Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 8:3 - ಕನ್ನಡ ಸತ್ಯವೇದವು C.L. Bible (BSI)

3 ಅನ್ಯಾಯವಾದ ತೀರ್ಪನು ಕೊಡುತ್ತಾನೆಯೆ ದೇವರು? ಸತ್ಯವನ್ನು ಡೊಂಕುಮಾಡುತ್ತಾನೆಯೆ ಸರ್ವಶಕ್ತನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದೇವರು ಅನ್ಯಾಯವಾದ ತೀರ್ಪನ್ನು ಕೊಡುವನೋ? ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕುಮಾಡುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದೇವರು ಅನ್ಯಾಯವಾದ ತೀರ್ಪನ್ನು ಕೊಡುವನೋ? ಸರ್ವಶಕ್ತನು ನೀತಿಯನ್ನು ಡೊಂಕುಮಾಡುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರು ಅನ್ಯಾಯ ಮಾಡುವನೇ? ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕು ಮಾಡುವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇವರು ತೀರ್ಪಿಗೆ ವಿರುದ್ಧವಾದದ್ದನ್ನು ಮಾಡುತ್ತಾರೋ? ಸರ್ವಶಕ್ತರು ನೀತಿಗೆ ವಿರುದ್ಧವಾದದ್ದನ್ನು ಮಾಡುವರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 8:3
29 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ, ನಿಮಗೆ ಅವರ ಭಯಭಕ್ತಿಯಿರಲಿ. ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಅನ್ಯಾಯ, ಮುಖದಾಕ್ಷಿಣ್ಯ ಹಾಗು ಲಂಚಕೋರತನ ಇಲ್ಲ. ಆದುದರಿಂದ ಜಾಗರೂಕತೆಯಿಂದ ಕೆಲಸಮಾಡಿ,” ಎಂದು ಎಚ್ಚರಿಸಿದನು.


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ಆದಕಾರಣ ಸರ್ವೇಶ್ವರ ಈ ಕೇಡನ್ನು ಸಕಾಲಕ್ಕೆ ನಮ್ಮ ಮೇಲೆ ಬರಮಾಡಿದ್ದಾರೆ. ನಮ್ಮ ದೇವರಾದ ಸರ್ವೇಶ್ವರ ತಾವು ಮಾಡುವ ಸಕಲ ಕಾರ್ಯಗಳಲ್ಲೂ ನ್ಯಾಯಸ್ವರೂಪರು. ನಾವೋ ಅವರ ಮಾತನ್ನು ಕೇಳಲಿಲ್ಲ.


ಅನಂತರ ಬಲಿಪೀಠದಿಂದ ಹೀಗೆ ಕೇಳಿ ಬಂತು : “ಹೌದು ಪ್ರಭುವೇ, ಸರ್ವಶಕ್ತನೇ, ನೀನಿತ್ತ ತೀರ್ಪು ಸತ್ಯ ಹಾಗೂ ನ್ಯಾಯಬದ್ಧವಾದುದೇ.”


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ಆದರೆ ನೀವು ಸರ್ವೇಶ್ವರನ ಕ್ರಮವು ಸರಿಯಿಲ್ಲವೆಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುನೀಡುವೆನು.”


“ಆದರೆ ನನ್ನ ಜನರು ಸರ್ವೇಶ್ವರನ ಕ್ರಮ ಸರಿಯಲ್ಲವೆಂದು ಹೇಳುತ್ತಿದ್ದಾರೆ. ಬದಲಿಗೆ ಅವರ ಕ್ರಮವೇ ಸರಿಯಿಲ್ಲ.


“ಆದರೆ ನೀವು, ‘ಸರ್ವೇಶ್ವರನ ಕ್ರಮ ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೆ? ನಿಮ್ಮ ಕ್ರಮವೇ ಸರಿಯಲ್ಲವಷ್ಟೆ.


ಶಕ್ತಿಸ್ವರೂಪಿಯೇ, ನ್ಯಾಯಪ್ರಿಯ ರಾಜನೇ I ನ್ಯಾಯನೀತಿ, ಯಥಾರ್ಥತೆಗೆ ಸ್ಥಾಪಕ ನೀನೆ I ಇಸ್ರಯೇಲ ವಂಶಕ್ಕಿದನು ಮನದಟ್ಟಾಗಿಸಿದವ ನೀನೆ II


ನೀತಿನ್ಯಾಯ ನಿನ್ನ ಸಿಂಹಾಸನದಸ್ತಿವಾರ I ಪ್ರೀತಿಸತ್ಯತೆ ನಿನ್ನ ಸಾನ್ನಿಧ್ಯ ಪರಿವಾರ II


ಏನು, ನನ್ನ ನಿರ್ಣಯವನ್ನು ನೀನು ಖಂಡಿಸುತ್ತೀಯೋ? ನೀನು ನಿರ್ದೋಷಿಯೆನಿಸಿಕೊಳ್ಳಲು ನನ್ನನ್ನು ದೋಷಿಯನ್ನಾಗಿಸುತ್ತೀಯೋ?


“ಸರ್ವಶಕ್ತನೊಡನೆ ವ್ಯಾಜ್ಯವಾಡುವುದನು ಈಗಲಾದರು ನಿಲ್ಲಿಸುವೆಯಾ? ದೇವರೊಡನೆ ತರ್ಕಮಾಡುವಂಥ ನೀನು ಉತ್ತರಕೊಡುವೆಯಾ?”


ದೇವರು ಪೊಳ್ಳುಮಾತಿಗೆ ಕಿವಿಗೊಡನು ಸರ್ವಶಕ್ತನು ಅದಕ್ಕೆ ಎಂದಿಗೂ ಲಕ್ಷ್ಯಕೊಡನು.


ಇಂತಿದೆ ಯೋಬನ ವಾದ - ‘ನಾನು ಸತ್ಯವಂತ ನನಗೆ ದೇವರಿಂದ ನ್ಯಾಯ ದೊರೆತಿಲ್ಲ.


ಅವನೇ ತನ್ನ ವಿನಾಶವನು ಕಣ್ಣಾರೆ ಕಾಣಲಿ ಅವನೇ ಸರ್ವಶಕ್ತನಾ ರೌದ್ರರಸವನು ಸವಿಯಲಿ.


‘ಈ ಸರ್ವಶಕ್ತ ಎಷ್ಟರವನು : ಆತನ ಸೇವೆ ನಮಗೇಕೆ? ಆತನಿಗೆ ಪ್ರಾರ್ಥನೆಮಾಡಿ ಪ್ರಯೋಜನವೇನು?’ ಎಂದಿದ್ದಾರೆ.


‘ಇದೋ ಹಿಂಸಾಚಾರ’ ಎಂದು ನಾನು ಕೂಗಿಕೊಂಡರೂ ಕೇಳುವವರಿಲ್ಲ ನಾನು ಮೊರೆಯಿಟ್ಟರೂ ನನಗೆ ನ್ಯಾಯ ದೊರಕುವುದಿಲ್ಲ.


ದುರುಳರ ಯೋಜನೆಯನು ನೀನು ಪುರಸ್ಕರಿಸಬಹುದೆ? ನಿನ್ನ ಕೈಕೃತಿಯಾದ ನನ್ನನು ತಿರಸ್ಕರಿಸಿ ಬಾಧಿಸುವುದು ಸರಿಯೆ?


“ಹೌದು, ನೀನು ಹೇಳುವುದು ಸರಿಯೆಂದು ನನಗೆ ಗೊತ್ತು: ನರಮಾನವ ದೇವರ ಮುಂದೆ ಸತ್ಯವಂತನಾಗಿರುವುದೆಂತು?


“ದೇವರ ದೃಷ್ಟಿಯಲ್ಲಿ ಸತ್ಯವಂತನಾಗಿರಲು ಮಾನವನಿಗೆ ಸಾಧ್ಯವೆ? ಸೃಷ್ಟಿಕರ್ತನ ಸನ್ನಿಧಿಯಲ್ಲಿ ಪರಿಶುದ್ಧನಾಗಿರಲು ಅವನಿಂದ ಸಾಧ್ಯವೆ?”


ನನ್ನ ಸೃಷ್ಟಿಕರ್ತನು ಸತ್ಯಸ್ವರೂಪನೆಂದು ತೋರಲು ನನ್ನ ವಾದಗಳನ್ನು ಸವಿಸ್ತಾರಗೊಳಿಸುವೆನು:


ದೇವರಿಗೆ ಮಾರ್ಗತೋರಿಸಬಲ್ಲವನಾರು? ಆತನಿಗೆ ‘ನೀನು ಮಾಡಿರುವುದು ಅನ್ಯಾಯ,’ ಎನ್ನಬಲ್ಲವನಾರು?


ಕಂಡುಹಿಡಿಯಲಾಗದು ಇಂಥ ಸರ್ವಶಕ್ತನನು ನಮ್ಮಿಂದ ಶಕ್ತಿಯಲೂ ಸತ್ಯದಲೂ ಪರಮ ಪರಾಕ್ರಮಿ ಆತ ನ್ಯಾಯಪೂರ್ಣನಾದ ಆತ ದಬ್ಬಾಳಿಕೆ ನಡೆಸುವವನಲ್ಲ ನ್ಯಾಯಕ್ಕಾಗಲೀ ಧರ್ಮಕ್ಕಾಗಲೀ ಆತ ಧಕ್ಕೆ ತರುವವನಲ್ಲ.


ನನಗೆ ಅನ್ಯಾಯವಾಗಿರುವುದು ದೇವರಿಂದಲೇ ನನ್ನ ಸುತ್ತಲು ಬಲೆಯೊಡ್ಡಿರುವವನು ಆತನೇ! ನಾನು ಹೇಳುವ ಈ ಮಾತು ತಿಳಿದಿರಲಿ ನಿಮಗೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು