Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:19 - ಕನ್ನಡ ಸತ್ಯವೇದವು C.L. Bible (BSI)

19 “ಈಜಿಪ್ಟ್ ಪಾಳುಬೀಳುವುದು, ಎದೋಮ್ ಬೆಂಗಾಡಾಗುವುದು. ಕಾರಣ, ಈ ಎರಡು ಪಟ್ಟಣದವರು ಜುದೇಯ ನಾಡಿನ ಮೇಲೆ ಧಾಳಿಮಾಡಿದ್ದಾರೆ. ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಐಗುಪ್ತ್ಯವು ಹಾಳಾಗುವುದು, ಎದೋಮ್, ಹಾಳಾದ ಬೆಂಗಾಡಾಗುವುದು, ಏಕೆಂದರೆ ಅವರು ಯೆಹೂದ್ಯರನ್ನು ಹಿಂಸಿಸಿ, ಅವರ ದೇಶದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಐಗುಪ್ತ್ಯರೂ ಎದೋಮ್ಯರೂ ಯೆಹೂದ್ಯರನ್ನು ಹಿಂಸಿಸಿ ಅವರ ದೇಶದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸಿದ್ದರಿಂದ ಐಗುಪ್ತವು ಹಾಳುಬೀಳುವದು, ಎದೋಮು ಬೆಗ್ಗಾಡಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಈಜಿಪ್ಟ್ ಬರಿದಾಗುವದು. ಎದೋಮು ಬೆಂಗಾಡಾಗುವದು. ಯಾಕೆಂದರೆ ಅವರು ಯೆಹೂದದ ಜನರೊಂದಿಗೆ ಕ್ರೂರ ರೀತಿಯಲ್ಲಿ ವರ್ತಿಸಿದರು. ಅವರ ದೇಶಗಳಲ್ಲಿ ನಿರಪರಾಧಿಗಳನ್ನು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಈಜಿಪ್ಟ್ ಹಾಳಾಗುವುದು. ಎದೋಮು ಹಾಳಾದ ಮರುಭೂಮಿಯಾಗುವುದು. ಏಕೆಂದರೆ ಅವರು ಯೆಹೂದದ ಜನರನ್ನು ಬಲಾತ್ಕಾರ ಮಾಡಿ, ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:19
19 ತಿಳಿವುಗಳ ಹೋಲಿಕೆ  

‘ನಮ್ಮ ಪ್ರಾಣವನ್ನು ಹಿಂಡಿದ ದೋಷ ಬಾಬಿಲೋನಿಗೆ ತಟ್ಟಲಿ’ ಎನ್ನುತ್ತದೆ ಸಿಯೋನ್. ‘ನಮ್ಮ ರಕ್ತವನ್ನು ಸುರಿಸಿದ ಅಪರಾಧ ಅದರ ಕಸ್ದೀಯರಿಗೆ ಬಡಿಯಲಿ!’ ಎನ್ನುತ್ತದೆ ಜೆರುಸಲೇಮ್.


ನ್ಯಾಯವಾದುದ್ದನ್ನೇ ಮಾಡುವ ದೇವರು ನಿಮ್ಮನ್ನು ಹಿಂಸಿಸುವವರಿಗೆ ಪ್ರತಿಹಿಂಸೆಯನ್ನೂ ಮತ್ತು ಹಿಂಸೆಯನ್ನು ಸಹಿಸುತ್ತಿರುವ ನಿಮಗೆ, ನಮ್ಮೊಡನೆ ಉಪಶಮನವನ್ನೂ ದಯಪಾಲಿಸುವರು.


ಕರೆತರುವೆನವರನು ಈಜಿಪ್ಟ್, ಅಸ್ಸೀರಿಯ ನಾಡುಗಳಿಂದ ಗಿಲ್ಯಾದ್, ಲೆಬೊನೇನ್‍ಗಳಲ್ಲವರು ಬಂದು ಸೇರುವುದರಿಂದ ತುಂಬಿತುಳುಕುವುವು ಆ ನಾಡುಗಳು ಜನಸ್ತೋಮದಿಂದ.


ಓಬದ್ಯನು ಕಂಡ ದೈವದರ್ಶನ: ಎದೋಮ್ ನಾಡಿನ ವಿಷಯವಾಗಿ ಸ್ವಾಮಿ ಸರ್ವೇಶ್ವರ ಇಂತೆನ್ನುತ್ತಾರೆ: “ಹೊರಡಿರಿ, ಎದೋಮಿನ ಮೇಲೆ ಯುದ್ಧಮಾಡಲು ತೆರಳೋಣ” ಹೀಗೆಂದು ತಮ್ಮ ದೂತನ ಮುಖಾಂತರ ಸರ್ವೇಶ್ವರ ರಾಷ್ಟ್ರಗಳಿಗೆ ಹೇಳಿಕಳುಹಿಸಿದ್ದಾರೆ. ಅವರಿಂದ ಬಂದ ಈ ಸಮಾಚಾರವನ್ನು ನಾವು ಕೇಳಿದ್ದೇವೆ.


‘ಊಚ’ ಮತ್ತು ‘ಎದೋಮ್’ ನಾರೀಮಣಿಗಳೇ, ಸಂತೋಷಿಸಿ ಉಲ್ಲಾಸಿಸುತ್ತಿರುವಿರಿ ಅಲ್ಲವೇ? ಆದರೆ ಖಂಡಿತ ಬರುವುದು ಕಹಿಪಾನದ ಪಾತ್ರೆ ನಿಮ್ಮ ಪಾಲಿಗೆ ಅಮಲೇರಿ ಬೆತ್ತಲೆಯಾಗುವ ಗತಿ ಬಂದೇಬರುವುದು ನಿಮಗೆ!


“ಎದೋಮಿಗೆ ವಿಪತ್ತುಗಳು ಬಂದೊದಗುವುವು. ಅದನ್ನು ನೋಡುವವರು ಬೆರಗುಗೊಳ್ಳುವರು. ಹಾದುಹೋಗುವವರೆಲ್ಲರು ಸಿಳ್ಳುಹಾಕಿ ಪರಿಹಾಸ್ಯ ಮಾಡುವರು.


ಆತ ಬತ್ತಿಸುವನು ಈಜಿಪ್ಟಿನ ಕೊಲ್ಲಿಯನ್ನು, ಒಣಗಿಸುವನು ಬಿಸಿಗಾಳಿಯಿಂದ ಯೂಫ್ರೆಟಿಸ್ ನದಿಯನ್ನು, ಸೀಳುವನದನ್ನು ಏಳು ತೊರೆಗಳನ್ನಾಗಿ. ಈ ಪರಿ ದಾಟುವರು ಜನರು ಕೆರ ಮೆಟ್ಟಿದವರಾಗಿ.


ನೆನೆಸಿಕೊ ಪ್ರಭು, ಜೆರುಸಲೇಮಿನ ನಾಶನದಿನ ಅವರಾಡಿದ್ದನು: I “ಕೆಡವಿ ನೆಲಕೆ, ಬುಡಸಹಿತ ಕೆಡವಿ” ಎಂದಾ ಅಧಮ ಎದೋಮ್ಯರನು II


ಒಟ್ಟಿಗೆ ಎರಗುವರು ಫಿಲಿಷ್ಟಿಯರ ಮೇಲೆ ಪಶ್ಚಿಮದಲ್ಲಿ; ಜೊತೆಯಾಗಿ ಸೂರೆಮಾಡುವರು ಜನರನ್ನು ಪೂರ್ವದಲ್ಲಿ; ಗೆಲ್ಲುವರು ಎದೋಮ್ ಮೊವಾಬ್ ನಾಡುಗಳನ್ನು; ಅಧೀನವಾಗಿಸುವರು ಅಮೋನ್ಯ ಜನರನ್ನು.


ನೀನು ಜನರ ರಕ್ತವನ್ನು ಸುರಿಸಿರುವೆ. ನಾಡುಗಳನ್ನೂ ನಗರಗಳನ್ನೂ ಅವುಗಳ ನಿವಾಸಿಗಳನ್ನೂ ಹಿಂಸಿಸಿರುವೆ. ಲೆಬನೋನ್ ಅರಣ್ಯಗಳನ್ನೂ ಕಡಿದುಹಾಕಿರುವೆ. ಈಗ ನಿನ್ನನ್ನೇ ಕಡಿದುಹಾಕಲಾಗುವುದು. ಅದರ ಪ್ರಾಣಿಪಕ್ಷಿಗಳನ್ನು ನಾಶಮಾಡಿರುವೆ. ಈಗ ಅವು ನಿನಗೆ ಭಯಾನಕವಾಗಿರುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು