Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:15 - ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರಸ್ವಾಮಿಯ ದಿನ ಸಮೀಪಿಸಿದೆ. ಆ ದಿನ ಸರ್ವಶಕ್ತನಿಂದ ವಿನಾಶವನ್ನು ತರಲಿದೆ; ಎಂಥಾ ಭಯಂಕರ ದಿನವದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನು ಬರುವ ದಿನವು ಸಮೀಪಿಸಿತು. ಅದು ಸರ್ವಶಕ್ತನಾದ ಯೆಹೋವನಿಂದ ನಾಶವಾಗುವ ದಿನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನ ದಿನವು ಸಮೀಪಿಸಿತು; ಅಯ್ಯೋ, ದಿನವೇ! ಅದು ಸರ್ವಶಕ್ತನಿಂದ ನಾಶನದಿನವಾಗಿಯೇ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಶೋಕಿಸಿರಿ. ಯಾಕೆಂದರೆ ಯೆಹೋವನ ಮಹಾದಿನವು ಹತ್ತಿರ ಬಂತು. ಆ ಸಮಯದಲ್ಲಿ ಸರ್ವಶಕ್ತನಾದ ದೇವರ ಸನ್ನಿಧಾನದಿಂದ ದಂಡನೆಯು ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆ ದಿನ ಭಯಂಕರವಾದದ್ದು! ಏಕೆಂದರೆ ಯೆಹೋವ ದೇವರ ದಿವಸವು ಸಮೀಪವಾಗಿದೆ. ಸರ್ವಶಕ್ತರ ಕಡೆಯಿಂದ ಇದು ನಾಶವಾದಂತೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:15
18 ತಿಳಿವುಗಳ ಹೋಲಿಕೆ  

ಹೌದು, ಭಯಂಕರವಾದ ದಿನ ಬರಲಿದೆ, ಅದಕ್ಕಿರದು ಎಣೆ! ಅದು ಇಕ್ಕಟ್ಟಿನ ದಿನ, ಆದರೂ ಅದರಿಂದ ಯಕೋಬ್ಯರಿಗಿದೆ ಬಿಡುಗಡೆ.”


ಸರ್ವೇಶ್ವರಸ್ವಾಮಿಯ ಭಯಂಕರ ಮಹಾದಿನದ ಮುಂಚೆ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ರಕ್ತಗೆಂಪಾಗುವನು.


ಸರ್ವೇಶ್ವರ ಗರ್ಜಿಸಿ ತಮ್ಮ ಸೈನ್ಯಕ್ಕೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ದೊಡ್ಡದು. ಅವರ ಆಜ್ಞೆಯನ್ನು ಪಾಲಿಸುವವನು ಬಲಾಢ್ಯನು. ಸರ್ವೇಶ್ವರಸ್ವಾಮಿಯ ದಿನ ಮಹತ್ತರ; ಅತಿ ಭಯಂಕರ; ಅದರೆದುರಿಗೆ ನಿಲ್ಲಲು ಯಾರಿಗಿದೆ ಧೈರ್ಯ?


ಏಕೆಂದರೆ, ಅವರ ಕೋಪಾಗ್ನಿಯ ಘೋರ ದಿನವು ಬಂದಿದೆ. ಅದರ ಮುಂದೆ ನಿಲ್ಲುವುದಕ್ಕೆ ಯಾರು ತಾನೇ ಶಕ್ತರು?” ಎಂದು ಹಲುಬಿದರು.


ಸಹೋದರರೇ, ದಂಡನಾತೀರ್ಪಿಗೆ ಗುರಿ ಆಗದಂತೆ ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿ. ಇಗೋ, ನ್ಯಾಯಾಧೀಶನು ಬಾಗಿಲ ಬಳಿಯಲ್ಲೇ ನಿಂತಿದ್ದಾನೆ.


ಅಂಥವನ ಕಂಡು ಪ್ರಭು ನಸುನಗುತಿಹನು I ಅವನಿಗೊದಗಲಿಹ ಗತಿಯನು ಕಾಣುತಿಹನು II


ಆದರೆ ಈ ದಿನ, ಯುದ್ಧದ ದಿನ ಸೇನಾಧೀಶ್ವರನೆಂಬ ಸರ್ವೇಶ್ವರ ಸ್ವಾಮಿ ಶತ್ರುಗಳಿಗೆ ಮುಯ್ಯಿ ತೀರಿಸುವ ದಿನ ಇದು ದಂಡನೆಯ ದಿನ. ಇಂದು ಖಡ್ಗವು ಕಬಳಿಸುವುದು ತೃಪ್ತಿಯಾಗಿ ರಕ್ತವನ್ನು ಹೀರುವುದು ಸಂತೃಪ್ತಿಯಾಗಿ ಉತ್ತರದ ಯೂಪ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿರುವನು ಸರ್ವಶಕ್ತನೆಂಬ ಸರ್ವೇಶ್ವರ.


ಹೌದು, ಸಮೀಪಿಸಿತು ಸರ್ವೇಶ್ವರನ ದಿನ, ಕಾರ್ಮುಗಿಲ ದಿನ ಅದು ರಾಷ್ಟ್ರಗಳಿಗೆ ನ್ಯಾಯತೀರಿಸತಕ್ಕ ಕಾಲ.


“ಇಗೋ, ನ್ಯಾಯತೀರ್ಪಿನ ಕಣಿವೆಯಲ್ಲಿ ತಂಡೋಪತಂಡವಾದ ಜನಸ್ತೋಮ! ತೀರ್ಪಿನ ಕಣಿವೆಯಲ್ಲಿರುವವರಿಗೆ ಸರ್ವೇಶ್ವರನ ದಿನ ಸನ್ನಿಹಿತ!


“ಸಮಸ್ತ ರಾಷ್ಟ್ರಗಳಿಗೂ ಸರ್ವೇಶ್ವರನ ದಿನ ಸಮೀಪಿಸಿದೆ. ನೀನು ಮಾಡಿದ್ದನ್ನೆ ನಿನಗೂ ಮಾಡಲಾಗುವುದು. ನಿನ್ನ ದುಷ್ಕೃತ್ಯವು ನಿನ್ನ ತಲೆಗೇ ಬರುವುದು.


“ಸ್ವಾಮಿ ಸರ್ವೇಶ್ವರ ನ್ಯಾಯತೀರ್ಪು ನೀಡುವ ದಿನ ಸಮೀಪಿಸಿದೆ; ಆದುದರಿಂದ ಅವರ ಸನ್ನಿಧಿಯಲ್ಲಿ ಮೌನ ತಾಳಿರಿ. ಸರ್ವೇಶ್ವರ, ಯಜ್ಞದ ಔತಣವನ್ನು ಸಿದ್ಧಗೊಳಿಸಿದ್ದಾರೆ. ಅತಿಥಿಗಳನ್ನು ಪವಿತ್ರೀಕರಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು