Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:4 - ಕನ್ನಡ ಸತ್ಯವೇದವು C.L. Bible (BSI)

4 ಆ ದಿವ್ಯವಾಣಿಯಲ್ಲಿ ಸಜ್ಜೀವವಿತ್ತು. ಆ ಜೀವವೇ ಮಾನವಜನಾಂಗದ ಜ್ಯೋತಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರಲ್ಲಿ ಜೀವವಿತ್ತು. ಆ ಜೀವವು ಮಾನವರಿಗೆ ಬೆಳಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತ್ಯಾ ಶಬ್ದಾತ್ ಜಿವ್ ಹೊತ್ತೊ, ತೊ ಜಿವ್ ಸಗ್ಳ್ಯಾ ಲೊಕಾಕ್ನಿ ಉಜ್ವೊಡ್ ಹೊವ್ನ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:4
30 ತಿಳಿವುಗಳ ಹೋಲಿಕೆ  

ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ನನ್ನಲ್ಲಿ ವಿಶ್ವಾಸವಿಡುವವನು ಅಂಧಕಾರದಲ್ಲಿ ಉಳಿಯಬಾರದೆಂದು ನಾನೇ ಜಗಜ್ಯೋತಿಯಾಗಿ ಬಂದಿದ್ದೇನೆ.


ಪಿತನು ತಾವೇ ಸ್ವಯಂ ಜೀವಮೂಲವಾಗಿರುವಂತೆ ಪುತ್ರನು ಸಹ ಸ್ವಯಂ ಜೀವಮೂಲವಾಗಿರುವಂತೆ ಕರುಣಿಸಿದ್ದಾರೆ.


ಜಗತ್ತಿನಲ್ಲಿ ನಾನಿರುವಾಗ ಜಗದ ಜ್ಯೋತಿ ನಾನೇ,” ಎಂದು ನುಡಿದರು.


ಯೇಸು, ಅವಳಿಗೆ, “ಪುನರುತ್ಥಾನವೂ ಜೀವವೂ ನಾನೇ; ನನ್ನಲ್ಲಿ ವಿಶ್ವಾಸವಿಟ್ಟವನು ಸಾವಿಗೀಡಾದರೂ ಜೀವಿಸುವನು.


ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಆ ಜೀವ ಅವರ ಪುತ್ರನಲ್ಲಿದೆ ಎಂಬುದೇ ಈ ಸಾಕ್ಷ್ಯ.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಅದಕ್ಕೆ ಯೇಸು, “ಇನ್ನು ತುಸುಕಾಲ ಮಾತ್ರ ಜ್ಯೋತಿ ನಿಮ್ಮ ನಡುವೆ ಇರುತ್ತದೆ. ನಿಮ್ಮನ್ನು ಕತ್ತಲು ಕವಿಯದಂತೆ ಜ್ಯೋತಿಯಿರುವಾಗಲೇ ನಡೆಯಿರಿ. ಕತ್ತಲಲ್ಲಿ ನಡೆಯುವವನಿಗೆ ಗೊತ್ತುಗುರಿ ಕಾಣದು.


ಆದ್ದರಿಂದ: ನಿದ್ದೆಮಾಡುವವನೇ ಎದ್ದೇಳು ಸತ್ತವರನು ಬಿಟ್ಟು ಬಾ ಎಚ್ಚೆತ್ತು ನನಗೀವನು ಬೆಳಕನು ಕ್ರಿಸ್ತನು.” ಎಂದು ಬರೆಯಲಾಗಿದೆ.


ಕಾರ್ಗತ್ತಲಲಿ ವಾಸಿಸುವವರಿಗೆ ದಿವ್ಯಜ್ಯೋತಿಯೊಂದು ಕಾಣಿಸಿತು. ಮರಣಛಾಯೆ ಕವಿದ ನಾಡಿಗರಿಗೆ ಅರುಣೋದಯವಾಯಿತು,” ಎಂದು ನುಡಿದ ಪ್ರವಾದಿ ಯೆಶಾಯನ ವಚನಗಳು ಈಡೇರಿದವು.


ಕ್ರಿಸ್ತಯೇಸುವೇ ನಿಮ್ಮ ನೈಜ ಜೀವವಾಗಿದ್ದಾರೆ. ಅವರು ಪುನರಾಗಮಿಸುವಾಗ ನೀವೂ ಸಹ ಅವರ ಮಹಿಮೆಯಲ್ಲಿ ಪಾಲುಗಾರರಾಗಿ ಅವರೊಂದಿಗೆ ಪ್ರತ್ಯಕ್ಷರಾಗುವಿರಿ.


ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು. ಅವರೆದುರಿನ ಕತ್ತಲನ್ನು ಬೆಳಕಾಗಿಸುವೆನು ಅವರ ಹಾದಿಯ ಡೊಂಕನು ನೇರಮಾಡುವೆನು. ಬಿಡದೆ ಮಾಡುವೆನು ಈ ಕಾರ್ಯಗಳನು.


ಅದೇನೆಂದರೆ, ಲೋಕೋದ್ಧಾರಕನು ಯಾತನೆಯನ್ನು ಅನುಭವಿಸಬೇಕು; ಸತ್ತು ಪುನರುತ್ಥಾನವಾದವರಲ್ಲಿ ಮೊತ್ತಮೊದಲಿಗನಾಗಿ ಯೆಹೂದ್ಯರಿಗೂ ಅನ್ಯಧರ್ಮೀಯರಿಗೂ ಪರಂಜ್ಯೋತಿಯನ್ನು ಪ್ರಕಟಿಸಬೇಕು,” ಎಂದನು.


ಈತ ಅನ್ಯಜನರನ್ನು ಬೆಳಗಿಸುವ ಜ್ಯೋತಿ ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ.”


ಆ ಜೀವ ಪ್ರತ್ಯಕ್ಷವಾಯಿತು. ಅದನ್ನು ನಾವು ನೋಡಿದ್ದೇವೆ. ಆ ಬಗ್ಗೆ ಸಾಕ್ಷಿ ಹೇಳುತ್ತೇವೆ. ಪಿತನ ಬಳಿಯಿದ್ದು ನಮಗೆ ಪ್ರತ್ಯಕ್ಷವಾದಂಥ ನಿತ್ಯಜೀವವನ್ನು ನಿಮಗೆ ಸಾರುತ್ತೇವೆ.


ಪಿತನು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವವನ್ನು ಕೊಡುವಂತೆಯೇ ಪುತ್ರನೂ ತನಗೆ ಬೇಕಾದವರಿಗೆ ಜೀವವನ್ನು ಕೊಡುತ್ತಾನೆ.


“ಯೇಸುವೆಂಬ ನಾನೇ ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ನಿಮಗೆ ಸಾಕ್ಷಿನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ನಾನು ದಾವೀದಕುಲಪುತ್ರ. ಅದೇ ವಂಶದ ಕುಡಿ; ಉದಯಕಾಲದ ಉಜ್ವಲ ನಕ್ಷತ್ರ!


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ಪವಿತ್ರಗ್ರಂಥದಲ್ಲಿ ಲಿಖಿತವಾಗಿರುವಂತೆ ಮೊದಲ ಮಾನವನಾದ ಆದಾಮನು ಜೀವ ಪಡೆದ ವ್ಯಕ್ತಿ; ಕಡೆಯ ಆದಾಮನಾದರೋ ಜೀವ ಕೊಡುವ ಆತ್ಮ.


ಬಳಿಕ ಆ ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ಸ್ಫಟಿಕದಂತೆ ಮಿನುಗುತ್ತಿತ್ತು. ಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿ,


ಅವರ ಭರವಸೆ ಸಿರಿಸಂಪತ್ತಿನಲಿ I ಅವರ ಹಿರಿಮೆ ಅಧಿಕಾಸ್ತಿಪಾಸ್ತಿಯಲಿ II


ಆ ತೀರ್ಪು ಏನೆಂದರೆ: ಜ್ಯೋತಿ ಜಗತ್ತಿಗೆ ಬಂದಿತು: ಮಾನವರಾದರೋ ತಮ್ಮ ದುಷ್ಕೃತ್ಯಗಳಿಂದಾಗಿ ಆ ಜ್ಯೋತಿಗೆ ಬದಲು ಅಂಧಕಾರವನ್ನೇ ಅವಲಂಭಿಸಿದರು.


ನಿಮಗೆ ನಾವು ಪ್ರಚುರಪಡಿಸುವ ಸಜೀವವಾಣಿ ಆದಿಯಿಂದ ಇರುವಂಥಾದ್ದು. ಇದನ್ನು ಕಣ್ಣಾರೆ ಕಂಡಿದ್ದೇವೆ, ಕಿವಿಯಾರೆ ಕೇಳಿದ್ದೇವೆ, ಮನಸ್ಸಾರೆ ಗ್ರಹಿಸಿದ್ದೇವೆ ಮತ್ತು ಕೈಯಾರೆ ಮುಟ್ಟಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು