Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:1 - ಕನ್ನಡ ಸತ್ಯವೇದವು C.L. Bible (BSI)

1 “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಹಟ್ಟಿಗೆ ಬಾಗಿಲ ಮೂಲಕ ಬರದೆ ಗೋಡೆ ಹತ್ತಿಬರುವವನು ಕಳ್ಳ ಹಾಗೂ ಕೊಳ್ಳೆಗಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಹಟ್ಟಿಯೊಳಗೆ ಬಾಗಿಲಿನಿಂದ ಬಾರದೆ, ಬೇರೆ ಕಡೆಯಿಂದ ಹತ್ತಿ ಬರುವವನು ಕಳ್ಳನೂ, ದರೋಡೆಕೋರನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರೀಹಟ್ಟಿಯೊಳಗೆ ಬಾಗಲಿಂದ ಬಾರದೆ ಮತ್ತೆಲ್ಲಿಂದಾದರೂ ಹತ್ತಿಬರುವವನು ಕಳ್ಳನೂ ಸುಲುಕೊಳ್ಳುವವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ಕುರಿಹಟ್ಟಿಯೊಳಗೆ ಪ್ರವೇಶಿಸುವಾಗ ಬಾಗಿಲಿನ ಮೂಲಕ ಪ್ರವೇಶಿಸಬೇಕು. ಮತ್ತೆಲ್ಲಿಂದಾದರೂ ಹತ್ತಿ ಬರುವವನು ಸುಲಿಗೆಗಾರನಾಗಿದ್ದಾನೆ; ಕುರಿಗಳನ್ನು ಕದ್ದುಕೊಳ್ಳಲು ಪ್ರಯತ್ನಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಬಾಗಿಲಿನಿಂದ ಕುರಿಹಟ್ಟಿಯೊಳಗೆ ಬಾರದೆ ಬೇರೆ ಎಲ್ಲಿಂದಾದರೂ ಒಳಗೆ ಬರುವವನು ಕಳ್ಳನೂ ದರೋಡೆಕೋರನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜುನ್ ಅಶೆ ಮಟ್ಲ್ಯಾನ್, “ಮಿಯಾ ತುಮ್ಕಾ ಖರೆಚ್! ಸಾಂಗ್ತಾ ಬಕ್ರ್ಯಾಂಚ್ಯಾ ಗೊಟ್ಯಾತ್ ಜೆ ಕೊನ್ ದಾರಾತ್ನಾ ಭುತ್ತುರ್ ಗುಸಿನಾ, ವೈನಾ ಚೆಡುನ್ ದುಸ್ರ್ಯಾಕ್ನಾಚ್ ಭುತ್ತುರ್ ಗುಸ್ತಾ ತೊ ಚೊರ್ ಅನಿ ಲುಟುನ್ ಘೆವ್ನ್ ಜಾತಲೊ ಮಾನುಸ್ ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:1
28 ತಿಳಿವುಗಳ ಹೋಲಿಕೆ  

“ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.


ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.


ಅಲ್ಲದೆ, ಪ್ರಧಾನಯಾಜಕನೆಂಬ ಗೌರವಪದವಿಯನ್ನು ತನ್ನಷ್ಟಕ್ಕೆ ತಾನೇ ಯಾರೂ ವಹಿಸಿಕೊಳ್ಳರು. ಆರೋನನಂತೆ ಅವರೂ ದೇವರಿಂದ ಕರೆ ಹೊಂದಿದವರಾಗಿರಬೇಕು.


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ಇಸ್ರಯೇಲ್ ಜನರಲ್ಲೇ ಕಪಟ ಪ್ರವಾದಿಗಳು ಕಾಣಿಸಿಕೊಂಡರು. ಅಂತೆಯೇ, ನಿಮ್ಮಲ್ಲೂ ಸುಳ್ಳುಬೋಧಕರು ಕಾಣಿಸಿಕೊಳ್ಳುವರು. ಹಾನಿಕರವಾದ ದುರ್ಬೋಧನೆಗಳನ್ನು ಗೋಪ್ಯವಾಗಿ ಪ್ರಸರಿಸುವರು. ಒತ್ತೆಯಿಟ್ಟು ತಮ್ಮನ್ನು ರಕ್ಷಿಸಿದ ಒಡೆಯನನ್ನೇ ಅರಿಯೆವೆಂದು ನಿರಾಕರಿಸುವರು. ಹೀಗೆ ತಮ್ಮ ವಿನಾಶವನ್ನು ತಾವೇ ಬೇಗನೆ ಬರಮಾಡಿಕೊಳ್ಳುವರು.


ಈ ಜೀವೋದ್ಧಾರವನ್ನು ಕುರಿತೇ ಪ್ರವಾದಿಗಳು ಸೂಕ್ಷ್ಮವಾಗಿ ವಿಚಾರಿಸಿ ಸಂಶೋಧನೆ ನಡೆಸಿದರು. ದೇವರು ನಿಮಗೆ ಕೊಡಲಿದ್ದ ಈ ವರವನ್ನು ಕುರಿತೇ ಅವರು ಪ್ರವಾದಿಸಿದರು.


ಸುಳ್ಳು ಕನಸುಗಳನ್ನು ಪ್ರಕಟಿಸುತ್ತಾ ಹಾಗು ವಿವರಿಸುತ್ತಾ ತಮ್ಮ ಅಬದ್ಧ ಮಾತುಗಳಿಂದಲೂ ಕಚ್ಚಾಟದಿಂದಲೂ ನನ್ನ ಜನರಿಗೆ ದಾರಿ ತಪ್ಪಿಸುವ ಪ್ರವಾದಿಗಳನ್ನು ನಾನು ಖಂಡಿಸುತ್ತೇನೆ. ನಾನು ಅವರನ್ನು ಕಳುಹಿಸಲಿಲ್ಲ, ಅಥವಾ ಅವರಿಗೆ ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಇಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ಬೋಧಿಸುವವರನ್ನು ಕಳುಹಿಸದೆಹೋದರೆ, ಅವರು ಶುಭಸಂದೇಶವನ್ನು ಬೋಧಿಸುವುದಾದರೂ ಹೇಗೆ? “ಶುಭಸಂದೇಶವನ್ನು ತರುವವರ ಬರುವಿಕೆ ಎಷ್ಟೋ ಶುಭದಾಯಕ,” ಎಂದು ಪವಿತ್ರಗ್ರಂಥದಲ್ಲೇ ಬರೆಯಲಾಗಿದೆ.


ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು.


ಸರ್ವೇಶ್ವರ: “ಈ ಪ್ರವಾದಿಗಳನ್ನು ಕಳುಹಿಸಿದವನು ನಾನಲ್ಲ; ತಾವೇ ಓಡೋಡಿ ಬಂದಿದ್ದಾರೆ. ನಾನು ಇವರಿಗೆ ಏನೂ ಹೇಳಲಿಲ್ಲ; ತಾವೇ ಪ್ರವಾದನೆ ಮಾಡುತ್ತಿದ್ದಾರೆ.


ಇವರ ಬಾಯಿ ಮುಚ್ಚಿಸಬೇಕಾಗಿದೆ. ಏಕೆಂದರೆ, ಇವರು ಹಣಸಂಪಾದನೆಯ ದುರುದ್ದೇಶದಿಂದ ಮಾಡಬಾರದ ಬೋಧನೆಯನ್ನು ಮಾಡಿ ಅನೇಕ ಕುಟುಂಬಗಳನ್ನು ಹಾಳುಮಾಡುತ್ತಿದ್ದಾರೆ.


ಆದುದರಿಂದ ನನ್ನ ಅಪ್ಪಣೆಯಿಲ್ಲದೆ, ನನ್ನ ಹೆಸರೆತ್ತಿ, ಪ್ರವಾದನೆ ಮಾಡುತ್ತಾ ಖಡ್ಗವಾಗಲಿ, ಕ್ಷಾಮವಾಗಲಿ ಈ ನಾಡಿಗೆ ಬರುವುದಿಲ್ಲ ಎಂದು ಬೋಧಿಸುತ್ತಿದ್ದಾರಲ್ಲವೆ? ಆ ಪ್ರವಾದಿಗಳ ವಿಷಯದಲ್ಲಿ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ - ಖಡ್ಗದಿಂದಲೆ, ಕ್ಷಾಮದಿಂದಲೆ ಆ ಪ್ರವಾದಿಗಳು ನಾಶವಾಗುವರು.


ಪಟ್ಟಣಗಳ ಮೇಲೆ ಹಾರಾಡುತ್ತವೆ, ಗೋಡೆಗಳ ಮೇಲೆ ಓಡಾಡುತ್ತವೆ, ಮನೆಗಳನ್ನು ಹತ್ತಿ, ಕಳ್ಳರಂತೆ ಕಿಟಕಿಗಳಲ್ಲಿ ನುಗ್ಗುತ್ತವೆ.


ಆದುದರಿಂದ ಯೇಸು ಸ್ವಾಮಿ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಗಳಿಗೆ ನಾನೇ ಬಾಗಿಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು