Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:14 - ಕನ್ನಡ ಸತ್ಯವೇದವು C.L. Bible (BSI)

14 “ಇಗೋ, ನ್ಯಾಯತೀರ್ಪಿನ ಕಣಿವೆಯಲ್ಲಿ ತಂಡೋಪತಂಡವಾದ ಜನಸ್ತೋಮ! ತೀರ್ಪಿನ ಕಣಿವೆಯಲ್ಲಿರುವವರಿಗೆ ಸರ್ವೇಶ್ವರನ ದಿನ ಸನ್ನಿಹಿತ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಹಾ ತೀರ್ಪಿನ ತಗ್ಗಿನಲ್ಲಿ ಗುಂಪುಗುಂಪುಗಳಾಗಿ ಜನರಿದ್ದಾರೆ. ಏಕೆಂದರೆ ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಹಾ, ತೀರ್ಪಿನ ತಗ್ಗಿನಲ್ಲಿ ಗುಂಪು ಗುಂಪು! ತೀರ್ಪಿನ ತಗ್ಗಿನಲ್ಲಿ ಯೆಹೋವನ ದಿನವು ಸಮೀಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ತೀರ್ಮಾನದ ತಗ್ಗಿನಲ್ಲಿ ಅನೇಕರು ಸೇರಿದ್ದಾರೆ. ಯೆಹೋವನ ವಿಶೇಷ ದಿನವು ತೀರ್ಮಾನದ ತಗ್ಗಿನ ಹತ್ತಿರ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ತೀರ್ಮಾನದ ಕಣಿವೆಯಲ್ಲಿ ಗುಂಪು ಗುಂಪುಗಳಾಗಿ ಜನರಿದ್ದಾರೆ! ಏಕೆಂದರೆ ಯೆಹೋವ ದೇವರ ದಿವಸವು ನಿರ್ಣಯದ ತಗ್ಗಿನಲ್ಲಿ ಸಮೀಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:14
17 ತಿಳಿವುಗಳ ಹೋಲಿಕೆ  

ನಿಮಗೆ ಸುನ್ನತಿಯಾಗಬೇಕೆಂದು ಬೋಧಿಸುವವರ ವಿಷಯದಲ್ಲಿ ಜಾಗರೂಕರಾಗಿರಿ. ಅವರು ದುಷ್ಕರ್ಮಿಗಳು, ಶ್ವಾನಗಳಿಗೆ ಸಮಾನರು.


ಎಲ್ಲಾ ರಾಷ್ಟ್ರಗಳನ್ನು ನ್ಯಾಯತೀರ್ಪಿನ ಜೊಸೆಫಾತ್ ಕಣಿವೆಗೆ ಬರಮಾಡುವೆನು. ನನ್ನ ಪ್ರಜೆಯೂ ಸ್ವಜನರೂ ಆದ ಇಸ್ರಯೇಲರಿಗೆ ಅವರು ಮಾಡಿದ ಹಿಂಸೆಗಾಗಿ ನ್ಯಾಯಕೇಳುವೆನು. ಅವರು ನನ್ನ ಪ್ರಜೆಯನ್ನು ದೇಶವಿದೇಶಗಳಿಗೆ ಚದರಿಸಿದ್ದಾರೆ. ನನ್ನ ನಾಡನ್ನು ಹಂಚಿಕೊಂಡಿದ್ದಾರೆ.


ಈಗಿರುವ ಭೂಮ್ಯಾಕಾಶಗಳನ್ನು ಅದೇ ವಾಕ್ಯದ ಬಲದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲಾಗಿದೆ. ದುರ್ಜನರು ವಿನಾಶವಾಗಬೇಕಾದ ನ್ಯಾಯತೀರ್ಪಿನ ದಿನದವರೆಗೂ ಇವನ್ನು ಉಳಿಸಲಾಗಿದೆ.


ಸಿಯೋನಿನಲ್ಲಿ ಕೊಂಬೂದಿರಿ; ನನ್ನ ಪರಿಶುದ್ಧಪರ್ವತದಲ್ಲಿ ಎಚ್ಚರಿಕೆಯ ವಾಣಿ ಮೊಳಗಲಿ; ಸಮಸ್ತ ದೇಶನಿವಾಸಿಗಳು ಹೆದರಿ ನಡುಗಲಿ; ಸರ್ವೇಶ್ವರಸ್ವಾಮಿಯ ದಿನ ಬರಲಿದೆ. ಸನ್ನಿಹಿತವಾಗಿದೆ.


ಸರ್ವೇಶ್ವರಸ್ವಾಮಿಯ ದಿನ ಸಮೀಪಿಸಿದೆ. ಆ ದಿನ ಸರ್ವಶಕ್ತನಿಂದ ವಿನಾಶವನ್ನು ತರಲಿದೆ; ಎಂಥಾ ಭಯಂಕರ ದಿನವದು!


ಅಂಥವನ ಕಂಡು ಪ್ರಭು ನಸುನಗುತಿಹನು I ಅವನಿಗೊದಗಲಿಹ ಗತಿಯನು ಕಾಣುತಿಹನು II


ಇಗೋ, ಬೆಟ್ಟಗುಡ್ಡಗಳಿಂದ ಕೇಳಿಬರುತ್ತಿದೆ ಜನಜಂಗುಳಿಯಂಥ ಗದ್ದಲ; ಒಟ್ಟಿಗೆ ಕೂಡಿಕೊಂಡ ದೇಶವಿದೇಶಗಳ ಆರ್ಭಟ; ಸಜ್ಜಾಗಿ ನಿಂತಿದೆ ಸೇನಾಧೀಶ್ವರ ಸರ್ವೇಶ್ವರನ ಸೈನ್ಯ.


‘ದಿವ್ಯದರ್ಶನದ ಕಣಿವೆ’ಯ ಕುರಿತ ದೈವೋಕ್ತಿ : ಏನಾಯಿತು? ಜನರೆಲ್ಲರೂ ಮನೆಮಾಳಿಗೆಗಳನ್ನು ಏರಿ ಸಡಗರದಿಂದ ಇರುವುದೇಕೆ?


ಸರ್ವೇಶ್ವರ ಗರ್ಜಿಸಿ ತಮ್ಮ ಸೈನ್ಯಕ್ಕೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ದೊಡ್ಡದು. ಅವರ ಆಜ್ಞೆಯನ್ನು ಪಾಲಿಸುವವನು ಬಲಾಢ್ಯನು. ಸರ್ವೇಶ್ವರಸ್ವಾಮಿಯ ದಿನ ಮಹತ್ತರ; ಅತಿ ಭಯಂಕರ; ಅದರೆದುರಿಗೆ ನಿಲ್ಲಲು ಯಾರಿಗಿದೆ ಧೈರ್ಯ?


“ರಾಷ್ಟ್ರಗಳು ಎಚ್ಚೆತ್ತು ಸರ್ವೇಶ್ವರಸ್ವಾಮಿಯ ನ್ಯಾಯತೀರ್ಪಿನ ಕಣಿವೆಗೆ ಇಳಿಯಲಿ. ಸುತ್ತಮುತ್ತ ನೆರೆದಿರುವ ರಾಷ್ಟ್ರಗಳಿಗೆ ನ್ಯಾಯತೀರಿಸಲು ಅಲ್ಲಿ ನಾನು ಆಸೀನನಾಗಿರುವೆನು.


ಸರ್ವೇಶ್ವರಸ್ವಾಮಿಯ ಮಹಾದಿನ ಹತ್ತಿರವಾಯಿತು; ಸಮೀಪಿಸಿತು. ಅದು ಬಹು ತ್ವರೆಯಾಗಿ ಬರುತ್ತಿದೆ; ಅದು ಕಠೋರವಾದ ದಿನ, ಆ ದಿನದ ಸುದ್ದಿ ಕಹಿಯಾದುದು, ಎಂಥಾ ಶೂರರನ್ನೂ ಕೂಡ ಘೋರವಾಗಿ ಗೋಳಾಡಿಸುವಂಥದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು