Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:12 - ಕನ್ನಡ ಸತ್ಯವೇದವು C.L. Bible (BSI)

12 ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದ್ರಾಕ್ಷಾಲತೆಯು ಒಣಗಿದೆ ಮತ್ತು ಅಂಜೂರದ ಗಿಡವು ಬಾಡಿಹೋಗಿದೆ; ದಾಳಿಂಬೆ, ಖರ್ಜೂರ ಮತ್ತು ಸೇಬು ಮರಗಳು ಹಾಗು ಹೊಲದ ಸಕಲ ವನವೃಕ್ಷಗಳು ಒಣಗಿ ಹೋಗಿವೆ. ಮನುಷ್ಯರು ಸೊರಗಿ ಸಂತೋಷವಿಲ್ಲದೆ ಕಳೆಗುಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದ್ರಾಕ್ಷಾಲತೆಯು ಆಶಾಭಂಗಪಟ್ಟಿದೆ; ಅಂಜೂರದ ಗಿಡವು ಕ್ಷೀಣವಾಗಿದೆ; ದಾಳಿಂಬ, ಖರ್ಜೂರ, ಸೇಬು, ಅಂತು ಸಕಲ ವನವೃಕ್ಷಗಳು ಒಣಗಿವೆ, ಆನಂದವು ತಗ್ಗಿ ನರಜನ್ಮದವರಿಗೆ ತಪ್ಪಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದ್ರಾಕ್ಷಿಬಳ್ಳಿಗಳು ಒಣಗಿಹೋಗಿವೆ ಮತ್ತು ಅಂಜೂರದ ಮರವು ಸಾಯುತ್ತಲಿದೆ. ದಾಳಿಂಬದ ಮರ, ಖರ್ಜೂರದ ಮರ, ಸೇಬಿನ ಮರ, ತೋಟದಲ್ಲಿರುವ ಎಲ್ಲಾ ಮರಗಳು ಒಣಗಿಹೋಗಿವೆ. ಜನರಲ್ಲಿರುವ ಸಂತೋಷವೂ ಬತ್ತಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿ ಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:12
19 ತಿಳಿವುಗಳ ಹೋಲಿಕೆ  

ಮದ್ಯಪಾನವಿಲ್ಲವೆಂದು ಬೀದಿಗಳಲಿ ಬೊಬ್ಬೆ ಇಡುತಿಹರೆಲ್ಲ, ಅಸ್ತಮಿಸಿಹೋಯಿತು ಜಗದ ಉಲ್ಲಾಸವೆಲ್ಲ, ಸೆರೆಯಾಗಿ ತೊಲಗಿತು ಅದರ ಸಡಗರವೆಲ್ಲ.


ತೊಲಗಿದೆ ಹೊಲಗಳಿಂದ ಹರ್ಷಾನಂದ, ಇಲ್ಲವಾಗಿದೆ ತೋಟಗಳಲಿ ಜಯಕಾರದ ನಾದ, ದ್ರಾಕ್ಷಾರಸವನು ತೆಗೆವವರಿಲ್ಲ ಅರಮನೆಗಳಿಂದ, ಎಂತಲೆ ನಿಂತುಹೋಗಿಹುದಲ್ಲಿ ಸುಗ್ಗಿಯ ಗೀತ.


ದವಸಧಾನ್ಯಗಳ ವಿನಾಶವನ್ನು ಕಣ್ಣಾರೆ ಕಾಣುತ್ತಿದ್ದೇವಲ್ಲವೆ? ದೇವಾಲಯದ ಹರ್ಷ ಉತ್ಸವಗಳು ನಿಂತುಹೋಗಿವೆ.


ಹೊಲಗದ್ದೆಗಳು ಹಾಳಾಗಿವೆ; ಧರೆ ದುಃಖಿಸುತ್ತಿದೆ; ಬಿತ್ತಿದ ದವಸಧಾನ್ಯ ಮಣ್ಣುಪಾಲಾಗಿದೆ; ದ್ರಾಕ್ಷಿಹಣ್ಣು ಒಣಗಿಹೋಗಿದೆ; ಎಣ್ಣೆ ಮರಗಳು ಬಾಡಿಹೋಗಿವೆ.


ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನಂತಿಹನು. ಕುಳಿತು ಸಂತೋಷಗೊಂಡೆ ನಾನದರ ನೆರಳಿನೊಳು ಸಿಹಿ ನನ್ನ ನಾಲಿಗೆಗೆ ಅದರ ಫಲವು.


ಇನ್ನು ಮುಂದಕ್ಕೂ ಕಣಜದಲ್ಲಿ ಕಾಳಿಲ್ಲದೆ ಇರುವುದೋ? ದ್ರಾಕ್ಷೆ, ಅಂಜೂರ, ದಾಳಿಂಬೆ, ಓಲಿವ್ ಗಿಡಗಳು ಫಲಿಸದೆಹೋಗುವವೋ? ಇಲ್ಲ. ಈ ದಿನ ಮೊದಲ್ಗೊಂಡು ನಾನು ನಿಮ್ಮನ್ನು ಆಶೀರ್ವದಿಸುವೆನು.”


ಹರ್ಷಾನಂದಗಳು ತೋಟಗಳಿಂದಲೂ ಮೋವಾಬಿನ ಇಡೀ ನಾಡಿನಿಂದಲೂ ತೊಲಗಿವೆ. ತೊಟ್ಟಿಗಳಲ್ಲಿ ದ್ರಾಕ್ಷಾರಸ ಇಲ್ಲದಂತಾಗಿದೆ. ಯಾರೂ ತೊಟ್ಟಿಯಲ್ಲಿ ತುಳಿಯುತ್ತಾ ಆನಂದ ಧ್ವನಿಗೈಯುತ್ತಿಲ್ಲ. ಕೇಳಿಸುವಾ ಧ್ವನಿ ಆನಂದ ಧ್ವನಿ ಅಲ್ಲ.


‘ಅಯ್ಯೋ, ಸೂರೆಹೋದೆವು, ತೀವ್ರ ನಾಶವಾದೆವು!’ ಎಂಬ ಕೂಗಾಟ ಕೇಳಿಬರುತ್ತಿದೆ ಹೊರೊನಯಿಮಿನಿಂದ.


ವೃದ್ಧಿಗೊಳಿಸಿರುವೆ ನೀನು ಆ ದೇಶವನು ಅಧಿಕರಿಸಿರುವೆ ಅದರ ತೋಷವನು ಸುಗ್ಗಿಕಾಲದಲಿ ಹಿಗ್ಗುವವರಂತೆ ಕೊಳ್ಳೆ ಹಂಚಿಕೊಳ್ಳುವವರಂತೆ ಹರ್ಷಿಸುವರವರು ನಿನ್ನ ಮುಂದೆ.


ನಿನ್ನ ಉದ್ಯಾನದಲ್ಲಿ ಬೆಳೆದಿವೆ ದಾಳಿಂಬೆಯಂಥ ಉತ್ತಮ ಫಲವೃಕ್ಷಗಳು ಜಟಮಾಂಸಿ, ಕರ್ಪೂರ, ಜಟಮಾಂಸಿ, ಕುಂಕುಮ ಕೇಸರಿಗಳು.


ಬೆಳೆಯುವರು ಸಜ್ಜನರು ಖರ್ಜೂರದ ವೃಕ್ಷದಂತೆ I ವೃದ್ಧಿಯಾಗುವರು ಲೆಬನೋನಿನ ದೇವದಾರಿನಂತೆ II


ಧಾನ್ಯದ್ರಾಕ್ಷಿಗಳ ಸುಗ್ಗಿಸಂತಸಕ್ಕಿಂತಲು I ಮಿಗಿಲಾನಂದ ತುಂಬಿಸಿರುವೆ ನೀ ಎನ್ನೆದೆಯೊಳು II


ಎಷ್ಕೋಲ್ ಎಂಬ ತಗ್ಗಿಗೆ ಬಂದು ಅಲ್ಲಿ ದ್ರಾಕ್ಷಿ ಹಣ್ಣಿನ ಗೊಂಚಲಿದ್ದ ಒಂದು ಕೊಂಬೆಯನ್ನು ಕೊಯ್ದರು. ಅದನ್ನು ಅಡ್ಡದಂಡಿಗೆಯಲ್ಲಿ ಇಬ್ಬರು ಹೊತ್ತು ತಂದರು. ಕೆಲವು ದಾಳಿಂಬೆ ಹಣ್ಣುಗಳನ್ನೂ ಅಂಜೂರದ ಹಣ್ಣುಗಳನ್ನು ತಂದರು.


ಬಾಡಿಹೋಗಿದೆ ದ್ರಾಕ್ಷಾಲತೆ, ದುಬಾರಿಯಾಗಿದೆ ದ್ರಾಕ್ಷಾರಸ, ನರಳುತಿದೆ ನಲಿಯುತ್ತಿದ್ದ ಜನಸಮೂಹ.


ಆದರೆ ಮಾರನೆಯ ದಿನ ಮುಂಜಾನೆ ದೇವರ ಆಜ್ಞಾನುಸಾರ ಆ ಗಿಡಕ್ಕೆ ಹುಳುವೊಂದು ಹೊಡೆಯಿತು. ಆಗ ಗಿಡವು ಒಣಗಿಹೋಯಿತು.


“ನಿಮ್ಮ ಭೂಮಿಯ ಬೆಳೆ ಹುಳುಹುಪ್ಪಟೆಗಳಿಂದ ನಾಶವಾಗದಂತೆ ನೋಡಿಕೊಳ್ಳುವೆನು. ನಿಮ್ಮ ತೋಟದಲ್ಲಿ ದ್ರಾಕ್ಷಿಹಣ್ಣು ಉದುರಿಹೋಗದಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು