Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:9 - ಕನ್ನಡ ಸತ್ಯವೇದವು C.L. Bible (BSI)

9 ದೇವರು ನನ್ನನ್ನು ನಸುಕಿಬಿಡಬಾರದೆ? ತನ್ನ ಕೈಯನ್ನು ಚಾಚಿ ಸಂಹರಿಸಿಬಿಡಬಾರದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ನಾಶವಾಗುವುದು ದೇವರಿಗೆ ಮೆಚ್ಚಿಕೆಯಾಗುವುದಾದರೆ, ತನ್ನ ಕೈ ಚಾಚಿ ನನ್ನನ್ನು ಸಂಹರಿಸಿದರೆ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನು ದಯಮಾಡಿ ತನ್ನ ಕೈ ಜಾಡಿಸಿ ನನ್ನನ್ನು ಜಜ್ಜಿ ಸಂಹರಿಸಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನ್ನನ್ನು ಜಜ್ಜಿಹಾಕಲು ದೇವರು ಇಚ್ಫಿಸುವುದಾಗಿದ್ದರೆ, ಆತನು ನನ್ನನ್ನು ಕೊಲ್ಲಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನನ್ನನ್ನು ಜಜ್ಜುವುದು ದೇವರಿಗೆ ಮೆಚ್ಚಿಗೆಯಾದರೆ, ದೇವರು ತಮ್ಮ ಕೈಚಾಚಿ ನನ್ನ ಪ್ರಾಣವನ್ನು ತೆಗೆದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:9
16 ತಿಳಿವುಗಳ ಹೋಲಿಕೆ  

ತರುವಾಯ ತಾನೊಬ್ಬನೇ, ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ದೂರಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. “ಸರ್ವೇಶ್ವರಾ, ನನಗೆ ಸಾಕಾಯಿತು; ನನ್ನ ಪ್ರಾಣವನ್ನು ತೆಗೆದುಬಿಡಿ; ನನ್ನ ಪೂರ್ವಜರಿಗಿಂತ ನಾನು ಉತ್ತಮನಲ್ಲ,” ಎಂದು ದೇವರನ್ನು ಪ್ರಾರ್ಥಿಸಿದನು.


“ಆದುದರಿಂದ ಸರ್ವೇಶ್ವರಾ, ನನ್ನ ಪ್ರಾಣವನ್ನು ಹಿಂತೆಗೆದುಕೊಳ್ಳಿ. ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಮೊರೆಯಿಟ್ಟನು.


ಸೂರ್ಯನು ಏರುತ್ತಿರಲು, ಸರ್ವೇಶ್ವರನ ಚಿತ್ತಾನುಸಾರ ಬಿಸಿಯಾದ ಮೂಡಣ ಗಾಳಿ ಬೀಸಿತು. ಬಿಸಿಲಿನ ತಾಪದಿಂದ ಯೋನನು ಮೂರ್ಛೆಹೋಗುವಂತಾದನು; ಸಾವನ್ನು ಅಪೇಕ್ಷಿಸುತ್ತಾ: “ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಬೇಡಿಕೊಂಡನು.


ಆಂಥ ದಿನಗಳಲ್ಲಿ ಮನುಷ್ಯರು ಮರಣವನ್ನು ಅಪೇಕ್ಷಿಸುವರು. ಆದರೆ ಅದು ಅವರಿಗೆ ಪ್ರಾಪ್ತವಾಗುವುದಿಲ್ಲ. ಸತ್ತರೆ ಸಾಕೆಂದು ಬಯಸುವರು; ಪ್ರಯತ್ನಿಸುವರು. ಆದರೆ ಮೃತ್ಯು ಅವರಿಂದ ದೂರ ಸರಿಯುವುದು.


ಪ್ರಭುವಿನ ಶಿಕ್ಷಾಹಸ್ತ ನನ್ನ ಮೇಲೆ ಭಾರವಾಗಿತ್ತು ಹಗಲಿರುಳು I ಬೇಸಿಗೆಯ ನೀರಿನಂತೆ ಬತ್ತಿಹೋಗಿತ್ತು ನನ್ನ ಶರೀರದ ತಿರುಳು II


ಕರುಣೆ ತೋರಿ ಗೆಳೆಯರೇ, ಕರುಣೆ ತೋರಿ ನನಗೆ! ಏಕೆಂದರೆ ದೇವರ ಕೈ ನನ್ನನು ದಂಡಿಸಿದೆ.


ಆಹಾ! ಬಚ್ಚಿಡಲಾರೆಯಾ ನನ್ನನ್ನು ಪಾತಾಳದೊಳಗೆ? ಅಲ್ಲಿ ಮರೆಮಾಚಿಡಲಾರೆಯಾ ನಿನ್ನ ಕೋಪ ಇಳಿಯುವವರೆಗೆ? ಕಾಲವನ್ನು ಗೊತ್ತುಮಾಡಲಾರೆಯಾ ನನ್ನನು ನೆನೆಯುವುದಕೆ?


ಅಯ್ಯೋ, ನನ್ನ ವಿಜ್ಞಾಪನೆ ನೆರವೇರುವುದಿಲ್ಲವೇಕೆ? ದೇವರು ನನ್ನ ಕೋರಿಕೆಯನ್ನು ಈಡೇರಿಸುವುದಿಲ್ಲವೇಕೆ?


ನಾನು ನಿರ್ದೋಷಿಯೇ ಹೌದು; ಅದರ ಬಗ್ಗೆ ನನಗಿಲ್ಲ ಚಿಂತೆ. ನನ್ನ ಪ್ರಾಣ ಕೂಡ ನನಗೆ ತೃಣವಾಗಿಬಿಟ್ಟಿದೆ.


“ನನ್ನ ಬಾಳೇ ನನಗೆ ಬೇಸರವಾಗಿದೆ ಎದೆಬಿಚ್ಚಿ ಮೊರೆಯಿಡುತ್ತಿರುವೆ ಕಹಿ ಮನದಿಂದ ನುಡಿಯುತ್ತಿರುವೆ.


ದುರ್ಜನರು ನಿರಾಶೆಯಿಂದ ಕಂಗೆಡುವರು ಪ್ರಾಣಬಿಡಬೇಕೆಂಬುದೇ ಅವರ ಆಶೆಯಾಗಿರುವುದು.”


ಕುರುಬನು ತನ್ನ ಗುಡಿಸಲನ್ನು ಕಿತ್ತುಹಾಕುವಂತೆ ನೇಯಿಗೆಯವನು ತನ್ನ ಹಾಸನ್ನು ಸುತ್ತುವಂತೆ ಮಗ್ಗದಿಂದ ಅವನು ದಾರವನ್ನು ಕತ್ತರಿಸುವಂತೆ ಬೆಳಗುಬೈಗಿನೊಳಗೆ ನನ್ನ ಆಯುಷ್ಯವನ್ನು ನೀ ಮುಗಿಸುತ್ತಿರುವೆನೆಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು