Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:5 - ಕನ್ನಡ ಸತ್ಯವೇದವು C.L. Bible (BSI)

5 ಬೆಟ್ಟಗಳ ತುತ್ತತುದಿಯಲ್ಲಿ ಹಾರಾಡುತ್ತವೆ; ರಥಗಳಂತೆ ಚೀತ್ಕಾರಮಾಡುತ್ತವೆ; ಕೂಳೆಸುಡುವ ಬೆಂಕಿಯಂತೆ ಚಟಪಟ ಮಾಡುತ್ತವೆ; ಸಮರಕ್ಕೆ ಸಿದ್ಧವಾದ ಶೂರರ ಸೈನ್ಯದಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಬೆಟ್ಟಗಳ ತುದಿಯಲ್ಲಿ ಅವು ಹಾರಾಡುತ್ತ ರಥಗಳಂತೆ ಚೀತ್ಕಾರ ಮಾಡುತ್ತವೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಪರ್ವತಾಗ್ರಗಳಲ್ಲಿ ಅವು ಹಾರಾಡುವ ಶಬ್ದವು ರಥಗಳ ಚೀತ್ಕಾರದಂತೆಯೂ ಕೂಳೆಯನ್ನು ನುಂಗುವ ಬೆಂಕಿಯ ಚಟಪಟ ಧ್ವನಿಯ ಹಾಗೂ ಕೇಳಿಸುತ್ತದೆ; ಅವು ವ್ಯೂಹಕಟ್ಟಿಕೊಂಡ ಪ್ರಬಲವಾದ ಸೈನ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕಿವಿಗೊಟ್ಟು ಕೇಳಿರಿ. ಪರ್ವತಗಳ ಮೇಲೆ ಓಡುವ ರಥಗಳ ಶಬ್ದದಂತೆ ಅವರ ಶಬ್ದವು ಕೇಳುತ್ತದೆ. ಬೆಂಕಿಯ ಜ್ವಾಲೆಗಳು ಹೊಟ್ಟನ್ನು ಸುಡುವಂತೆ ಅವರ ಶಬ್ದವು ಕೇಳುತ್ತದೆ. ಬಲಿಷ್ಠರಾದ ಅವರು ಯುದ್ಧಕ್ಕೆ ಸಿದ್ಧರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ರಥಗಳ ಶಬ್ದದಂತೆ ಅವು ಪರ್ವತಗಳ ತುದಿಗಳಲ್ಲಿ ಹಾರುತ್ತವೆ. ಸಿಡಿಯುವ ಬೆಂಕಿಯು ದಹಿಸುವ ಕೋಲಿನಂತೆ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:5
9 ತಿಳಿವುಗಳ ಹೋಲಿಕೆ  

ಅವುಗಳ ಮೈಚಿಪ್ಪು ಕವಚದಂತಿತ್ತು. ರೆಕ್ಕೆ ಬಡಿಯುವ ಶಬ್ದವು ಸಮರಕ್ಕೆ ಧಾವಿಸುವ ಹಲವಾರು ರಥಾಶ್ವಗಳ ಶಬ್ದವನ್ನು ಹೋಲುತ್ತಿತ್ತು.


ಹೀಗಿರಲು, ಒಣಗಿದ ಕಳೆಯನ್ನು ಅಗ್ನಿಜ್ವಾಲೆ ಕಬಳಿಸುವಂತೆ, ಒಣಹುಲ್ಲು ಬೆಂಕಿಯಲ್ಲಿ ಬೂದಿಯಾಗುವಂತೆ, ಅವರ ಬೇರು ಕೊಳೆತುಹೋಗುವುದು. ಅವರ ಹೂ ಧೂಳಿನಂತೆ ತೂರಿಹೋಗುವುದು. ಏಕೆಂದರೆ, ಅವರು ಸೇನಾಧೀಶ್ವರಸ್ವಾಮಿಯ ಉಪದೇಶವನ್ನು ನಿರಾಕರಿಸಿದ್ದಾರೆ. ಇಸ್ರಯೇಲಿನ ಪರಮಪಾವನ ಸ್ವಾಮಿಯ ವಾಕ್ಯವನ್ನು ಅಸಡ್ಡೆಮಾಡಿದ್ದಾರೆ.


ಆಗ ಸರ್ವೇಶ್ವರ ತಮ್ಮ ಗಂಭೀರವಾದ ವಾಣಿಯನ್ನು ಕೇಳುವಂತೆ ಮಾಡುವರು. ತೀವ್ರಕೋಪ, ದಹಿಸುವ ಅಗ್ನಿಜ್ವಾಲೆ, ಸಿಡಿಯುವ ಮೋಡ, ಚಂಡಮಾರುತ, ಕಲ್ಮಳೆ - ಇವುಗಳಿಂದ ತಮ್ಮ ಶಿಕ್ಷಾಹಸ್ತವನ್ನು ಪ್ರದರ್ಶಿಸುವರು.


ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿಕಾಳನ್ನು ಮಾತ್ರ ಕಣಜದಲ್ಲಿ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಎಚ್ಚರಿಸಿದನು.


ಮಿಡತೆಯ ಹಾಗೆ ಅದು ಜಿಗಿಯಮಾಡಿದವನು ನೀನೋ? ಅದರ ಕೆನೆತದ ಪ್ರಭಾವ ಭೀತಿಯನು ತರುತ್ತದೆ, ನೋಡು!


ಆ ಕ್ರೂರಿಗಳು, ಆ ನಿಷ್ಕರುಣಿಗಳು ಹಿಡಿದುಕೊಂಡಿರುವರು ಬಿಲ್ಲನ್ನೂ ಈಟಿಯನ್ನೂ. ಅವರ ಧ್ವನಿ ಮೊರೆಯುತ್ತದೆ ಸಮುದ್ರದಂತೆ ಕುದುರೆ ಸವಾರಿ ತೊಡಗಲಿದೆ. ಬಾಬಿಲೋನ್ ನಗರಿಯೇ, ಕೇಳು, ಆ ಸೈನ್ಯ ಶೂರವೀರರಿಂದ ಕೂಡಿದೆ. ಅದು ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ. ಸರ್ವೇಶ್ವರನಾದ ನನ್ನ ನುಡಿ ಇದು.


ಆ ಜನರು ಈಜಿಪ್ಟ್ ದೇಶದಲ್ಲೆಲ್ಲಾ ಸುತ್ತಿ, ಹುಲ್ಲು ಸಿಕ್ಕದೆ ಕೂಳೆಕಿತ್ತು ಕೂಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು