Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:50 - ಕನ್ನಡ ಸತ್ಯವೇದವು C.L. Bible (BSI)

50 ಆಗ ಯೇಸು, “ಅಂಜೂರದ ಮರದಡಿಯಲ್ಲಿ ನಿನ್ನನ್ನು ಕಂಡೆ ಎಂದು ನಾನು ಹೇಳಿದ ಮಾತ್ರಕ್ಕೆ ಇಷ್ಟೊಂದು ವಿಶ್ವಾಸವೆ? ಇದಕ್ಕೂ ಮಿಗಿಲಾದವುಗಳನ್ನು ನೀನು ಕಾಣುವೆ,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಅದಕ್ಕೆ ಯೇಸು “ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರಕ್ಕೆ ನಂಬುತ್ತೀಯೋ? ನೀನು ಇವುಗಳಿಗಿಂತಲೂ ಹೆಚ್ಚಿನ ಮಹತ್ಕಾರ್ಯಗಳನ್ನು ನೋಡುವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಅದಕ್ಕೆ ಯೇಸು - ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರದಿಂದ ನಂಬುತ್ತೀಯೋ? ಇದಕ್ಕಿಂತ ಹೆಚ್ಚಿನ ಕಾರ್ಯಗಳನ್ನು ನೋಡುವಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಯೇಸು ನತಾನಿಯೇಲನಿಗೆ, “ನಿನ್ನನ್ನು ಅಂಜೂರದ ಮರದ ಕೆಳಗೆ ನೋಡಿದೆನೆಂದು ನಾನು ನಿನಗೆ ಹೇಳಿದ್ದರಿಂದ ನೀನು ನನ್ನನ್ನು ನಂಬುವೆ. ಆದರೆ ಅದಕ್ಕಿಂತಲೂ ಹೆಚ್ಚು ದೊಡ್ಡ ಕಾರ್ಯಗಳನ್ನು ನೀನು ನೋಡುವೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಯೇಸು ಅವನಿಗೆ, “ನಿನ್ನನ್ನು ಅಂಜೂರದ ಮರದ ಕೆಳಗೆ ಕಂಡಿದ್ದೆ ಎಂದು ನಾನು ಹೇಳಿದ್ದಕ್ಕೆ ನೀನು ನಂಬುತ್ತೀಯೋ? ನೀನು ಇವುಗಳಿಗಿಂತಲೂ ಮಹಾಕಾರ್ಯಗಳನ್ನು ಕಾಣುವೆ,” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 ಜೆಜುನ್ ತೆಕಾ, “ಅಂಜುರಾಚ್ಯಾ ಝಾಡಾ ಬುಡಿ ಹೊತ್ತ್ಯಾ ತನ್ನಾ ಮಿಯಾ ತುಕಾ ಬಗಟ್ಲೊ ಮನುನ್ ಸಾಂಗಟಲ್ಲ್ಯಾಸಾಟಿ ತಿಯಾ ಮಾಕಾ ವಿಶ್ವಾಸ್ ಕರ್‍ತೆ ಕಾಯ್? ಹೆಚ್ಯಾನ್ಕಿಬಿ ಮೊಟಿ ಕಾಮಾ ತಿಯಾ ಬಗ್ತೆಯ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:50
9 ತಿಳಿವುಗಳ ಹೋಲಿಕೆ  

“ನಿನಗೆ ವಿಶ್ವಾಸವಿದ್ದಲ್ಲಿ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ಹೇಳಲಿಲ್ಲವೇ?” ಎಂದು ಮರು ನುಡಿದರು ಯೇಸು.


ಯೇಸು ಅವನಿಗೆ, “ನನ್ನನ್ನು ಕಂಡುದರಿಂದ ತಾನೆ ನಿನಗೆ ವಿಶ್ವಾಸ ಹುಟ್ಟಿತು? ಕಾಣದೆ ವಿಶ್ವಾಸಿಸುವವರು ಧನ್ಯರು,” ಎಂದು ಹೇಳಿದರು.


ನಂಬಿ ಧನ್ಯಳಾದೆ ನೀನು, ದೇವರಿಂದ ಬಂದ ವಾರ್ತೆ ನೆರವೇರಿಯೇ ತೀರುವುದೆಂದು.”


ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಅವನು ಸಮೃದ್ಧನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ.


ಅವನ ಈ ಮಾತುಗಳನ್ನು ಕೇಳಿದಾಗ ಯೇಸುವಿಗೆ ಆಶ್ಚರ್ಯವಾಯಿತು. ತಮ್ಮ ಹಿಂದೆ ಬರುತ್ತಿದ್ದ ಜನರ ಗುಂಪಿನ ಕಡೆ ತಿರುಗಿನೋಡಿ, “ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಅವನು ಸಮೃದ್ಧನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ.


ದಾರಿಯ ಪಕ್ಕದಲ್ಲಿ ಒಂದು ಅಂಜೂರದ ಮರ ಕಣ್ಣಿಗೆ ಬಿದ್ದಿತು. ಹತ್ತಿರಕ್ಕೆ ಹೋಗಿ ನೋಡುವಾಗ ಅದರಲ್ಲಿ ಬರೀ ಎಲೆಗಳೇ ಹೊರತು ಮತ್ತೇನೂ ಕಾಣಲಿಲ್ಲ. ಯೇಸು ಆ ಮರಕ್ಕೆ, “ಇನ್ನು ಮುಂದೆ ನೀನೆಂದಿಗೂ ಹಣ್ಣುಬಿಡದಂತಾಗಲಿ,” ಎಂದರು. ಅದೇ ಕ್ಷಣದಲ್ಲಿ ಆ ಮರ ಒಣಗಿಹೋಯಿತು.


ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.


ತಮ್ಮ ಮಾತನ್ನು ಮುಂದುವರೆಸುತ್ತಾ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು