Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:19 - ಕನ್ನಡ ಸತ್ಯವೇದವು C.L. Bible (BSI)

19 ಸರ್ವೇಶ್ವರಾ, ನಿನಗೆ ಮೊರೆಯಿಡುತ್ತೇನೆ. ಹುಲ್ಲುಗಾವಲನ್ನು ಕಾಳ್ಗಿಚ್ಚು ದಹಿಸಿಬಿಟ್ಟಿದೆ; ವನವೃಕ್ಷಗಳೆಲ್ಲ ಬೆಂಕಿಪಾಲಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; ಕಾಡಿನ ಹುಲ್ಲುಗಾವಲನ್ನು ಬೆಂಕಿಯು ನುಂಗಿಬಿಟ್ಟಿದೆ, ವನವೃಕ್ಷಗಳನ್ನೆಲ್ಲಾ ಜ್ವಾಲೆಯು ಸುಟ್ಟುಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋವಾ, ನಿನಗೆ ಮೊರೆಯಿಡುತ್ತೇನೆ; ಕಾಡಿನ ಹುಲ್ಗಾವಲನ್ನು ಕಿಚ್ಚು ನುಂಗಿಬಿಟ್ಟಿದೆಯಲ್ಲಾ; ವನವೃಕ್ಷಗಳನ್ನೆಲ್ಲಾ ಬೇಗೆಯು ಸುಟ್ಟುಹಾಕಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನೇ, ಸಹಾಯಕ್ಕಾಗಿ ನಾನು ನಿನಗೆ ಮೊರೆಯಿಡುತ್ತಿದ್ದೇನೆ. ನಮ್ಮ ಹಸಿರು ಹೊಲಗದ್ದೆಗಳು ಬೆಂಕಿಯಿಂದ ಮರುಭೂಮಿಯಾದವು. ಹೊಲದಲ್ಲಿದ್ದ ಮರಗಳನ್ನೆಲ್ಲಾ ಬೆಂಕಿಯು ದಹಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರೇ, ನಿಮಗೆ ಮೊರೆಯಿಡುತ್ತೇನೆ. ಬೆಂಕಿಯು ಹುಲ್ಲುಗಾವಲನ್ನು ದಹಿಸಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:19
14 ತಿಳಿವುಗಳ ಹೋಲಿಕೆ  

ನಾನು : ಪರ್ವತಗಳಿಗಾಗಿ ಅತ್ತು ಗೋಳಾಡುವೆನು ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು ಅವು ಸುಟ್ಟುಹೋಗಿವೆ, ಯಾರೂ ಅಲ್ಲಿ ಹಾದುಹೋಗರು. ದನಕರುಗಳ ಸದ್ದೂ ಕಿವಿಗೆ ಬೀಳದು ತೊಲಗಿಹೋಗಿವೆ ಮೃಗಪಕ್ಷಿಗಳೂ !


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಒಡೆಯರಾದ ಸರ್ವೇಶ್ವರ ನನಗೆ ಇನ್ನೊಂದು ದರ್ಶನವನ್ನು ತೋರಿಸಿದರು. ಅವರು ತನ್ನ ಜನರನ್ನು ದಂಡಿಸುವುದಕ್ಕಾಗಿ ಬೆಂಕಿಯನ್ನು ಬರಮಾಡಿದರು. ಅದು ಆಳವಾದ ಮಹಾಸಾಗರವನ್ನೂ ಇಡೀ ನಾಡನ್ನೂ ಕಬಳಿಸುವುದರಲ್ಲಿತ್ತು.


ನಾನಾದರೋ ಸರ್ವೇಶ್ವರನ ಕಡೆಗೆ ಕಣ್ಣೆತ್ತಿ ನೋಡುವೆನು. ನನ್ನ ಉದ್ಧಾರಕ ದೇವರನ್ನು ನಿರೀಕ್ಷಿಸಿಕೊಂಡಿರುವೆನು. ನನ್ನ ದೇವರು ನನಗೆ ಕಿವಿಗೊಡುವರು.


ಹೀಗಿರುವಲ್ಲಿ ದೇವರು, ತಾವಾಗಿ ಆಯ್ಕೆಮಾಡಿಕೊಂಡ ಜನರು ಹಗಲುರಾತ್ರಿ ತಮಗೆ ಮೊರೆಯಿಡುವಾಗ ನ್ಯಾಯ ತೀರಿಸದೆ ಹೋಗುವರೆ? ತಡಮಾಡಿಯಾರೆ?


ಅದರ ಮುಂದೆ ಕಬಳಿಸುವ ಬೆಂಕಿ; ಅದರ ಹಿಂದೆ ಧಗಧಗಿಸುವ ಜ್ವಾಲೆ. ಅದು ಬರುವ ಮುನ್ನ ನಾಡು ಏದೆನ್ ಉದ್ಯಾನವನ; ಅದು ದಾಟಿದ ನಂತರ ಸುಡುಗಾಡು. ಅದರ ಆಪತ್ತಿನಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II


ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು:


ನಾಡಿನಲ್ಲಿ ಮಳೆಯಿಲ್ಲದೆ ಭೂಮಿ ಬಿರುಕುಬಿಟ್ಟಿದೆ ನೇಗಿಲಯೋಗಿ ನಿರಾಶೆಗೊಂಡು ಮೋರೆ ಮುಚ್ಚಿಕೊಳ್ಳುತ್ತಾನೆ.


ಆಮೋಸನ ಪ್ರಕಟನೆ: ಗರ್ಜಿಸುತಿಹನು ಸರ್ವೇಶ್ವರ ಸಿಯೋನಿನಿಂದ ಧ್ವನಿಗೈಯುತಿಹನು ಜೆರುಸಲೇಮಿನಿಂದ; ಬಾಡಿಹೋಗುತ್ತಿವೆ ಕುರುಬರಾ ಹುಲ್ಲುಗಾವಲುಗಳು ಒಣಗಿಹೋಗುತ್ತಿವೆ ಕಾರ್ಮೆಲ್ ಗುಡ್ಡದ ನೆತ್ತಿಯ ಗಿಡಗಳು.


ಕಲ್ಲುಮರಗಳಿಗೆ ಆರಾಧನೆಮಾಡಿ ವ್ಯಭಿಚಾರಿಣಿಯಾದಳು. ಇದೆಲ್ಲ ಲಘುವೆಂದು ಭಾವಿಸಿ ತನ್ನ ವೇಶ್ಯಾ ವರ್ತನೆಯಿಂದ ನಾಡನ್ನು ಅಪವಿತ್ರಪಡಿಸಿದಳು.


ಇಂಥವುಗಳಿಗಾಗಿ ನಾನು ಅವರನ್ನು ಹಿಂಸಿಸಬಾರದೆ? ಇಂಥ ಜನಾಂಗದ ಮೇಲೆ ಸೇಡನ್ನು ತೀರಿಸಿಕೊಳ್ಳದಿರುವೆನೆ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು