Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:24 - ಕನ್ನಡ ಸತ್ಯವೇದವು C.L. Bible (BSI)

24 ದೇಶವು ದುರುಳರ ಕೈವಶವಾಗಿದ್ದರೂ ನ್ಯಾಯಾಧೀಶರ ಮುಖಕ್ಕೆ ಮುಸುಕುಹಾಕುತ್ತಾನೆ. ಇದನ್ನು ಮಾಡುವವರು ದೇವರಲ್ಲದೆ ಮತ್ತೆ ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಭೂಲೋಕವು ದುಷ್ಟರ ಕೈ ಸೇರಿದೆ; ಲೋಕದ ನ್ಯಾಯಾಧಿಪತಿಗಳ ಮುಖಗಳಿಗೆ ಮುಸುಕು ಹಾಕಿದ್ದಾನೆ. ಇದನ್ನು ಮಾಡಿದವನು ಆತನಲ್ಲದೆ ಮತ್ತೆ ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಭೂಲೋಕವು ದುಷ್ಟರ ಕೈ ಸೇರಿದೆ; ಲೋಕದ ನ್ಯಾಯಾಧಿಪತಿಗಳ ಮುಖಗಳಿಗೆ ಮುಸುಕು ಹಾಕಿದ್ದಾನೆ. ಇದನ್ನು ಮಾಡಿದವನು ಆತನಲ್ಲದೆ ಮತ್ತೆ ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ದುಷ್ಟನು ಭೂಮಿಯನ್ನು ಆಕ್ರಮಿಸಿಕೊಂಡಾಗ, ದೇವರು ಅದನ್ನು ನ್ಯಾಯಾಧಿಪತಿಗಳಿಗೆ ಮರೆಮಾಡುವನೇ? ಇದು ಸತ್ಯವಾಗಿದ್ದರೆ, ಇದನ್ನು ದೇವರಲ್ಲದೆ ಇನ್ಯಾರು ಮಾಡಿದರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಲೋಕವು ಕೆಟ್ಟವರ ಕೈವಶವಾಗಿದೆ; ನ್ಯಾಯಾಧಿಪತಿಗಳ ಮುಖಕ್ಕೆ ಮುಸುಕುಹಾಕಲಾಗಿದೆ; ಇದನ್ನು ಅನುಮತಿಸಿದವರು ದೇವರಲ್ಲದೆ ಮತ್ತೆ ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:24
24 ತಿಳಿವುಗಳ ಹೋಲಿಕೆ  

ದುರುಳರ ಯೋಜನೆಯನು ನೀನು ಪುರಸ್ಕರಿಸಬಹುದೆ? ನಿನ್ನ ಕೈಕೃತಿಯಾದ ನನ್ನನು ತಿರಸ್ಕರಿಸಿ ಬಾಧಿಸುವುದು ಸರಿಯೆ?


ಇದು ಕಾವಲುಗಾರ ದೂತನ ತೀರ್ಮಾನ; ಹಾಗು ದೇವರ ತೀರ್ಪು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೂ ಅಧಿಕಾರವಿದೆ. ಅದರ ಆಳ್ವಿಕೆಯನ್ನು ಅವರು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಕನಿಷ್ಠರನ್ನೂ ಆ ಪದವಿಗೆ ನೇಮಿಸುತ್ತಾರೆ. ಇದು ಎಲ್ಲಾ ಜನರಿಗೆ ತಿಳಿದಿರಬೇಕೆಂಬುದೇ ಈ ತೀರ್ಮಾನ,' ಎಂದು ಸಾರಿದನು.


ನಾಡಿನಲ್ಲಿ ಮಳೆಯಿಲ್ಲದೆ ಭೂಮಿ ಬಿರುಕುಬಿಟ್ಟಿದೆ ನೇಗಿಲಯೋಗಿ ನಿರಾಶೆಗೊಂಡು ಮೋರೆ ಮುಚ್ಚಿಕೊಳ್ಳುತ್ತಾನೆ.


ಇಳೆಯ ಮಾನವರಿಂದ ಪ್ರಭು, ಎನ್ನನು ಕೈಯಾರೆ ಕಾಪಾಡು I ಜಗವೇ ತಮ್ಮ ಪಾಲಿನ ಪರಿಮಿತಿ ಎನ್ನುವವರಿಂದ ಕಾದಿಡು II ಅವರಾದರೊ ನಿನ್ನ ನಿಧಿಯಿಂದ ಉದರ ತುಂಬಿಸಿಕೊಳ್ಳಲಿ I ಮಕ್ಕಳು, ಮರಿಮಕ್ಕಳಿಗೆ ಯಥೇಚ್ಛವಾಗಿ ಉಳಿಸಿಕೊಳ್ಳಲಿ II


ಆಗ ಬೂಜ್‍ನವನಾದ ಬರಕೇಲನ ಮಗ ಎಲೀಹುವನಿಗೆ ಸಿಟ್ಟೇರಿತು. ಇವನು ರಾಮ್‍ಗೋತ್ರಕ್ಕೆ ಸೇರಿದವನು. ಯೋಬನು ತಾನು ದೇವರಿಗಿಂತ ನ್ಯಾಯವಂತನೆಂದು ಎಣಿಸಿಕೊಂಡ ಕಾರಣ ಎಲೀಹುವನಿಗೆ ಸಿಟ್ಟುಹತ್ತಿತ್ತು.


ಈ ಮಾತು ಅಬದ್ಧವೆಂದು ಯಾರು ಸ್ಥಾಪಿಸಬಲ್ಲರು? ನಾನು ಸುಳ್ಳುಗಾರನೆಂದು ನಿಮ್ಮಲ್ಲಿ ಯಾರು ತೋರಿಸಬಲ್ಲನು?”


ದೇವರು ನನ್ನನ್ನೊಪ್ಪಿಸಿಬಿಟ್ಟಿದ್ದಾನೆ ತುಂಟರಿಗೆ ನನ್ನನ್ನು ಎಸೆದುಬಿಟ್ಟಿದ್ದಾನೆ ದುಷ್ಟರ ಕೈಗೆ.


ಮಂತ್ರಿಗಳನು ಬರಿಬತ್ತಲೆಯಾಗಿ ನಡೆಸುತ್ತಾನೆ ನ್ಯಾಯಾಧಿಪತಿಗಳನು ಮೂರ್ಖರನ್ನಾಗಿಸುತ್ತಾನೆ.


ಅರಸನು ಅರಮನೆಯ ತೋಟದಿಂದ, ತಾನು ದ್ರಾಕ್ಷಾರಸ ಸೇವಿಸುತ್ತಿದ್ದ ಕೊಠಡಿಗೆ ಹಿಂದಿರುಗಿಬಂದಾಗ ಎಸ್ತೇರಳು ಒರಗಿಕೊಂಡಿದ್ದ ಸುಖಾಸನದತ್ತ ಹಾಮಾನನು ಬಾಗಿರುವುದನ್ನು ಕಂಡು, “ಇದೇನು? ಇವನು ನನ್ನ ಮುಂದೆಯೇ ನನ್ನ ಅರಮನೆಯಲ್ಲಿಯೇ ರಾಣಿಯ ಮೇಲೆ ಬಲಾತ್ಕಾರ ಮಾಡಲು ಹೊರಟಿರುವನೆ?” ಎಂದನು. ಅರಸನ ಬಾಯಿಂದ ಈ ಮಾತುಗಳು ಹೊರಬಿದ್ದದ್ದೇ ತಡ ಸೇವಕರು ಹಾಮಾನನ ಮುಖದ ಮೇಲೆ ಮುಸುಕನ್ನು ಎಳೆದರು.


ಮೊರ್ದೆಕೈ, ಪುನಃ ಅರಮನೆಯ ಬಾಗಿಲಿಗೆ ಬಂದನು. ಹಾಮಾನನಾದರೋ ವ್ಯಸನಕ್ರಾಂತನಾಗಿ ಮುಖ ಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಧಾವಿಸಿದನು.


ಅರಸನು ತನ್ನ ಮುಖ ಮುಚ್ಚಿಕೊಂಡು, “ಮಗ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ಮಗನೇ,” ಎಂದು ಬಹಳವಾಗಿ ಗೋಳಾಡಿದನು.‍


ದಾವೀದನು, ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೇಮರಗಳ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಏರಿದರು.


‘ಇದೋ ಹಿಂಸಾಚಾರ’ ಎಂದು ನಾನು ಕೂಗಿಕೊಂಡರೂ ಕೇಳುವವರಿಲ್ಲ ನಾನು ಮೊರೆಯಿಟ್ಟರೂ ನನಗೆ ನ್ಯಾಯ ದೊರಕುವುದಿಲ್ಲ.


ನಿನ್ನನಿಸಿಕೆಯಂತೆ ಬಲಿಷ್ಠನಿಗೆ ನಾಡಿನೊಡೆತನ ಘನವಂತನಿಗೇ ಅಲ್ಲಿ ಮನೆತನ


ನಗರಗಳಲ್ಲಿ ನರಳುವವರಿದ್ದಾರೆ ಗಾಯಗೊಂಡವರು ಮೊರೆಯಿಡುತ್ತಾರೆ ಆದರೆ ದೇವರು ಕಿವಿಗೊಡದಿದ್ದಾನೆ.


“ನೀವು ನಿಮ್ಮ ಮಾತುಗಳಿಂದ ಪ್ರಭುವನ್ನು ಬೇಸರಗೊಳಿಸಿದ್ದೀರಿ. ‘ಯಾವ ವಿಷಯದಲ್ಲಿ ಅವರನ್ನು ಬೇಸರಗೊಳಿಸಿದ್ದೇವೆ?’ ಎನ್ನುತ್ತೀರೋ? ‘ಕೆಡುಕರೆಲ್ಲರೂ ದೇವರ ದೃಷ್ಟಿಯಲ್ಲಿ ಒಳ್ಳೆಯವರು. ಅವರೇ ಆತನಿಗೆ ಬೇಕಾದವರು’ ಎಂದು ಹೇಳುವುದರಿಂದ: ‘ನ್ಯಾಯ ತೀರಿಸುವ ದೇವರೆಲ್ಲಿ?’ ಎಂದು ಕೇಳುವುದರಿಂದ.”


ಇದಾದ ಮೇಲೆ ಈ ಜಗದಲ್ಲಿ ಎಲ್ಲಾ ತರದ ಚಿತ್ರಹಿಂಸೆಗಳನ್ನು ಕುರಿತು ಯೋಚಿಸಿದೆ. ಅಯ್ಯೋ, ಹಿಂಸೆಗೆ ಈಡಾದವರ ಕಣ್ಣೀರನ್ನು ಕುರಿತು ಏನೆಂದು ಹೇಳಲಿ? ಅವರನ್ನು ಸಂತೈಸುವವರು ಯಾರೂ ಇಲ್ಲ. ಹಿಂಸಾಚಾರಿಗಳು ಶಕ್ತಿಸಾಮರ್ಥ್ಯ ಉಳ್ಳವರು. ಸಂತೈಸುವವರಾದರೋ ಒಬ್ಬರೂ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು