Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:5 - ಕನ್ನಡ ಸತ್ಯವೇದವು C.L. Bible (BSI)

5 ನನ್ನ ಬೆಳ್ಳಿಬಂಗಾರಗಳನ್ನು ಅತ್ಯಮೂಲ್ಯವಾದ ಬೊಕ್ಕಸಗಳನ್ನು ದೋಚಿಕೊಂಡು ನಿಮ್ಮ ದೇವಾಲಯಗಳಿಗೆ ಕೊಂಡೊಯ್ದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ಬೆಳ್ಳಿ ಬಂಗಾರಗಳನ್ನು ದೋಚಿಕೊಂಡು, ನನ್ನ ಅಮೂಲ್ಯವಾದ ವಸ್ತ್ರಗಳನ್ನು ನಿಮ್ಮ ದೇವಾಲಯಗಳಿಗೆ ಕೊಂಡೊಯ್ದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನ್ನ ಬೆಳ್ಳಿಬಂಗಾರಗಳನ್ನು ಕಸುಕೊಂಡಿದ್ದೀರಿ, ನನ್ನ ಒಳ್ಳೊಳ್ಳೆಯ ಪ್ರಿಯವಸ್ತುಗಳನ್ನು ನಿಮ್ಮ ಸೌಧಗಳಿಗೆ ಸೂರೆಮಾಡಿಕೊಂಡು ಹೋಗಿದ್ದೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀವು ನನ್ನ ಬೆಳ್ಳಿಬಂಗಾರವನ್ನು ಕದ್ದುಕೊಂಡು ಹೋದಿರಿ. ನನ್ನ ಅಮೂಲ್ಯವಾದ ಸಂಪತ್ತನ್ನು ಕೊಂಡು ಹೋಗಿ ನಿಮ್ಮ ಪೂಜಾಸ್ಥಳಗಳಲ್ಲಿ ಇಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ, ನನ್ನ ಅತ್ಯುತ್ತಮ ಸಂಪತ್ತನ್ನೂ ನಿಮ್ಮ ದೇವಸ್ಥಾನಗಳಿಗೆ ತೆಗೆದುಕೊಂಡು ಹೋಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:5
15 ತಿಳಿವುಗಳ ಹೋಲಿಕೆ  

ಇದಲ್ಲದೆ, ಸರ್ವೇಶ್ವರ ಮುಂತಿಳಿಸಿದ ಪ್ರಕಾರ, ಅವನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ದ್ರವ್ಯವನ್ನೆಲ್ಲಾ ದೋಚಿಕೊಂಡು ಹೋದನು. ಇಸ್ರಯೇಲರ ಅರಸನಾದ ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಆಭರಣಗಳನ್ನು ಮುರಿದುಬಿಟ್ಟನು.


ಇದಲ್ಲದೆ ಆಹಾಜನು ಸರ್ವೇಶ್ವರನ ಆಲಯದಲ್ಲೂ ಅರಮನೆಯ ಭಂಡಾರದಲ್ಲೂ ಇದ್ದ ಬೆಳ್ಳಿ ಬಂಗಾರವನ್ನು ತೆಗೆದುಕೊಂಡು ಅಸ್ಸೀರಿಯಾದ ಅರಸನಿಗೆ ಕಪ್ಪವಾಗಿ ಕಳುಹಿಸಿದನು.


ಜುದೇಯದ ಅರಸ ಯೆಹೋವಾಷನು ಇದನ್ನು ಕೇಳಿ, ತಾನು ಮತ್ತು ತನ್ನ ಪೂರ್ವಿಕರಾದ ಯೆಹೋಷಾಫಾಟ್, ಯೆಹೋರಾಮ್, ಅಹಜ್ಯಾ ಎಂಬ ಯೆಹೂದರಾಜರು ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳನ್ನು ಹಾಗು ಸರ್ವೇಶ್ವರನ ಆಲಯದ ಮತ್ತು ಅರಮನೆ ಭಂಡಾರಗಳಲ್ಲಿ ಇದ್ದ ಬಂಗಾರದ ವಸ್ತುಗಳನ್ನು ಸಿರಿಯಾದವರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಜೆರುಸಲೇಮನ್ನು ಬಿಟ್ಟುಹೋದನು.


ಕುಲದೇವರಿಗೆ ಬದಲಾಗಿ ದುರ್ಗ ದೇವರನ್ನು ಘನಪಡಿಸುವನು. ಪೂರ್ವಜರಿಗೆ ತಿಳಿಯದ ದೇವರನ್ನು ಬೆಳ್ಳಿಬಂಗಾರದಿಂದಲೂ ರತ್ನಗಳಿಂದಲೂ ಅಮೂಲ್ಯ ಕೊಡುಗೆಗಳಿಂದಲೂ ಗೌರವಿಸುವನು.


ಸರ್ವೇಶ್ವರನು ಬಾಬಿಲೋನನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಅದನ್ನು ಮೇದ್ಯರ ಅರಸರು ನಾಶಮಾಡುವಂತೆ ಅವರನ್ನು ಪ್ರೇರೇಪಿಸಿದ್ದಾರೆ. ಆ ನಾಶವು, ಸರ್ವೇಶ್ವರನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ ಆಗಿದೆ. ‘ಮೇದ್ಯರೇ, ಬಾಣಗಳನ್ನು ಮಸೆಯಿರಿ, ಯುದ್ಧಸನ್ನದ್ಧರಾಗಿರಿ;


“ಇಗೋ, ಬಾಬಿಲೋನಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಸರ್ವೇಶ್ವರನು ತನ್ನ ಆಲಯವನ್ನುನಾಶಮಾಡಿದವರಿಗೆ ಮುಯ್ಯಿತೀರಿಸಿದ್ದಾರೆ ಎಂಬ ಸಮಾಚಾರವನ್ನು ಸಿಯೋನಿನಲ್ಲಿ ಸಾರಲು ಧಾವಿಸುತ್ತಿದ್ದಾರೆ ಆ ಜನ.


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ಬರಲಿರುವ ಆ ಕಾಲದಲ್ಲಿ ಜನರು, ‘ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವ ಪದ್ಧತಿಯನ್ನು ಬಿಟ್ಟುಬಿಡುವರು.


ಆದಕಾರಣ ನೀನು ಈ ದೈವೋಕ್ತಿಯನ್ನು ಅವರಿಗೆ ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜನರೇ, ನೋಡಿ: ನಾನು ನಿಮ್ಮ ಗೋರಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಯೇಲ್ ನಾಡಿಗೆ ಸೇರಮಾಡುವೆನು.


“ಆದರೆ ತಪ್ಪಿಸಿಕೊಂಡವರು ಸಿಯೋನ್ ಪರ್ವತದ ಮೇಲೆ ಇರುವರು. ಅದು ಪುಣ್ಯಕ್ಷೇತ್ರ ಎನಿಸಿಕೊಳ್ಳುವುದು; ಯಕೋಬನ ವಂಶಜರು ತಮ್ಮ ಸ್ವತ್ತನ್ನು ಮರಳಿ ಅನುಭವಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು