Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:44 - ಕನ್ನಡ ಸತ್ಯವೇದವು C.L. Bible (BSI)

44 ಅಂದ್ರೆಯ ಮತ್ತು ಪೇತ್ರನಂತೆ ಫಿಲಿಪ್ಪನು ಕೂಡ ಬೆತ್ಸಾಯಿದ ಎಂಬ ಊರಿನವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಈ ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರರ ಪಟ್ಟಣವಾದ ಬೆತ್ಸಾಯಿದದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಈ ಫಿಲಿಪ್ಪನು ಬೇತ್ಸಾಯಿದದವನು, ಅಂದರೆ ಅಂದ್ರೆಯ ಪೇತ್ರರ ಊರಿನವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಅಂದ್ರೆಯ ಮತ್ತು ಪೇತ್ರರಂತೆ ಫಿಲಿಪ್ಪನು ಸಹ ಬೆತ್ಸಾಯಿದ ಎಂಬ ಊರಿನವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿದಕ್ಕೆ ಸೇರಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಫಿಲಿಪ್‍ಬಿ ಬೆತ್ಸಾಯಿದಾ ಮನ್ತಲ್ಯಾ, ಅಂದ್ರು, ಅನಿ ಪೆದ್ರುಂಚ್ಯಾ ಶಾರಾಚೊಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:44
18 ತಿಳಿವುಗಳ ಹೋಲಿಕೆ  

ಇವರು ಗಲಿಲೇಯದ ಬೆತ್ಸಾಯಿದ ಎಂಬ ಊರಿನವನಾದ ಫಿಲಿಪ್ಪನ ಬಳಿಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ,” ಎಂದು ಕೇಳಿಕೊಂಡರು.


:ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣೀತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಾಪಕ್ಕೆ ವಿಮುಖರಾಗುತ್ತಿದ್ದರು.


“ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗುತ್ತಿದ್ದರು.


ಇತ್ತ ಪ್ರೇಷಿತರು ಹಿಂದಿರುಗಿ ಬಂದು ತಾವು ಮಾಡಿದ್ದೆಲ್ಲವನ್ನೂ ಯೇಸುಸ್ವಾಮಿಗೆ ವರದಿಮಾಡಿದರು. ಯೇಸು ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಬೆತ್ಸಾಯಿದ ಎಂಬ ಊರಿನತ್ತ ಹೋದರು.


ಯೇಸುಸ್ವಾಮಿ ಮತ್ತು ಅವರ ಶಿಷ್ಯರು ಬೆತ್ಸಾಯಿದಕ್ಕೆ ಬಂದರು. ಕೆಲವರು ಯೇಸುವಿನ ಬಳಿಗೆ ಕುರುಡನೊಬ್ಬನನ್ನು ಕರೆತಂದು ಅವನನ್ನು ಮುಟ್ಟಬೇಕೆಂದು ಬೇಡಿಕೊಂಡರು.


ಇದಾದ ಮೇಲೆ ಯೇಸುಸ್ವಾಮಿ, ತಾವು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ ಶಿಷ್ಯರು ದೋಣಿ ಹತ್ತಿ ತಮಗಿಂತ ಮುಂದಾಗಿ ಸರೋವರದ ಆ ಕಡೆಗಿದ್ದ ಬೆತ್ಸಾಯಿದಕ್ಕೆ ಹೋಗುವಂತೆ ಆಜ್ಞಾಪಿಸಿದರು.


ಅಂದ್ರೆಯ, ಫಿಲಿಪ್ಪ, ಬಾರ್ತಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗ ಯಕೋಬ, ತದ್ದಾಯ, ದೇಶಾಭಿಮಾನಿ ಆದ ಸಿಮೋನ ಮತ್ತು


ಫಿಲಿಪ್ಪ ಮತ್ತು ಬಾರ್ತೊಲೊಮಾಯ; ತೋಮ ಮತ್ತು ಸುಂಕ ವಸೂಲಿಗಾರ ಮತ್ತಾಯ; ಅಲ್ಫಾಯನ ಮಗ ಯಕೋಬ ಮತ್ತು ತದ್ದಾಯ;


ಅವರು ಯಾರಾರೆಂದರೆ: ಪೇತ್ರ, ಯೊವಾನ್ನ, ಯಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಕೋಬ, ದೇಶಾಭಿಮಾನಿ ಆದ ಸಿಮೋನ ಮತ್ತು ಯಕೋಬನ ಮಗ ಯೂದ. ಇವರೆಲ್ಲರು ಪಟ್ಟಣವನ್ನು ಸೇರಿದ್ದೇ, ಮೇಲ್ಮಾಳಿಗೆಯಲ್ಲಿದ್ದ ತಮ್ಮ ಕೊಠಡಿಗೆ ಹೋದರು.


ಹೀಗೆ ಆಯ್ಕೆ ಆದವರು: ಪೇತ್ರನೆಂದು ಹೆಸರು ಪಡೆದ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ, ಯಕೋಬ ಮತ್ತು ಯೊವಾನ್ನ, ಫಿಲಿಪ್ಪ ಮತ್ತು ಬಾರ್ತೊಲೊಮಾಯ,


ಮರುದಿನ ಯೇಸು ಸ್ವಾಮಿ ಗಲಿಲಾಯ ನಾಡಿಗೆ ಹೋಗಲು ನಿರ್ಧರಿಸಿದರು. ಅವರು ಫಿಲಿಪ್ಪನನ್ನು ಕಂಡು, “ನನ್ನೊಡನೆ ಬಾ,” ಎಂದು ಕರೆದರು.


ಫಿಲಿಪ್ಪನು ನತಾನಿಯೇಲನನ್ನು ಕಂಡು, “ಧರ್ಮಶಾಸ್ತ್ರದಲ್ಲಿ ಮೋಶೆ ಉಲ್ಲೇಖಿಸಿದ ಮತ್ತು ಪ್ರವಾದಿಗಳು ಪ್ರವಚನ ಮಾಡಿದ ವ್ಯಕ್ತಿಯು ನಮಗೆ ಸಿಕ್ಕಿದ್ದಾರೆ. ಇವರೇ ಜೋಸೆಫನ ಮಗನಾದ ನಜರೇತ್ ಊರಿನ ಯೇಸು,” ಎಂದು ಹೇಳಿದನು.


ಅದಕ್ಕೆ ನತಾನಿಯೇಲನು, “ಏನು? ನಜರೇತಿನಿಂದ ಒಳ್ಳೆಯದೇನಾದರೂ ಬರುವುದು ಉಂಟೆ?” ಎಂದು ಕೇಳಲು, “ಬಂದು ನೀನೇ ನೋಡು,” ಎಂದು ಫಿಲಿಪ್ಪನು ಉತ್ತರಕೊಟ್ಟನು.


ನತಾನಿಯೇಲನು, “ನನ್ನ ಪರಿಚಯ ನಿಮಗೆ ಹೇಗಾಯಿತು?” ಎಂದು ಕೇಳಲು ಯೇಸು, “ಫಿಲಿಪ್ಪನು ನಿನ್ನನ್ನು ಕರೆಯುವ ಮೊದಲೇ ನೀನು ಅಂಜೂರದ ಮರದಡಿ ಇದ್ದಾಗ ನಾನು ನಿನ್ನನ್ನು ಕಂಡೆ,” ಎಂದು ಉತ್ತರಕೊಟ್ಟರು.


ಯೇಸು ಕಣ್ಣು ಹಾಯಿಸಿ ನೋಡಿದಾಗ ಆ ದೊಡ್ಡ ಗುಂಪು ತಮ್ಮ ಕಡೆಗೆ ಬರುವುದನ್ನು ಕಂಡರು. “ಈ ಜನರ ಊಟಕ್ಕೆ ರೊಟ್ಟಿಯನ್ನು ನಾವು ಎಲ್ಲಿಂದ ಕೊಂಡುಕೊಳ್ಳುವುದು?” ಎಂದು ಯೇಸು ಫಿಲಿಪ್ಪನನ್ನು ಕೇಳಿದರು.


ಅದಕ್ಕೆ ಫಿಲಿಪ್ಪನು, “ಇನ್ನೂರು ದಿನಾರಿ ನಾಣ್ಯಗಳನ್ನು ಕೊಟ್ಟು ರೊಟ್ಟಿಯನ್ನು ತಂದರೂ ಆಳಿಗೊಂದು ತುಂಡೂ ಬಾರದು,” ಎಂದನು.


ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅವರಿಬ್ಬರೂ ಹೋಗಿ ಯೇಸುವಿಗೆ ಈ ವಿಷಯವನ್ನು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು