Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:34 - ಕನ್ನಡ ಸತ್ಯವೇದವು C.L. Bible (BSI)

34 ಅದನ್ನು ನಾನು ಕಣ್ಣಾರೆ ನೋಡಿದ್ದೇನೆ. ಆದುದರಿಂದ ಅವರೇ ದೇವರ ಪುತ್ರನೆಂದು ಸಾಕ್ಷಿ ನೀಡುತ್ತಿದ್ದೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನಾನು ಅದನ್ನು ನೋಡಿದ್ದೇನೆ ಮತ್ತು ಈತನೇ ದೇವಕುಮಾರನೆಂದು ಸಾಕ್ಷಿ ಕೊಟ್ಟಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನಾನು ಅದನ್ನು ನೋಡಿ ಈತನೇ ದೇವಕುಮಾರನೆಂದು ಸಾಕ್ಷಿಕೊಟ್ಟಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದ್ದರಿಂದ ಆತನೇ (ಯೇಸುವೇ) ದೇವರ ಮಗನೆಂದು ನಾನು ಜನರಿಗೆ ತಿಳಿಸುವೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಈಗ ನಾನು ಕಂಡು, ಇವರೇ ದೇವರ ಪುತ್ರರು ಎಂದು ಸಾಕ್ಷಿ ನೀಡುತ್ತಿದ್ದೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತನ್ನಾ ಜುವಾಂವಾನ್, “ಮಿಯಾ ತೆ ಬಗಟ್ಲೊ ಅನಿ ಮಿಯಾ ತುಮ್ಕಾ ಸಾಂಗ್ತಾ ತೊಚ್ ದೆವಾಚೊ ಲೆಕ್” ಮಟ್ಲ್ಯಾನ್ ಅನಿ ಸಾಕ್ಷಿ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:34
42 ತಿಳಿವುಗಳ ಹೋಲಿಕೆ  

ಕೇಳಿರೀ ದೈವಾಜ್ಞೆಯನು: ಆತನು ಎನಗಿಂತೆದನು: I “ಈ ದಿನ ನಾನಿನ್ನ ಹಡೆದಿಹೆನು: ನೀನೆನಗೆ ಮಗನು II


ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.


ಆಗ ಶೋಧಕನು ಬಂದು, “ನೀನು ದೇವರ ಪುತ್ರನೆಂಬುದು ಸತ್ಯವಾದರೆ, ಈ ಕಲ್ಲುಗಳು ರೊಟ್ಟಿಗಳಾಗಲೆಂದು ಆಜ್ಞೆಮಾಡು,” ಎಂದನು.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


“ಥುವತೈರದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಪ್ರಜ್ವಲಿಸುವ ಬೆಂಕಿಯ ಕೆಂಡದಂಥ ಕಣ್ಣುಗಳುಳ್ಳವನೂ ತಾಮ್ರದಂತಿರುವ ಪಾದಗಳುಳ್ಳವನೂ ಆದ ದೇವಪುತ್ರನ ಸಂದೇಶವಿದು:


ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.


ತಮ್ಮ ಏಕೈಕ ಪುತ್ರನ ಮುಖಾಂತರ ನಾವು ಸಜ್ಜೀವವನ್ನು ಪಡೆಯುವಂತೆ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ನಮ್ಮ ಮೇಲೆ ದೇವರಿಗಿರುವ ಪ್ರೀತಿ ಹೀಗೆ ವ್ಯಕ್ತವಾಯಿತು.


ಪಾಪಮಾಡುವವನು ಸೈತಾನನ ಸಂತಾನದವನು. ಸೈತಾನನು ಆದಿಯಿಂದಲೂ ಪಾಪಮಾಡಿದವನೇ. ಅವನ ದುಷ್ಕೃತ್ಯಗಳನ್ನು ವಿನಾಶಗೊಳಿಸಲೆಂದೇ ದೇವರ ಪುತ್ರ ಕಾಣಿಸಿಕೊಂಡಿದ್ದು.


ಪುತ್ರನನ್ನು ತಿರಸ್ಕರಿಸುವವನು ಪಿತನನ್ನೂ ತಿರಸ್ಕರಿಸುತ್ತಾನೆ. ಪುತ್ರನನ್ನು ಅಂಗೀಕರಿಸುವವನು ಪಿತನನ್ನೂ ಅಂಗೀಕರಿಸುತ್ತಾನೆ.


ನಾವು, ಅಂದರೆ ಸಿಲ್ವಾನ, ತಿಮೊಥೆಯ ಮತ್ತು ನಾನು, ಪ್ರಚಾರಮಾಡಿದ ದೇವರ ಪುತ್ರರಾದ ಯೇಸುಕ್ರಿಸ್ತರು, ಈ ಕ್ಷಣ ಹೌದು, ಮರುಕ್ಷಣ ಇಲ್ಲ ಎಂದು ಹೇಳುವವರಲ್ಲ, ಅವರು ದೇವರ ತಥಾಸ್ತು ಆಗಿದ್ದಾರೆ.


ಅದಕ್ಕೆ ಯೆಹೂದ್ಯರು, “ನಮಗೊಂದು ಕಾನೂನು ಉಂಟು. ಅದರ ಮೇರೆಗೆ ಇವನು ಸಾಯಲೇಬೇಕು. ಏಕೆಂದರೆ, ತಾನು ದೇವರ ಪುತ್ರನೆಂದು ಹೇಳಿಕೊಂಡಿದ್ದಾನೆ,” ಎಂದು ಉತ್ತರಕೊಟ್ಟರು.


“ಹೌದು ಪ್ರಭುವೇ, ನೀವೇ ಅಭಿಷಿಕ್ತರಾದ ಲೋಕೋದ್ಧಾರಕ; ದೇವರ ಪುತ್ರ; ಈ ಲೋಕಕ್ಕೆ ಬರಬೇಕಾದವರು - ಎಂದು ನಾನು ವಿಶ್ವಾಸಿಸುತ್ತೇನೆ,” ಎಂದು ಹೇಳಿದಳು.


ಇಂತಿರುವಲ್ಲಿ, ಪಿತನೇ ಪ್ರತಿಷ್ಠಿಸಿ ಕಳುಹಿಸಿಕೊಟ್ಟವನಾದ ನಾನು, ‘ದೇವರ ಪುತ್ರನಾಗಿದ್ದೇನೆ’ ಎಂದು ಹೇಳಿಕೊಂಡಿದ್ದಕ್ಕೆ, ‘ಇವನು ದೇವದೂಷಣೆ ಮಾಡಿದ್ದಾನೆ’ ಎನ್ನುತ್ತೀರಲ್ಲಾ?


ದೇವರ ಪುತ್ರರಾದ ಯೇಸುಕ್ರಿಸ್ತರ ಶುಭಸಂದೇಶ. ಇದು ಪ್ರವಾದಿ ಯೆಶಾಯನು ಮೊದಲೇ ಬರೆದಿಟ್ಟ ಪ್ರಕಾರ ಪ್ರಾರಂಭವಾಯಿತು:


ಶತಾಧಿಪತಿ ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದುದೆಲ್ಲವನ್ನೂ ಕಂಡು ಭಯಭ್ರಾಂತರಾದರು. “ಸತ್ಯವಾಗಿಯೂ ಈತ ದೇವರ ಪುತ್ರನೇ ಸರಿ,” ಎಂದರು.


ದೇವರಲ್ಲಿ ಭರವಸೆಯಿಟ್ಟಿದ್ದ; ತಾನು ‘ದೇವರ ಪುತ್ರ’ ಎಂದು ಹೇಳಿಕೊಳ್ಳುತ್ತಿದ್ದ; ದೇವರಿಗೆ ಇಷ್ಟವಾದವನು ಇವನಾಗಿದ್ದರೆ ದೇವರೇ ಬಂದು ಇವನನ್ನು ಬಿಡುಗಡೆಮಾಡಲಿ,” ಎಂದು ಅಪಹಾಸ್ಯಮಾಡುತ್ತಿದ್ದರು.


“ಮಹಾದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಅದನ್ನು ಮತ್ತೆ ಕಟ್ಟಬಲ್ಲವನೇ, ಈಗ ನಿನ್ನನ್ನು ನೀನೇ ರಕ್ಷಿಸಿಕೋ; ನೀನು ದೇವರ ಪುತ್ರನಾದರೆ ಶಿಲುಬೆಯಿಂದ ಇಳಿದು ಬಾ,” ಎಂದು ಮೂದಲಿಸಿದರು.


ಆದರೆ ಯೇಸು ಮೌನವಾಗಿದ್ದರು. “ಜೀವಂತ ದೇವರ ಮೇಲೆ ಆಣೆಯಿರಿಸಿ ನಾನು ನಿನ್ನನ್ನು ಕೇಳುತ್ತಿದ್ದೇನೆ, ‘ನೀನು ದೇವರ ಪುತ್ರ ಹಾಗೂ ಅಭಿಷಿಕ್ತನಾದ ಲೋಕೋದ್ಧಾರಕನೋ?’ ನಮಗೆ ಹೇಳು,” ಎಂದನು ಆ ಪ್ರಧಾನಯಾಜಕ.


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ಕ್ರಿಸ್ತಯೇಸುವಿನ ಉಪದೇಶದಲ್ಲಿ ನೆಲೆಸದೆ ಅದರ ಎಲ್ಲೆಮೀರಿ ನಡೆಯುವವನಲ್ಲಿ ದೇವರು ಇರುವುದಿಲ್ಲ. ಆ ಉಪದೇಶದಲ್ಲಿ ನೆಲೆಸಿರುವವನಲ್ಲಿ ಪಿತ ಮತ್ತು ಪುತ್ರ ಇಬ್ಬರೂ ಇರುತ್ತಾರೆ.


ಆತನಿಗೆ ತಂದೆತಾಯಿಯಾಗಲಿ ವಂಶಾವಳಿಯಾಗಲಿ ಇಲ್ಲ. ಆತನ ಜನ್ಮಕ್ಕೆ ಆದಿಯಾಗಲಿ, ಜೀವನಕ್ಕೆ ಅಂತ್ಯವಾಗಲಿ ಇಲ್ಲ. ಆತನು ದೇವಪುತ್ರನನ್ನು ಹೋಲುತ್ತಾನೆ. ಶಾಶ್ವತ ಯಾಜಕನಾಗಿ ಉಳಿಯುತ್ತಾನೆ.


ಆಗ ಪವಿತ್ರಾತ್ಮ ಸಶರೀರವಾಗಿ ಒಂದು ಪಾರಿವಾಳದ ರೂಪದಲ್ಲಿ ಯೇಸುವಿನ ಮೇಲೆ ಇಳಿದರು. ಅಲ್ಲದೆ, “ನೀನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ದೂತನು ಪ್ರತ್ಯುತ್ತರವಾಗಿ, “ಪವಿತ್ರಾತ್ಮ ನಿನ್ನ ಮೇಲೆ ಬರುವರು; ಪರಾತ್ಪರ ದೇವರ ಶಕ್ತಿ ನಿನ್ನನ್ನು ಆವರಿಸುವುದು; ಈ ಕಾರಣದಿಂದ, ನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು ‘ದೇವರ ಪುತ್ರ’ ಎನಿಸಿಕೊಳ್ಳುವನು.


ಇದಲ್ಲದೆ, “ನೀನೇ ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎನ್ನುವ ದೈವವಾಣಿ ಕೇಳಿಸಿತು.


ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ, ಜೀವಸ್ವರೂಪರಾದ ದೇವರ ಪುತ್ರ ತಾವೇ,” ಎಂದನು.


“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.


ಅವರು ಯೇಸುವನ್ನು ನೋಡಿದೊಡನೆಯೇ, “ಓ ದೇವರ ಪುತ್ರನೇ, ನಿಮಗೇಕೆ ನಮ್ಮ ಗೊಡವೆ? ನಿಯಮಿತಕಾಲಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಬಂದಿರಾ?” ಎಂದು ಕೂಗಿಕೊಂಡರು.


“ನೀನು ದೇವರ ಪುತ್ರನೆಂಬುದು ಸತ್ಯವಾದರೆ ಕೆಳಕ್ಕೆ ಧುಮುಕು. ಏಕೆಂದರೆ, ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ, ‘ದೇವರೇ ತಮ್ಮ ದೂತರಿಗೆ ಆಜ್ಞೆಮಾಡುವರು’ ಮತ್ತು ‘ಇವರು ನಿನ್ನ ಕಾಲುಗಳು ಕಲ್ಲುಗಳಿಗೆ ತಾಕದಂತೆ ನಿನ್ನನ್ನು ಕೈಗಳಲ್ಲಿ ಆತುಕೊಳ್ಳುವರು’,” ಎಂದಿತು.


ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು.


ನಾನೂ ಪಿತನೂ ಒಂದೇ ಆಗಿದ್ದೇವೆ,” ಎಂದರು.


ತಾವೇ ದೇವರಿಂದ ಬಂದ ಪರಮಪೂಜ್ಯರು. ಹೌದು, ಇದೇ ನಮ್ಮ ವಿಶ್ವಾಸ ಮತ್ತು ಗ್ರಹಿಕೆ,” ಎಂದು ಹೇಳಿದನು.


ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು