Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:43 - ಕನ್ನಡ ಸತ್ಯವೇದವು C.L. Bible (BSI)

43 ಮರುದಿನ ಯೇಸು ಸ್ವಾಮಿ ಗಲಿಲಾಯ ನಾಡಿಗೆ ಹೋಗಲು ನಿರ್ಧರಿಸಿದರು. ಅವರು ಫಿಲಿಪ್ಪನನ್ನು ಕಂಡು, “ನನ್ನೊಡನೆ ಬಾ,” ಎಂದು ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಮರುದಿನ ಯೇಸು ಗಲಿಲಾಯಕ್ಕೆ ಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಮರುದಿನ ಯೇಸು ಗಲಿಲಾಯಕ್ಕೆ ಹೊರಟುಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡುಕೊಂಡು - ನನ್ನನ್ನು ಹಿಂಬಾಲಿಸು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಮರುದಿನ ಯೇಸು ಗಲಿಲಾಯಕ್ಕೆ ಹೋಗಲು ನಿರ್ಧರಿಸಿದನು. ಯೇಸು ಫಿಲಿಪ್ಪನನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಯೇಸು ಮರುದಿನ ಗಲಿಲಾಯಕ್ಕೆ ಹೋಗಬೇಕೆಂದಿದ್ದಾಗ, ಅವರು ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ದುಸ್ರೆಂದಿಸಿ ಜೆಜುನ್ ಗಾಲಿಲಿಯಾಕ್ ಜಾವ್ಚೆ ಮನುನ್ ನಿರ್‍ದಾರ್ ಕರ್ಲ್ಯಾನ್, ತನ್ನಾ ತೆಕಾ ಫಿಲಿಪ್ ಗಾವ್ಲೊ. ತೆಕಾ ಜೆಜುನ್ “ಮಾಜ್ಯಾ ಫಾಟ್ನಾ ಯೆ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:43
19 ತಿಳಿವುಗಳ ಹೋಲಿಕೆ  

ಆಗ ಫಿಲಿಪ್ಪನು, “ಪ್ರಭೂ, ನಮಗೆ ಪಿತನನ್ನು ತೋರಿಸಿ; ಅಷ್ಟೇ ಸಾಕು,” ಎಂದನು.


ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಮುಂದಕ್ಕೆ ಹೋಗುತ್ತಿದ್ದಾಗ ಮತ್ತಾಯ ಎಂಬವನನ್ನು ಕಂಡರು. ಅವನು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಯೇಸು ಅವನನ್ನು ಕರೆದರು. ಮತ್ತಾಯನು ಎದ್ದು ಅವರನ್ನು ಹಿಂಬಾಲಿಸಿದನು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ನನ್ನನ್ನು ವಿಚಾರಿಸದವರಿಗೂ ನಾ ದರ್ಶನವಿತ್ತೆ. ನನ್ನನ್ನು ಹುಡುಕದವರಿಗೂ ನಾ ಒಡನೆ ಸಿಕ್ಕಿದೆ. ನನ್ನ ನಾಮಸ್ಮರಣೆ ಮಾಡದ ಜನಾಂಗಕ್ಕೆ, ಇಗೋ, ‘ಇದ್ದೇನೆ, ಇಲ್ಲೇ ಇದ್ದೇನೆ’ ಎನ್ನುತ್ತಿದ್ದೆ.


ಇವರು ಗಲಿಲೇಯದ ಬೆತ್ಸಾಯಿದ ಎಂಬ ಊರಿನವನಾದ ಫಿಲಿಪ್ಪನ ಬಳಿಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ,” ಎಂದು ಕೇಳಿಕೊಂಡರು.


ದೇವರು ನಮ್ಮನ್ನು ಮೊದಲು ಪ್ರೀತಿಸಿದ್ದರಿಂದಲೇ ನಾವು ಪ್ರೀತಿಸುತ್ತೇವೆ.


ಯೇಸು ಕಣ್ಣು ಹಾಯಿಸಿ ನೋಡಿದಾಗ ಆ ದೊಡ್ಡ ಗುಂಪು ತಮ್ಮ ಕಡೆಗೆ ಬರುವುದನ್ನು ಕಂಡರು. “ಈ ಜನರ ಊಟಕ್ಕೆ ರೊಟ್ಟಿಯನ್ನು ನಾವು ಎಲ್ಲಿಂದ ಕೊಂಡುಕೊಳ್ಳುವುದು?” ಎಂದು ಯೇಸು ಫಿಲಿಪ್ಪನನ್ನು ಕೇಳಿದರು.


ಈಗಾಗಲೇ ನಾನಿದೆಲ್ಲವನ್ನೂ ಸಾಧಿಸಿದ್ದೇನೆ, ಪರಿಪೂರ್ಣತೆಯನ್ನು ಗಳಿಸಿದ್ದೇನೆ ಎಂದು ನೀವು ಭಾವಿಸಬಾರದು. ಕ್ರಿಸ್ತಯೇಸು ನನ್ನನ್ನು ಯಾವುದಕ್ಕಾಗಿ ತಮ್ಮವನನ್ನಾಗಿ ಮಾಡಿಕೊಂಡರೋ, ಅದನ್ನು ನನ್ನದಾಗಿಸಿಕೊಳ್ಳಲು ನಾನು ಪ್ರಯತ್ನಿಸುತ್ತಿದ್ದೇನೆ.


ಯೋವಾನ್ನನು ಸ್ನಾನದೀಕ್ಷೆ ಕೊಡುತ್ತಿದ್ದ ಜೋರ್ಡನ್ ನದಿಯ ಆಚೆದಡದಲ್ಲಿದ್ದ ಬೆಥಾನಿಯ ಎಂಬಲ್ಲಿ ಇದೆಲ್ಲವೂ ನಡೆಯಿತು.


ನರಪುತ್ರನು ಬಂದಿರುವುದು ಪತಿತರನ್ನು ಅರಸಿ ಉದ್ಧರಿಸುವುದಕ್ಕೆ,” ಎಂದು ಹೇಳಿದರು.


ಫಿಲಿಪ್ಪ ಮತ್ತು ಬಾರ್ತೊಲೊಮಾಯ; ತೋಮ ಮತ್ತು ಸುಂಕ ವಸೂಲಿಗಾರ ಮತ್ತಾಯ; ಅಲ್ಫಾಯನ ಮಗ ಯಕೋಬ ಮತ್ತು ತದ್ದಾಯ;


ಅದಕ್ಕೆ ಫಿಲಿಪ್ಪನು, “ಇನ್ನೂರು ದಿನಾರಿ ನಾಣ್ಯಗಳನ್ನು ಕೊಟ್ಟು ರೊಟ್ಟಿಯನ್ನು ತಂದರೂ ಆಳಿಗೊಂದು ತುಂಡೂ ಬಾರದು,” ಎಂದನು.


ಮಾರನೆಯ ದಿನ ಯೊವಾನ್ನನು ತನ್ನಿಬ್ಬರು ಶಿಷ್ಯರ ಸಂಗಡ ನಿಂತುಕೊಂಡಿರುವಾಗ, ಯೇಸು ಸ್ವಾಮಿ ಆ ಮಾರ್ಗವಾಗಿ ಹೋಗುತ್ತಿದ್ದರು.


ಯೊವಾನ್ನನು ಬಂಧಿತನಾದನೆಂದು ಯೇಸುಸ್ವಾಮಿ ಕೇಳಿ, ಆ ಪ್ರಾಂತ್ಯವನ್ನು ಬಿಟ್ಟು ಗಲಿಲೇಯಕ್ಕೆ ಹೊರಟುಹೋದರು.


ಅವನಿಗೆ ಯೇಸು, “ಸತ್ತವರೇ ತಮ್ಮ ಸತ್ತವರನ್ನು ಸಮಾಧಿ ಮಾಡಿಕೊಳ್ಳಲಿ; ನೀನು ನನ್ನನ್ನು ಹಿಂಬಾಲಿಸು,” ಎಂದರು.


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


ಅಂದ್ರೆಯ ಮತ್ತು ಪೇತ್ರನಂತೆ ಫಿಲಿಪ್ಪನು ಕೂಡ ಬೆತ್ಸಾಯಿದ ಎಂಬ ಊರಿನವನು.


ಯೇಸು ಮಾಡಿದ ಮೊದಲನೆಯ ಸೂಚಕಕಾರ್ಯ ಇದು. ಇದನ್ನು ಗಲಿಲೇಯ ನಾಡಿನ ಕಾನಾ ಊರಿನಲ್ಲಿ ಮಾಡಿ ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಅವರ ಶಿಷ್ಯರಿಗೂ ಅವರಲ್ಲಿ ವಿಶ್ವಾಸ ಮೂಡಿತು.


ಇದನ್ನು ಕೇಳಿದ ಆ ಶಿಷ್ಯರು ಯೇಸುವನ್ನು ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು