್ವಶಕ್ತನಾದ ದೇವರಿಗೆ ವಿಮುಖನಾಗಿದ್ದರೂ ಅವನ ಸ್ನೇಹಿತನು ನಂಬಿಗಸ್ತನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಒಬ್ಬನು ಸರ್ವಶಕ್ತರ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ, ಅವನ ಮಿತ್ರನು ಅವನಿಗೆ ದಯೆ ತೋರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:14
16 ತಿಳಿವುಗಳ ಹೋಲಿಕೆ  

ಮಿತ್ರನ ಪ್ರೀತಿ ನಿರಂತರ; ಕಷ್ಟಕ್ಕಾದವನೆ ಹುಟ್ಟುನಂಟ.


ಒಬ್ಬರ ಭಾರವನ್ನು ಒಬ್ಬರು ಹೊತ್ತುಕೊಳ್ಳಿ. ಹೀಗೆ ಕ್ರಿಸ್ತಯೇಸುವಿನ ನಿಯಮವನ್ನು ನೆರವೇರಿಸುವಿರಿ.


ಒಂದು ಅಂಗಕ್ಕೆ ನೋವಾದರೆ, ಎಲ್ಲಾ ಅಂಗಗಳೂ ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ನಲಿವಾದರೆ, ಮಿಕ್ಕೆಲ್ಲಾ ಅಂಗಗಳು ಅದರೊಡನೆ ಸೇರಿ ನಲಿದಾಡುತ್ತವೆ.


ಸಂತೋಷಪಡುವವರೊಂದಿಗೆ ಸಂತೋಷಪಡಿರಿ; ದುಃಖಿಸುವವರೊಡನೆ ದುಃಖಿಸಿರಿ.


ಆದರೆ ಮತ್ತೊಬ್ಬ ಅಪರಾಧಿ ಅವನನ್ನು ಖಂಡಿಸುತ್ತಾ, “ನಿನಗೆ ದೇವರ ಭಯಬೇಡವೇ? ನೀನು ಸಹ ಇದೇ ಶಿಕ್ಷೆಗೆ ಗುರಿಯಾಗಿರುವೆ;


ಸೆರೆಯಲ್ಲಿರುವವರನ್ನು ಸ್ಮರಿಸಿಕೊಳ್ಳಿ. ಅವರ ಸಂಗಡ ನೀವೂ ಸೆರೆಯಲ್ಲಿರುವಂತೆ ಭಾವಿಸಿಕೊಳ್ಳಿ. ಅನ್ಯಾಯಕ್ಕೆ ಒಳಗಾಗಿರುವವರನ್ನು ಜ್ಞಾಪಕದಲ್ಲಿಟ್ಟುಕೊಳ್ಳಿ. ಅನ್ಯಾಯಕ್ಕೆ ಒಳಗಾಗಬಲ್ಲ ದೇಹವೊಂದು ನಿಮಗೂ ಸಹ ಇದೆಯಲ್ಲವೇ?


ಒಬ್ಬನು ಬಲಹೀನನಾಗಿದ್ದರೆ, ಅವನೊಡನೆ ನಾನೂ ಬಲಹೀನನೇ. ಒಬ್ಬನು ಪಾಪಕ್ಕೆ ಬಲಿಯಾದರೆ ನಾನೂ ತಾಪದಿಂದ ಕುದಿಯುತ್ತೇನೆ.


ಕರುಣೆ ತೋರಿ ಗೆಳೆಯರೇ, ಕರುಣೆ ತೋರಿ ನನಗೆ! ಏಕೆಂದರೆ ದೇವರ ಕೈ ನನ್ನನು ದಂಡಿಸಿದೆ.


ನಾನು ನಿಮಗೆ ಬಾಯಿಮಾತಿನಿಂದ ಧೈರ್ಯ ಹೇಳಬಹುದಿತ್ತು ತುಟಿಮಾತುಗಳಿಂದ ಆದರಿಸಿ ಸಾಂತ್ವನ ನೀಡಬಹುದಿತ್ತು.


ನೀನಾದರೋ ದೇವರ ಭಯಭಕ್ತಿಯನ್ನು ಕೆಡಿಸುತ್ತಿರುವೆ ದೇವರ ಧ್ಯಾನಕ್ಕೆ ಅಡ್ಡಿಬರುತ್ತಿರುವೆ.


ಅದಕ್ಕೆ ಅಬ್ರಹಾಮನು, “ಇಲ್ಲಿಯ ಜನರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದೂ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರು ಎಂದೂ ಭಾವಿಸಿದೆ.


ಔತಣದ ಸರದಿ ತೀರಿದ ಬಳಿಕ, ಯೋಬನು ತನ್ನ ಮಕ್ಕಳು ಒಂದು ವೇಳೆ ಪಾಪಮಾಡಿ ಮನದಲ್ಲೇ ದೇವರನ್ನು ದೂಷಿಸಿರಬಹುದೆಂದುಕೊಂಡು, ಅವರನ್ನು ಕರೆಸಿ ಶುದ್ಧೀಕರಣ ಮಾಡಿಸುತ್ತಿದ್ದನು. ಬೆಳಿಗ್ಗೆ ಎದ್ದು ಅವರೊಬ್ಬೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.


:ಸತ್ಯಾನುಸಾರ ನ್ಯಾಯತೀರಿಸಿರಿ.


ಕಷ್ಟಕಾಲದಲ್ಲಿ ಕಪಟಿಯನ್ನು ನಂಬುವುದು, ಮುರುಕು ಹಲ್ಲನ್ನು ಕುಂಟಕಾಲನ್ನು ನಂಬಿದಂತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು